Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಪ್ರೀತಿಯೆಂಬ ಭಾವ ಮಾತ್ರ ಸ್ಥಾಯಿಯಾಗಲಿ…: ಆಶಾ ಜಗದೀಶ್ ಅಂಕಣ

ನಂತರದ ನಾಲ್ಕೈದು ದಿನಗಳು ನಿತ್ಯದ ನಿಯತಿಯಲ್ಲಿಯೇ ಕಳೆದವು. ಅವಳು ನಮ್ಮಲ್ಲೇ ಒಬ್ಬಳಂತಾಗಿ ಹೋಗಿದ್ದಳು. ಯಾವ ಜನ್ಮದ ಋಣವೋ ಎಂಬಂತೆ. ಪ್ರತಿ ನಿತ್ಯ ಅವಳನ್ನು, ಅವಳ ಮಕ್ಕಳನ್ನು ನೋಡುವುದು ಅಭ್ಯಾಸವಾಯಿತು. ಇವತ್ತೂ ಎಂದಿನಂತೆಯೇ ಕೋಣೆಯ ಒಳ ಹೋಗಿ ಬಗ್ಗಿ ನೋಡಿದೆ. ಅವಳಾಗಲೀ ಅವಳ ಒಂದೇ ಒಂದು ಕೂಸೇ ಆಗಲೀ ಎಲ್ಲಿಯೂ ಕಾಣಲಿಲ್ಲ… ಮನಸು ಮುದುಡಿ ಕಣ್ಣುಗಳು ತುಂಬಿಕೊಂಡವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಹರಿಸಲಾರದ ಸಮುದ್ರವಿದೆ ಅವನಲ್ಲೂ..: ಆಶಾ ಜಗದೀಶ್ ಅಂಕಣ

ಇಷ್ಟೆಲ್ಲ ಗೊಂದಲ, ಪ್ರಶ್ನೆಗಳ ನಡುವೆಯೂ ನಾನೇಕೆ ಪತಿಪೂಜೆ ಮಾಡುತ್ತೇನೆ ಎಂದರೆ ಅದು ಧಾರ್ಮಿಕ ಕಟ್ಟಳೆಯಲ್ಲ ಅದು ಹೃದಯದ ನಿವೇದನೆ. ನನ್ನವನೆದುರು ನನ್ನ ಪ್ರೀತಿಯನ್ನು ತೋರಿಸಿಕೊಳ್ಳುವ ಒಂದು ವಿಧಾನ. ನಾವು ಹೆಣ್ಣುಮಕ್ಕಳಿಗೆ ಇಂತಹ ಹಲವಾರು ದಾರಿಗಳಿವೆ. ನಾವು ಯಾವುದನ್ನೂ ಮುಚ್ಚಿಟ್ಟುಕೊಳ್ಳಲಾರೆವು. ಕೋಪ, ಅಸಹನೆ, ನೋವು, ನಗು, ಅಳು… ಎಲ್ಲವನ್ನೂ ತೋರಿಸಿಕೊಂಡುಬಿಡುತ್ತೇವೆ. ಆದರೆ ಗಂಡಿಗೆ ಹಾಗಲ್ಲ. ಅವನು ತನ್ನ ನೋವನ್ನಾಗಲೀ, ಅಳುವನ್ನಾಗಲೀ, ಕಣ್ಣೀರನ್ನಾಗಲೀ ತೋರಿಸುವಂತೆಯೇ ಇಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಪ್ರೀತಿಯ ಅರ್ಥವಾದರೂ ಏನು ಹೇಳು?: ಆಶಾ ಜಗದೀಶ್ ಅಂಕಣ

ಏನೆಲ್ಲಾ ನಮ್ಮ ಆಕಾಂಕ್ಷೆಗಳನ್ನು ನಮ್ಮ ಮಕ್ಕಳ ತಲೆ ಮೇಲೆ ಹೇರಿ ಬೆಳೆಸುತ್ತಾ ಹೋಗುತ್ತೇವೆ. ಆದರೆ ಮುಖ್ಯವಾಗಿ ಏನನ್ನು ಕಲಿಸಬೇಕಿತ್ತೋ ಅದನ್ನೇ ಕಲಿಸದೆ ಹೋಗುತ್ತೇವೆ. ನಾವು ಕಲಿಸಲೇ ಬೇಕಾದದ್ದು ಎನ್ನುವ ಎಷ್ಟೋ ಇದೆ. ನಮ್ಮನ್ನು ಜೋಪಾನ ಮಾಡುವ ಅದಷ್ಟೋ ಗುಣಗಳಿವೆ. ಒಬ್ಬರನ್ನು ನಿಷ್ಕಲ್ಮಷವಾಗಿ ಇಷ್ಟಪಡುವುದನ್ನು, ಪ್ರೀತಿಸುವುದನ್ನು ಕಲಿಸುವುದೇ ಇಲ್ಲ ಯಾಕೆ… ಹುಟ್ಟಂದಿನಿಂದ ಬಂದ ಮುಗ್ಧತೆಯನ್ನ ಕೊಂದು ಅಲ್ಲಿ ಸ್ವಾರ್ಥ ಮತ್ತು ಲೋಭವನ್ನ ಮಾತ್ರ ತುಂಬಿ ನೀರೆರೆದು ಬೆಳೆಸುತ್ತಾ ಹೋಗುತ್ತೇವೆ ಯಾಕೆ…
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಒಂದು ಸುಳ್ಳು ಒಂದು ಸತ್ಯ: ಆಶಾ ಜಗದೀಶ್ ಅಂಕಣ

ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ