ಆನಂದ ಭೋವಿ ಬರೆದ ಈ ಭಾನುವಾರದ ಕತೆ
ಅದ್ಯಾವ ಪುಣ್ಯಾತಗಿತ್ತಿ ಅಬ್ಬರಿಸಿದಳೋ ಗೊತ್ತಿಲ್ಲ “ಯಲ್ಲವ್ವ ಬಂಗಾರದ ಮಳೆ ಹರಸಾಕತ್ತಾಳ ಯಾರಿಗೆ ಸಿಗತೈತಿ ಅವರ ಬಾಳು ಬಂಗಾರ ಆಗತೈತಿ” ಇದೊಂದು ಮಾತು ಬರಸಿಡಿಲು ಬಡಿದಂಗ ಆತು. ಸೀಟಿನ ಚಿಂತ್ಯಾಗ ಮುಕರಿಬಿದ್ದಿದ್ದ ಮಂದಿ ಹುಯ್ಯಂತ ಮ್ಯಾಲಕ್ಕೆತ್ತು. ಅವಳು ಇವಳು ಯಾರಿಗೂ ಯಾರು ಕಾಣಲಿಲ್ಲ. ಹಾರಾಡಿ ಬೀಳುತ್ತಿದ್ದ ಸರದ ಗುಂಡು ಆರಿಸಲಿಕ್ಕ ಮುಗಿಬಿದ್ದರು. ಅವರ ಮ್ಯಾಲ ಇವರು ಇವರ ಮ್ಯಾಲ ಅವರು ನೋಡ ನೋಡುವದ್ರೊಳಗ ಕಾಲ್ತುಳಿದ ಗದ್ದಲ ಬಸ್ಸನ್ನು ನುಂಗಿಕೊಂಡಿತು. ಬಿಸಲಿನ ಜಳದೊಳಗ ರಕ್ತದ ವಾಸನೆ ಬಡಿಯತೊಡಗಿತು.
ಆನಂದ ಭೋವಿ ಬರೆದ ಈ ಭಾನುವಾರದ ಕತೆ “ದೇವರಿಗೂ ಒಂದು ಟಿಕಿಟು”