Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ನಾವು ಅದೆಷ್ಟು ತೀವ್ರವಾಗಿ ಅತ್ತಿದ್ದೇವೆ, ಒಬ್ಬರನ್ನೊಬ್ಬರು ಹಂಬಲಿಸಿದ್ದೇವೆ, ಬಿಟ್ಟು ಬದುಕಲು ಸಾಧ್ಯವೇ ಇಲ್ಲ ಎನಿಸುವಷ್ಟು ಹಚ್ಚಿಕೊಂಡಿದ್ದೇವೆ. ಜೊತೆಯಲ್ಲಿರುವಂತೆ ಭ್ರಮಿಸಿದ್ದೇವೆ. ಭ್ರಮೆಯಿಂದ ತಿಳಿದೆದ್ದು ವಿಹ್ವಲಗೊಂಡಿದ್ದೇವೆ. ಅದೊಂದು ದಿನ ನಡುರಾತ್ರಿ, ಒಂದು ಕನಸು ಅರಳತೊಡಗಿತ್ತು; ನೈಜವೆನಿಸುವಷ್ಟೇ ಸಹಜವಾಗಿ. ನಾವಿಬ್ಬರೂ ಎರೆಡು ಪುಟ್ಟ ಗಿಳಿಗಳಂತೆ ಒಟ್ಟೊಟ್ಟಾಗಿ ಒತ್ತಿಕೊಂಡು ಕೂತು, ನಿಂತು, ಮಲಗಿ ಆಟವಾಡುತ್ತಿದ್ದೆವು. ಮುದ ಮತ್ತು ಮುಗ್ಧ… ಯಾರ ಸಂಚೋ ತಿಳಿಯದು. ಕನಸು ಒಡೆಯಿತು. ಕಣ್ಣು ತೆರೆದಾಗ ನೀನಿಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

Read More

ಆಶಾ ಜಗದೀಶ್ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ…

ಪ್ರೀತಿ ಮಾತ್ರ ಪೂರ್ಣ ಸತ್ಯ. ಮೋಸ ಎಂಬುದು ಅರ್ಧ ಸತ್ಯ. ನಾವು ಯಾರನ್ನೂ ಮೋಸಗೊಳಿಸಲು ಸಾಧ್ಯವಿಲ್ಲ. ನಮ್ಮಿಂದ ನಾವೇ ಪದೇ ಪದೇ ಮೋಸಹೋಗುತ್ತೇವೆ. ಅದೂ ಹೃದಯವಿದ್ರಾವಕವಾಗಿ. ನಮ್ಮನ್ನು ನಾವೇ ನೋಯಿಸಿಕೊಂಡು ಇತರರನ್ನು ದೂರುತ್ತೇವೆ… ನಿನ್ನನ್ನು ಪ್ರೀತಿಸದಿರಲು ಸಾಧ್ಯವಾಗುವುದಾ…
ಆಶಾ ಜಗದೀಶ್ ಬರೆಯುವ ಬದುಕೆಂಬ ಭಾವಗೀತೆಯ ಕುರಿತ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ ಮಂಗಳವಾರಗಳಂದು ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಆಶಾ ಜಗದೀಶ್ ಬರೆದ ಈ ದಿನದ ಕವಿತೆ

“ಮುಗಿಲ ಸಂಗ ತೊರೆದ
ಮಳೆ ಹನಿಯಂತೆ
ನಾನಿಲ್ಲಿ ನೋಯುತ್ತಿರುವೆ
ನಿನ್ನನೇ ನೆನೆದು
ನಾನೇ ಹತ್ತಿರುವ ಚಕ್ರ
ತಿರುಗುತ್ತದೆ
ರೂಢಿಯಂತೆ
ಹಲವು ನಿಲ್ದಾಣಗಳಲ್ಲಿ
ಹಂಚಿಹೋಗಿರುವ
ಬದುಕಿನ ತುಣುಕುಗಳನ್ನು
ಆರಿಸಿಕೊಳ್ಳುತ್ತಾ”- ಆಶಾ ಜಗದೀಶ್ ಬರೆದ ಈ ದಿನದ ಕವಿತೆ

Read More

ವೇಷ ಕಳಚಿ ನಡೆಯಬೇಕು…: ಆಶಾ ಜಗದೀಶ್ ಬರಹ

ನಿಜ ಏನೆಂದರೆ, ನಾವು ಸತ್ಯವನ್ನು ಎದುರಿಸುವ ಶಕ್ತಿಯನ್ನು ಪಡೆಯಬೇಕಿದೆ. ನಾವು ಒಳಗೆ ಹೇಗಿದ್ದೇವೋ ಹೊರಗೂ ಅದೇ ಆಗಿ ತೋರಿಸಿಕೊಳ್ಳುವ ಧಾರ್ಷ್ಟ್ಯವನ್ನು ಬೆಳೆಸಿಕೊಳ್ಳಬೇಕಿದೆ. ಇಲ್ಲವಾದರೆ ವೇಷ ಕಳಚುವುದು ಎಷ್ಟು ಹೊತ್ತಿನ ಕೆಲಸ! ನಾವು ಯಾವುದು ಅಲ್ಲವೋ ಅದಾಗಿ ನಮ್ಮನ್ನು ನಾವು ತೋರಿಸಿಕೊಳ್ಳಲಿಕ್ಕೆ ನಮಗೆ ಹೆಚ್ಚು ಪ್ರಯತ್ನ ಬೇಕಾಗಬಹುದು. ಆದರೆ ನಾವು ನಾವಾಗಿರುವುದಕ್ಕೆ ಅಷ್ಟೊಂದು ಪ್ರಯತ್ನ ಬೇಕಿರುವುದಿಲ್ಲ. ನಾವು ನಾವಾಗಲ್ಲದೆ ನಾವು ಬಯಸಿದ ನಾವಲ್ಲದ ಪಾತ್ರವಾಗಿ ಜಗತ್ತನ್ನು ನಂಬಿಸಲು ಸದಾ ಎಚ್ಚರದಿಂದ ಇರಬೇಕಾಗಿರುತ್ತದೆ.
ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ