Advertisement

ಕ್ಷಮಾ ವಿ. ಭಾನುಪ್ರಕಾಶ್

ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ

ನಾಲ್ಕು ದಶಕಗಳ ಹಿಂದೆ ತನ್ನ ನಲವತ್ತೆರಡನೆಯ ವಯಸ್ಸಿನಲ್ಲಿ ಬರೆಯಲು ಶುರು ಮಾಡಿದ ಸಾರಾ ಅಬೂಬಕ್ಕರ್ ಕನ್ನಡಕ್ಕೆ ಸಂಭವಿಸಿದ ಒಂದು ಅಚ್ಚರಿ. ಬಹುಶಃ ಕನ್ನಡಕ್ಕೆ ಸಂಭವಿಸಿದ ಇನ್ನೊಂದು ಅಚ್ಚರಿಯಾದ ಪಿ. ಲಂಕೇಶರು ಇಲ್ಲದಿದ್ದರೆ ಸಾರಾ ಕನ್ನಡದಲ್ಲಿ ಬರೆಯುತ್ತಲೇ ಇರಲಿಲ್ಲವೇನೋ.ಸುಮಾರು ಮೂವತ್ತು  ವರ್ಷಗಳ ಹಿಂದೆ ಆಗ ಇನ್ನೂ ಮೂವತ್ತರ ಹರೆಯದ ತರುಣನಾಗಿದ್ದ ಕನ್ನಡದ ಕಥೆಗಾರ ಅಬ್ದುಲ್ ರಶೀದ್ ಲಂಕೇಶ್ ಪತ್ರಿಕೆಗಾಗಿ ಸಾರಾ ಅವರೊಡನೆ ನಡೆಸಿದ್ದ ಮಾತುಕತೆಯ ಪಠ್ಯ ಇಲ್ಲಿದೆ

Read More

ಕೋಲಾರದಲ್ಲಿ ಕಂಡ ‘ಕಾಮರೂಪಿ

‘ಅಯ್ಯೋ ನನ್ನ ಇಂಟರ್ನೆಟ್ ಹಾಳಾಗಿ ಹೋಗಿದೆ. ನಿನ್ನಂತಹ ಖಳರೊಡನೆ ಸಂಪರ್ಕಿಸಲು ಇದ್ದ ಈ ಭೂಲೋಕದ ಇದೊಂದು ಕೊಂಡಿಯೂ ಹೊರಟು ಹೋಗಿದೆ’ ಎಂದು ಪರದಾಡುತ್ತಿರುವ ಮಗುವಿನಂತಹ ಹಿರಿಯ ಲೇಖಕ ಕಾಮರೂಪಿ. `ತಡೀರಿ ಸಾರ್ ನಾನೂ ಒಂದು ಕೈ ನೋಡಿಯೇ ಬಿಡುತ್ತೇನೆ’ ಎಂದು ಕಲಿತ ವಿದ್ಯೆಯನ್ನೆಲ್ಲ ಬಳಸಿ ಇಂಟರ್ನೆಟ್ ಸರಿ ಮಾಡಲು ನೋಡಿದೆ. ಆಗಲಿಲ್ಲ. ನೋಡಿದರೆ ಫೋನೇ ಸತ್ತು ಹೋಗಿತ್ತು.

Read More

ಏಳು ಪುಣ್ಯದ ಕೆರೆಗಳನ್ನು ಕೊಟ್ಟವರು ತೀರಿಹೋದರು

ನೋಡಲು ಬಿಕಾರಿಯಂತೆ ತೋರುವ ಆದರೆ ಮಾತನಾಡಲು ತೊಡಗಿದರೆ ಸಂತನಂತೆ ಕಾಣುವ ಕಾಮೇಗೌಡರು ಒಣ ಪ್ರದೇಶವಾದ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದ ಪಾದದಲ್ಲಿ ಕೈಯ್ಯಾರೆ ತೋಡಿರುವ ಈ ಏಳು ಕೆರೆಗಳು ಕರ್ಮಯೋಗಿಯೊಬ್ಬ ನಲವತ್ತು ವರ್ಷಗಳಿಂದ ನಡೆಸಿರುವ ಕಾಯಕದಂತೆ ಬೆಳಗುತ್ತಿವೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ತಾವು ಕಟ್ಟಿದ ಹದಿನಾರು ಕೆರೆಗಳನ್ನು ಇಲ್ಲೇ ಬಿಟ್ಟು ತಾವು ಮಾತ್ರ ಇಂದು ಬೆಳಗ್ಗೆ ತೀರಿಹೋದರು. ಅವರ ಕುರಿತು ಅಬ್ದುಲ್ ರಶೀದ್ ಬರೆದಿದ್ದ ವ್ಯಕ್ತಿಚಿತ್ರ ನಿಮ್ಮ ಓದಿಗೆ

Read More

ಸಂಧ್ಯಾರಾಣಿ ಸಿನಿ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

ಕಣ್ಣು ಮುಚ್ಚಿಕೊಂಡು ಓದುವ ಹಾಗಿದ್ದರೆ ಸಿನೆಮಾ ನೋಡಬೇಕಾಗಿಲ್ಲ ಅನ್ನುವಷ್ಟು ಕಣ್ಣಿಗೆ ಕಟ್ಟುವ ಬರವಣಿಗೆಗಳು ಅವು. ಬರೀ ಕಣ್ಣಿಗೆ ಮಾತ್ರವಲ್ಲ. ಸಿನೆಮಾದ ಸದ್ದುಗಳನ್ನು ಕಿವಿಗೆ, ಭಾವಗಳನ್ನು ಮನಸ್ಸಿಗೆ, ಕ್ಯಾಮರಾದ ಕೋನಗಳನ್ನು ಮಿದುಳಿಗೆ ಮತ್ತು ಸಿನೆಮಾ ಕೊನೆಗೆ ಉಂಟುಮಾಡುವ ತರ್ಕಗಳನ್ನು ವೈಚಾರಿಕತೆಗೆ ಅಕ್ಷರಗಳಲ್ಲೇ ದಾಟಿಸಿಬಿಡುತ್ತಿದ್ದರು. ಎಲ್ಲೂ ತರ್ಕಗಳಿಲ್ಲ, ತಪ್ಪುವ ಎಳೆಗಳಿಲ್ಲ. ಸಿನೆಮಾ ಹೇಳುವುದನ್ನು ಪರದೆ ಎಳೆದ ಹಾಗೆ ಕ್ವಚಿತ್ತಾಗಿ ಹೇಳಿ ಮುಗಿಸಿ ಮುಂದಿನ ಹದಿನೈದು ದಿನಗಳಿಗಾಗಿ ಕಾಯುವಂತೆ ಮಾಡುತ್ತಿದ್ದರು. ಸಂಪಾದಕನೂ, ಓದುಗರೂ ಏಕಪ್ರಕಾರವಾಗಿ ಕಾಯುತ್ತಿದ್ದ ಕೆಲವೇ ಬರವಣಿಗೆಗಳಲ್ಲಿ ಸಂಧ್ಯಾರಾಣಿ ಅವರದ್ದೂ ಒಂದಾಗಿತ್ತು.
ಎನ್. ಸಂಧ್ಯಾರಾಣಿ ಬರೆದ ‘ಸಿನಿ ಮಾಯಾಲೋಕ’ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ