ಹೇಳಿದ್ದರೆ ಬದುಕು ಬದಲಾಗುತ್ತಿತ್ತಾ?: “ದಡ ಸೇರದ ದೋಣಿ” ಸರಣಿಯಲ್ಲಿ ಮಮತಾ ಅರಸೀಕೆರೆ ಬರಹ
ಇದು ಕೇವಲ ನನ್ನ ಆಲೋಚನೆಯಾದರೆ ಮಾತ್ರ ಸಾಕೆ. ಆ ಬದಿಯಲ್ಲೂ ನನ್ನ ಜೊತೆಯ ಬಾಂಧವ್ಯ ಘನತೆಯದೆಂದು ಅನಿಸಬೇಕಲ್ಲ, ನಂಬಿಕೆ ಬರಬೇಕಲ್ಲ ಎಂಬ ವಿಷಯ ಮಾರ್ದನಿಸುವಾಗ ಇದೆಲ್ಲಾ ಆಗದ ವಿಷಯ, ಗೊಂದಲ, ಸಿಕ್ಕು, ವಿಪರೀತ ಚಿಂತನೆಗಳಲ್ಲಿ ಮುಳುಗಿಹೋಗಿದ್ದಿದೆ. ಒಟ್ಟಿನಲ್ಲಿ ಈ ಅಭಿಪ್ರಾಯದ ವೈಪರೀತ್ಯ ಜಾಲದ ಮಧ್ಯೆ ಸಿಲುಕಿ ಕೊನೆಗೊಮ್ಮೆ ಏನೂ ಬೇಡವೆನಿಸಿ ತೆಪ್ಪಗಾಗುವುದು ಸೂಕ್ತವೇನೊ. ಬುದ್ಧಿ ಹಾಗೂ ಸ್ವಾಭಿಮಾನದ ಮಾತನ್ನು ನೆನಪಿಸಿಕೊಳ್ಳುತ್ತಾ ಶರಣಾಗತಿಯ ಮಾತು, ವ್ಯಕ್ತಪಡಿಸುವಿಕೆ ಅಸಹಜವೆಂದುಕೊಳ್ಳುವುದೂ ಅದೇ ವೇಳೆಗೆ ಪ್ರೇಮ, ಸ್ನೇಹವೇ ಬದುಕಿನ ಆತ್ಯಂತಿಕ ಉದ್ದೇಶ, ಅದಿಲ್ಲದೆ ಬದುಕು ಬರಡಾದೀತು ಅಂತಲೂ ಅನಿಸುವುದಿದೆ.
“ದಡ ಸೇರದ ದೋಣಿ” ಸರಣಿಯಲ್ಲಿ ಬಿ.ಎ. ಮಮತಾ ಅರಸೀಕೆರೆ ಬರಹ
