ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
“ನಿದ್ರೆಯನ್ನು
ತಿಂದು
ಕತ್ತಲೆಯನ್ನುಟ್ಟ
ಸುಂದರಿ
ಇಲ್ಲೇ ಎಲ್ಲೋ
ಕುಂತು
ಕಳೆದ ದಿನಗಳ
ಲೆಕ್ಕವಿಡುತ್ತಿದ್ದಾಳೆ”-ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
Posted by ಅಭಿಷೇಕ್ ವೈ.ಎಸ್. | Dec 23, 2025 | ದಿನದ ಕವಿತೆ |
“ನಿದ್ರೆಯನ್ನು
ತಿಂದು
ಕತ್ತಲೆಯನ್ನುಟ್ಟ
ಸುಂದರಿ
ಇಲ್ಲೇ ಎಲ್ಲೋ
ಕುಂತು
ಕಳೆದ ದಿನಗಳ
ಲೆಕ್ಕವಿಡುತ್ತಿದ್ದಾಳೆ”-ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
Posted by ಅಭಿಷೇಕ್ ವೈ.ಎಸ್. | Apr 3, 2023 | ಅಂಕಣ |
ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ
Read MorePosted by ಅಭಿಷೇಕ್ ವೈ.ಎಸ್. | Feb 20, 2023 | ಅಂಕಣ |
ದಾರಿ ತಪ್ಪಬಾರದೆಂದು ರೈಲು ಹಳಿಯ ಹಿಡಿದು ಹೊರಟ ಮುಗ್ಧ ಜನಗಳು ದೇಶದೆಲ್ಲೆಡೆ ಸಾರ್ವಜನಿಕ ಸಮಚಾರ ನಿರ್ಬಂಧವಾಗಿರುವಾಗ ಈ ಹಳಿಯಮೇಲೆ ಒಂದಿಷ್ಟು ಹೊತ್ತು ವಿರಮಿಸೋಣವೆಂದು ಮಲಗಿರುತ್ತಾರೆ. ದುರಾದೃಷ್ಟವಶಾತ್ ಗೂಡ್ಸ್ ರೈಲು ಹರಿದು ಹಳಿಯ ಮೇಲೆ ಮಲಗಿದ್ದವರು ಶವಗಳಾಗುತ್ತಾರೆ. ಅವರ ಪಕ್ಕವೇ ಬಿದ್ದಿದ್ದ ರೊಟ್ಟಿ ಚೂರುಗಳು, ರಕ್ತಸಿಕ್ತ ಮಾಂಸದ ತುಂಡುಗಳಾದ ಅಮಾಯಕ ಹೆಂಗಸರು ಮಕ್ಕಳು ಇಡೀ ದೇಶವನ್ನು ಮರುಗುವಂತೆ ಮಾಡುತ್ತವೆ.
ಅಭಿಷೇಕ್ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿಯವರ “ಕೊರೊನಾ” ಕವನ ಸಂಕಲನದ ಕುರಿತ ಬರಹ ಇಲ್ಲಿದೆ
Posted by ಅಭಿಷೇಕ್ ವೈ.ಎಸ್. | Feb 6, 2023 | ಅಂಕಣ |
‘ತಲೆಮಾರು’ ಕವಿತೆಯಲ್ಲಿನ ‘ಮೂಕಹಕ್ಕಿ’ ಪೂರ್ವಜರನ್ನು ಕುರಿತ ಕವಿತೆಯೆನ್ನಲು ಅನೇಕ ಪುರಾವೆಗಳು ಸಿಗುತ್ತವೆ. ಆಧುನಿಕತೆ ಮತ್ತು ಗತಕಾಲದ ಪಳೆಯುಳಿಕೆಗಳ ನಡುವೆ ತಣ್ಣನೆಯ ಪ್ರತಿರೋಧವನ್ನು ಇಲ್ಲಿ ಗಮನಿಸಬಹುದಾಗಿದೆ. ಅವ್ವನ ತಾಯ್ತನದ ಕುರಿತು ‘ಮೀಯುವುದೆಂದರೆ ಚೈತನ್ಯಗಳ ಹುಟ್ಟು’ ಕವಿತೆಯಲ್ಲಿ ಆಪ್ತ ದಾಟಿಯಲ್ಲಿ ಬರೆಯುವ ಕವಯತ್ರಿಗೆ ಇಲ್ಲಿ ಬಾಲ್ಯದ ನೆನಪು ಮರುಕಳಿಸಿದೆ. ‘ಮಿಂದಾಗಲೆಲ್ಲ ಅವ್ವನದು ಶೀತದ ಚಡಪಡಿಕೆ’ ಎನ್ನುವಲ್ಲಿ ಅವ್ವನ ಕಾಳಜಿಯೊಂದಿಗೆ ಆಕೆಯ ಜವಾಬ್ದಾರಿಯನ್ನು ಕಂಡು ಮರುಗಲೇಬೇಕಾಗುತ್ತದೆ.
ಅಭಿಷೇಕ್ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ
Posted by ಅಭಿಷೇಕ್ ವೈ.ಎಸ್. | Jan 23, 2023 | ಅಂಕಣ |
‘ತುಂಬೆಗಿಡ ಮತ್ತು ಹುಡುಗಿ’ ಸತ್ತು ಮಣ್ಣಾದ ಹುಡುಗಿಯೊಬ್ಬಳ ಸಮಾಧಿಮೇಲೆ ನೆಟ್ಟ ತುಂಬೆ ಗಿಡದ ವಿಷಯವಿರುವ ಕವಿತೆ. ಬದುಕಿನ ಉತ್ತರಗಳ ಹಂಗು ಹುಡುಗಿಗೂ, ತುಂಬೆಗಿಡಕ್ಕೂ ಇಲ್ಲ. ಬದುಕಿನ ನಶ್ವರತೆಗಳು, ಹುಟ್ಟು, ಸಾವಿನ ಕುರಿತು ಏಳುವ ಜಿಜ್ಞಾಸೆಗಳು ಕವಯತ್ರಿಯ ಭಾವಾತ್ಮಕತೆಯ ತೀವ್ರತರ ಹುಡುಕಾಟವನ್ನು ದರ್ಶಿಸುತ್ತವೆ. ‘ನೀನೆ ಒಂದು ಅಪೂರ್ಣ ಚಿತ್ರ’ ಕವಿತೆಯೂ ಬದುಕಿನ ಎಲ್ಲಾ ಕ್ಷಣಗಳಿಗೆ ಮುಖಾಮುಖಿಯಾಗಿ ಮುಪ್ಪಿನಲ್ಲಿ ಹಿಂದಿನ ಪುಟಗಳನ್ನು ತಿರುವಿಹಾಕುವ ವ್ಯಕ್ತಿಯೊಬ್ಬನ ಕುರಿತು ಬರೆದ ಕವಿತೆ.
ಅಭಿಷೇಕ್ ವೈ.ಎಸ್. ಬರೆಯುವ ಅಂಕಣ “ಕಾವ್ಯದ ಹೊಸ ಕಾಲ”
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
