Advertisement

ಉಮಾರಾವ್

ಸಂಧ್ಯಾರಾಣಿ ಸಿನಿ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

ಕಣ್ಣು ಮುಚ್ಚಿಕೊಂಡು ಓದುವ ಹಾಗಿದ್ದರೆ ಸಿನೆಮಾ ನೋಡಬೇಕಾಗಿಲ್ಲ ಅನ್ನುವಷ್ಟು ಕಣ್ಣಿಗೆ ಕಟ್ಟುವ ಬರವಣಿಗೆಗಳು ಅವು. ಬರೀ ಕಣ್ಣಿಗೆ ಮಾತ್ರವಲ್ಲ. ಸಿನೆಮಾದ ಸದ್ದುಗಳನ್ನು ಕಿವಿಗೆ, ಭಾವಗಳನ್ನು ಮನಸ್ಸಿಗೆ, ಕ್ಯಾಮರಾದ ಕೋನಗಳನ್ನು ಮಿದುಳಿಗೆ ಮತ್ತು ಸಿನೆಮಾ ಕೊನೆಗೆ ಉಂಟುಮಾಡುವ ತರ್ಕಗಳನ್ನು ವೈಚಾರಿಕತೆಗೆ ಅಕ್ಷರಗಳಲ್ಲೇ ದಾಟಿಸಿಬಿಡುತ್ತಿದ್ದರು. ಎಲ್ಲೂ ತರ್ಕಗಳಿಲ್ಲ, ತಪ್ಪುವ ಎಳೆಗಳಿಲ್ಲ. ಸಿನೆಮಾ ಹೇಳುವುದನ್ನು ಪರದೆ ಎಳೆದ ಹಾಗೆ ಕ್ವಚಿತ್ತಾಗಿ ಹೇಳಿ ಮುಗಿಸಿ ಮುಂದಿನ ಹದಿನೈದು ದಿನಗಳಿಗಾಗಿ ಕಾಯುವಂತೆ ಮಾಡುತ್ತಿದ್ದರು. ಸಂಪಾದಕನೂ, ಓದುಗರೂ ಏಕಪ್ರಕಾರವಾಗಿ ಕಾಯುತ್ತಿದ್ದ ಕೆಲವೇ ಬರವಣಿಗೆಗಳಲ್ಲಿ ಸಂಧ್ಯಾರಾಣಿ ಅವರದ್ದೂ ಒಂದಾಗಿತ್ತು.
ಎನ್. ಸಂಧ್ಯಾರಾಣಿ ಬರೆದ ‘ಸಿನಿ ಮಾಯಾಲೋಕ’ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”

Read More

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ