Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ವಿಜ್ಞಾನ ದಿನದಂದು ಸಿ ವಿ ರಾಮನ್ ನೆನಪು

ಸಿ.ವಿ.ರಾಮನ್ ಅವರಿಗೆ ನೊಬೆಲ್ ಪ್ರಶಸ್ತಿ ಬಂದು ಎಪ್ಪತ್ತೇಳು ವರ್ಷಗಳು ಉರುಳಿ ಹೋಗಿವೆ. ಆದರೆ ವಿಜ್ಞಾನಕ್ಕೆ ಸಂಬಂಧಿಸಿದಂತೆ ಇನ್ನೊಂದು ನೊಬೆಲ್ ಪ್ರಶಸ್ತಿ ಭಾರತೀಯ ಪ್ರಜೆ  ಪಡೆದಿಲ್ಲ ಎಂದಾಗ ಮನಸ್ಸು ಭಾರವಾಗುತ್ತದೆ.

Read More

ಕೊಟ್ಟರೆ ಕೊಡು ಶಿವನೇ ಆಸ್ಕರ್ ನಂಥ ವರವ

ಇಂದಿನದು ಡಿಜಿಟಲ್ ಯುಗ. ಹೊಸ ಹೊಸ ತಂತ್ರ ವಿನ್ಯಾಸಗಳು ಚಲನಚಿತ್ರರಂಗಕ್ಕೆ ಬಂದಿವೆ ಮತ್ತು ಬರುತ್ತಿವೆ. ಭಾರತೀಯ ಚಲನಚಿತ್ರರಂಗ ಇಂದು ಹಿಂದೆಂದಿಗಿಂತಲೂ ಇವುಗಳಿಗೆ ಹೆಚ್ಚು ಹೆಚ್ಚು ತೆರೆದುಕೊಳ್ಳತೊಡಗಿದೆ – ಜಾಹೀರಾತು ಮಾರುಕಟ್ಟೆಗೆ ಅನುಗುಣವಾಗಿ.

Read More

ಸ್ಟೀಫನ್ ಹಾಕಿಂಗ್: ಗಾಲಿ ಕುರ್ಚಿಯಿಂದ ಅನಂತ ವ್ಯೋಮದತ್ತ

ಇವರು ಪರಿಶುದ್ಧ ನಾಸ್ತಿಕರು. ದೇವರ ಬಗ್ಗೆ ಒಂದೆಡೆ ಹೇಳುತ್ತಾರೆ “ಕೋಟ್ಯಾಂತರ ಬ್ರಹ್ಮಾ೦ಡಗಳಲ್ಲಿ ಸಾಮಾನ್ಯವಾದ ನಮ್ಮ ಆಕಾಶಗಂಗೆಯ ಒಂದು ಅಂಚಿನಲ್ಲಿರುವ ಸಾಮಾನ್ಯ ನಕ್ಷತ್ರದ ಸುತ್ತ ಪರಿಭ್ರಮಿಸುತ್ತಿರುವ ಅತಿ ಸಮಾನ್ಯ ಗ್ರಹವೊ೦ದರ ಮೇಲಿರುವ ಕ್ಷುಲ್ಲಕರು ನಾವು.

Read More

ಪುತ್ತೂರಿನಲ್ಲಿ ಕಂಡ ಶಂಭು ಹೆಗಡೆ

ಅಂದಿನ ಯಕ್ಷಗಾನ ಪ್ರಸಂಗ ಈಗಲೂ – ತೀರ ನಿನ್ನೆ ನೋಡಿದಂತೆ – ನೆನಪಿದೆ. ಪ್ರಚಂಡ ವಿಶ್ವಾಮಿತ್ರ ಮತ್ತು ಉತ್ತರನ ಪೌರುಷ. ಶಿವರಾಮ ಹೆಗಡೆಯವರ ವಸಿಷ್ಠ, ಮಹಾಬಲ ಹೆಗಡೆಯವರ ವಿಶ್ವಾಮಿತ್ರ, ಗಜಾನನ ಹೆಗಡೆಯವರ ಮೇನಕೆ, ಗೋಡೆ ನಾರಾಯಣ ಹೆಗಡೆಯವರ ತ್ರಿಶಂಕು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ