Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಕಥೆಗಾರ ಕುವೆಂಪು: ಆಶಾಜಗದೀಶ್ ಅಂಕಣ

“ಇದೇ ಹೊತ್ತಿನಲ್ಲಿ ತನಗೆ ಅನ್ನಕೊಟ್ಟು ಕಾಪಾಡಿದ ಧಣಿಗಳ ಕುಟುಂಬವನ್ನು ಉಳಿಸಬೇಕೆಂದು ನಿಶ್ಚಯ ಮಾಡಿಕೊಂಡ ಲಿಂಗ, ತನ್ನ ತಬ್ಬಲಿ ಮಗನನ್ನು ನೆನೆಸಿಕೊಳ್ಳುತ್ತಲೇ ಯಾರಿಗೂ ತಿಳಿಯದಂತೆ ಹೊಳೆಗೆ ಹಾರಿಕೊಂಡುಬಿಡುತ್ತಾನೆ. ಭಯದಲ್ಲಿದ್ದ ಸುಬ್ಬಣ್ಣನ ಮನೆಯವರಿಗೆ ಅದು ತಿಳಿಯುವುದಿಲ್ಲ. ದೋಣಿ ಪಕ್ಕದೂರನ್ನು ತಲುಪುತ್ತದೆ. ಆಗ ಲಿಂಗ ಇಲ್ಲದಿರುವುದು ಗೊತ್ತಾಗಿ ಎಲ್ಲರೂ ಅವನನ್ನು ಹುಡುಕುತ್ತಾರೆ ಮತ್ತು ಅವನಿಗಾಗಿ ಕಣ್ಣೀರಿಡುತ್ತಾರೆ. ಕೊನೆಗೆ ಅವನ ಆಸೆ ಬಿಡುತ್ತಾರೆ. ಆದರೆ ಮರುದಿನ ಆಶ್ಚರ್ಯವೆಂಬಂತೆ.. “

Read More

ಈ ಭಾವಕ್ಕೆ ಏನೆಂದು ಹೆಸರಿಡಲಿ….: ಆಶಾ ಜಗದೀಶ್ ಅಂಕಣ

“ರಶೀದ್ ಪುರೋಳನ್ನು ಹೊತ್ತೊಯ್ದು ಮದುವೆಯಾಗಿರುತ್ತಾನೆ ನಿಜ. ಆದರೆ ಅವಳನ್ನು ನಿಜಕ್ಕೂ ಪ್ರೀತಿಸಿರುತ್ತಾನೆ. ಅವಳೂ ಸಹ ಮೊದಮೊದಲಿಗೆ ಇದ್ದ ಬೇಸರವನ್ನು ಅವನ ಒಳ್ಳೆಯ ನಡತೆಯಿಂದಾಗಿ ಮರೆತು ಅವನಲ್ಲಿ ಒಬ್ಬ ಒಳ್ಳೆಯ ಗಂಡನನ್ನು ಕಂಡುಕೊಂಡಿರುತ್ತಾಳೆ. ಪುರೋಳ ಅಣ್ಣ ಒಮ್ಮೆ ರಶೀದನ ಹೊಲಕ್ಕೆ ದ್ವೇಷದಿಂದ ಬೆಂಕಿ ಹಾಕಿದಾಗ ರಶೀದನ ಸಂಬಂಧಿಗಳು ಅವನ ಮೇಲೆ ಕಂಪ್ಲೇಂಟ್ ಮಾಡಲು ಹೇಳುತ್ತಾರೆ.”

Read More

ಲೋಕದ ಕಣ್ಣಿಗೆ ಇವಳಿನ್ನೂ ರಾಧೆಯೇ… : ಆಶಾ ಜಗದೀಶ್ ಅಂಕಣ

“ಅವಳಾದರೂ ಯಾಕೆ ಅಷ್ಟೊಂದು ಪ್ರೀತಿಸಬೇಕಿತ್ತು… ಅದೂ ತನ್ನನ್ನೇ ಕಳೆದುಕೊಳ್ಳುವಷ್ಟು, ಮರಳಿ ಪಡೆಯಲಾರದಷ್ಟು, ಅಳಿದು ಉಳಿಯುವಷ್ಟು, ಅಳಿಯದೆ ಇರಲಾರದಷ್ಟು… ಸ್ವಾರ್ಥವನ್ನು ತುಂಬಿಕೊಂಡು ಪ್ರೇಮದ ಲೇಪ ಹಚ್ಚಿ ಜಗತ್ತನ್ನು ಮೋಡಿಗೊಳಿಸಲು ಹೊರಡುವ ಮಹತ್ವಾಕಾಂಕ್ಷಿ ಸಮರ ಸಿಂಹರ ನಡುವೆ ಒಂದೇ ಒಂದು ಕೆಂಪು ಗುಲಾಬಿಯ ಸಸಿಯನ್ನು ಆ ಕಪ್ಪು ನೆಲದ ಮೇಲೆ ನೆಟ್ಟು ಹಿಂತಿರುಗುವ ಒಂದೇ ಒಂದು ಚಿಕ್ಕಾಸೆ ಹೊತ್ತು ನಡೆದವಳ ಹೆಜ್ಜೆ ಗುರುತುಗಳು…”

Read More

ಮೌನಕ್ಕೆ ಮೌನವೇ ಹೊರಬರುವ ಹಾದಿಯಾದಾಗ…: ಆಶಾಜಗದೀಶ್ ಅಂಕಣ

“ಒಬ್ಬ ಕವಿ ತಾನು ಪ್ರಪಂಚವನ್ನು ನೋಡಿ ಗ್ರಹಿಸಿದ್ದು ಒಂದು ಬಗೆಯ ಜ್ಞಾನವಾದರೆ ಪ್ರಪಂಚ ಅವನಿಗೆ ಅನಿವಾರ್ಯವಾಗಿ ಕಲಿಸಿದ ಅಥವಾ ನೀಡಿದ ಜ್ಞಾನ ಮತ್ತೊಂದೇ ಬಗೆಯದು. ಕವಿ ಇದೆರೆಡರ ಸಮಪಾಕದಲ್ಲಿ ಬೆಂದು ಬರೆದಾಗ ಕವಿತೆ ಯಾರನ್ನಾದರೂ ಮುಟ್ಟಿ ತಟ್ಟಬಲ್ಲದು. ಮತ್ತೆ ಗ್ರಹಿಕೆ ಯಾವ ಬಗೆಯದ್ದೇ ಇರಲಿ ನನ್ನ ಗ್ರಹಿಕೆ ಎನ್ನುವುದು ಬಹಳ ಸೀಮಿತ ಕ್ಷಿತಿಜ. ಅದನ್ನು ಸಾಮಾನ್ಯೀಕರಿಸುವ ಹೊತ್ತಿನಲ್ಲಿ ಒಂದು ಕಾಳಜಿ ಒಂದು ಜಾಗ್ರತೆ ಬೇಕೇಬೇಕಿರುತ್ತದೆ.”

Read More

ಸದಾಶಿವ ಸೊರಟೂರ ಕವನ ಸಂಕಲನಕ್ಕೆ ಆಶಾಜಗದೀಶ್ ಮುನ್ನುಡಿ

“ದಿನನಿತ್ಯದ ಸಾಮಾನ್ಯ ವಾರ್ತೆಯೂ ಕವಿತೆಯಾಗಬಲ್ಲದು. ಸಾಮಾನ್ಯ ಎನಿಸುವ ಸಣ್ಣ ವರ್ತಮಾನವೂ ಕವಿಗೆ ಭಿನ್ನವಾಗಿ ಕಾಣಬಹುದು. ಅಂತಹ ಭಿನ್ನತೆಯಲ್ಲಿಯೇ ವರ್ತಮಾನದ ಕಾವ್ಯ ಹೊಸತನ ಪಡೆದುಕೊಳ್ಳುತ್ತದೆ. ಆದರೆ ಕವಿತೆ ಎನ್ನುವುದು ಒಂದು ಭಾಷೆಯ ಸೌಂದರ್ಯ ಸಾಧನವಾಗಿರುತ್ತದೆ. ಕಡಿಮೆ ಪದಗಳಲ್ಲಿ ಹೆಚ್ಚಿನದನ್ನು ಹೇಳಲಿಕ್ಕೆ ಕಾವ್ಯ ನೆರವಾಗುತ್ತದೆ. ಕಾವ್ಯಕ್ಕೆ ಪದಗಳ ದುಂದು, ತುಂಡರಿಸಿಟ್ಟ ಗದ್ಯದ ಭಾಗ ಎನಿಸುವಂತಹ ರಚನೆಗಳು ಸಲ್ಲುವುದಿಲ್ಲ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ