Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ

ಮಕ್ಕಳೆಲ್ಲ ಬಾಕಿಮಾರು ಗದ್ದೆಯತ್ತ ನಡೆದುಕೊಂಡು ಹೋದಾಗ ಅವಿನಾಶನಿಗೆ ಅಯ್ಯಪ್ಪ ಎನಿಸಿತು. ಮಕ್ಕಳು ಅಂಗಳದಲ್ಲಿ ಕ್ರಿಕೆಟ್ ಆಡಲು ಶುರು ಮಾಡಿದರೆ ತಾನು ಅಲ್ಲಿಂದ ಏಳಬೇಕಾಗುತ್ತದೆಂಬ ಆತಂಕದಲ್ಲಿ ಅದುವರೆಗೂ ಅವನಿದ್ದ. ಮಕ್ಕಳು ಆಡಿದರೆ ಆಡಬಾರದೆಂದು ಹೇಳಲು ಚಂದ್ರಕ್ಕನಿಗೂ ಧೈರ್ಯವಿಲ್ಲ. ಅಂಗಳದಲ್ಲಿ ಕ್ರಿಕೆಟ್ ಆಡಿದರೆ ಹಟ್ಟಿ ಕೊಟ್ಟಿಗೆಯ ಹಂಚುಗಳು, ದಂಡೆಯಲ್ಲಿಟ್ಟ ಚೊಂಬು, ಕೊಡಪಾನಗಳು, ಪ್ಲಾಸ್ಟಿಕ್ ಬಾಲ್ದಿಗಳು ಚೆಂಡಿನ ಪೆಟ್ಟು ತಿಂದು ಅಲ್ಲೋಲಕಲ್ಲೋಲ ಆಗುತ್ತದೆ. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕಥೆ

Read More

ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ

ರಾಮಚಂದ್ರ ದೇವರೂ ‘ಮೂಗೇಲ’ ಕತೆಯಲ್ಲಿ ಮೂಗೇಲನ ಅಪ್ಪನಂಥವರು ಮನುಷ್ಯ ಸಂಬಂಧಗಳಿಗಿಂತ ಆರ್ಥಿಕ ಲಾಭಕ್ಕೆ ಪ್ರಾಮುಖ್ಯ ನೀಡುವುದನ್ನು ತೋರಿಸಲು ಮೂಗೇಲನ ಮೂಗನ್ನು ಅಸಂಗತವಾಗಿ ಹನುಮಂತನ ಬಾಲದಂತೆ ಬೆಳೆಸಿದ್ದಾರೆ. ಈ ಕತೆ ಮೇಲ್ನೋಟಕ್ಕೆ ಭಾರತೀಯ ಅಥವಾ ಕನ್ನಡದ ವಿಶಿಷ್ಟ ಸನ್ನಿವೇಶವನ್ನು ಸೂಚಿಸುವಂಥದ್ದಲ್ಲ. – ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ
ಅವರ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ವ್ಯಂಗ್ಯ ದರ್ಶನದ ಕವಿ ಪಾ.ವೆಂ. ಆಚಾರ್ಯ

ಪಾವೆಂ ಅವರ ನೆಚ್ಚಿನ ಸಾಹಿತ್ಯ ಪ್ರಕಾರ ಕಾವ್ಯ. ಪಾ. ವೆಂ. ಅವರು ನವೋದಯ ಪಂಥದಿಂದ ನವ್ಯಕ್ಕೆ ಬಂದ ಒಬ್ಬ ಪ್ರಮುಖ ಕವಿ. ಅವರ ಮೊದಲನೆಯ ಸಂಕಲನ `ನವನೀರವ’ ದಲ್ಲಿ ನವೋದಯ ಸಂವೇದನೆಯ ಕವಿತೆಗಳು ಮತ್ತು ಸಮಾಜದ ವಾಸ್ತವಗಳನ್ನು ಹೊಸ ಬಗೆಯಲ್ಲಿ ಹಾಸ್ಯ ದೃಷ್ಟಿಕೋನದಿಂದ ನೋಡಲಾರಂಭಿಸಿದ ಕವಿತೆಗಳಿವೆ. ಸಂಖ್ಯೆಯ ದೃಷ್ಟಿಯಿಂದ ಅವರು ಬರೆದ ಕವನಗಳು ಹೆಚ್ಚಿಲ್ಲ. ನವೋದಯ ಮತ್ತು ನವ್ಯ ಎರಡೂ ಬಗೆಯ ಕಾವ್ಯ ಪ್ರಕಾರಗಳಲ್ಲೂ ಅವರು ಕವನಗಳನ್ನು ರಚಿಸಿದ್ದಾರೆ.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ