Advertisement

ಎಸ್. ಗಂಗಾಧರಯ್ಯ

ನಂಬಿ ಕೆಟ್ಟವರಿಲ್ಲವೋ ಮನುಜ….: ಬಸವನಗೌಡ ಹೆಬ್ಬಳಗೆರೆ ಸರಣಿ

ಅವನ ಮಾತು ಕೇಳಿದ ಮನಸ್ಸು ಇನ್ನೊಂದು ರೀತಿ ಯೋಚನೆ ಮಾಡಲು ಶುರು ಮಾಡ್ತು. ಸುಮ್ಮನೇ ಕೆಲಸಕ್ಕೆ ಸೇರದೇ ಮೆಡಿಕಲ್ ರೆಪ್ ಕೆಲಸದಲ್ಲಿ ಮುಂದುವರೆದರೆ ಹೇಗೆ? ಎಂದು ಯೋಚಿಸಿದೆ. ಇದಕ್ಕೆ ಪೂರಕವಾಗಿ ಹಲವಾರು ನನ್ನ ಮೆಡಿಕಲ್ ರೆಪ್ ಗೆಳೆಯರು ಅಲ್ಲಿ ಪೆನ್ಶನ್ ಇಲ್ವಂತೆ. ಸುಮ್ನೇ ಇಲ್ಲೇ ಇದ್ಬಿಡು ಎಂದರು. ನಾನು ಇದೇ ರೀತಿ ಮಾಡಬೇಕು ಎಂದುಕೊಂಡರೆ ನಮ್ಮ ಸಂಬಂಧಿಕರು ಇದಕ್ಕೆ ಒಪ್ಪಲಿಲ್ಲ. ಸರ್ಕಾರಿ ಕೆಲಸ ಸಿಗೋಕೂ ಪುಣ್ಯ ಮಾಡಿರಬೇಕು ಈ ರೀತಿ ಮಾಡಿ ತಿನ್ನೋ ಅನ್ನದಾಗೆ ಕಲ್ಲು ಹಾಕಿಕೊಳ್ಳಬೇಡ ಎಂದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಆಡೂ ಆಟ ಆಡೂ…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಳಾಂಗಣ ಆಟವಾಗಿ ಹುಣಸೇ ಬೀಜಗಳನ್ನು ಗೆಲ್ಲುವ ಆಟವಾಡಿ ಬೀಜಗಳನ್ನು ಆಡುತ್ತಿದ್ದೆವು. ಆಗ ಹುಣಸೇಬೀಜಗಳನ್ನು ಕೊಂಡುಕೊಳ್ಳುವವರು ಮನೆ ಮನೆಗೆ ಬರುತ್ತಿದ್ದರಿಂದ ಅವರು ಕೊಡುತ್ತಿದ್ದರಿಂದ ಚಿಲ್ಲರೆ ಕಾಸಿಗೆ ಆಸೆಪಟ್ಟು ಹುಣಸೇಬೀಜಗಳನ್ನು ಗೆಲ್ಲುವುದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತಿದ್ದೆವು. ಆದರೆ ಗೋಲಿಯಾಟ ಆಡಿ ಗೋಲಿಗಳನ್ನು ಗೆಲ್ಲುವುದೂ ಸಹ ಪ್ರತಿಷ್ಟೆಯ ವಿಷಯ ಎನಿಸಿಕೊಳ್ಳುತ್ತಿತ್ತಾದರೂ ಗೆದ್ದ ಗೋಲಿಗಳಿಂದ ಒಂದು ರೂಪಾಯಿಯೂ ಲಾಭವಿರಲಿಲ್ಲ. ಚೌಕಾಬಾರ ಆಡಲು ಕವಡೆಗಳನ್ನು ಕೆಲವರು ಬಳಸುತ್ತಿದ್ದರಾದರೂ ನಾವು ಹುಣಸೆಬೀಜಗಳನ್ನು ತೇದುಕೊಂಡೇ ಅವನ್ನೇ ಬಳಸಿಕೊಂಡು ಆಡುತ್ತಿದ್ದೆವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಗಣೇಶ ಮೂರ್ತಿಯ ಗಿಫ್ಟ್ ಮಹಿಮೆ…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಮ್ಮೆ ವೈದ್ಯರ ಬಳಿ ನಮ್ಮ ಕಂಪೆನಿಯ ಬಗ್ಗೆ ಹೆಚ್ಚಿಗೆ ಹೇಳಲು ಹೋಗಿ ಅವರಿಂದ ಉಗಿಸಿಕೊಂಡಿದ್ದೆ. ಚಿಕ್ಕವನಿದ್ದಾಗಿಂದಲೂ ನಾನು ಮತ್ತೊಬ್ಬರಿಂದ ಹೇಳಿಸಿಕೊಳ್ಳುವುದಾಗಲಿ, ಬಯ್ಯಿಸಿಕೊಳ್ಳುವ ಕೆಲಸ ಮಾಡಿರಲಿಲ್ಲ. ಒಂದೊಮ್ಮೆ ಈ ಕೆಲಸದಲ್ಲಿ ಯಾರಾದ್ರೂ ಏನಾದ್ರೂ ಅಂದರೆ ಕೆಲಸವನ್ನು ಬಿಟ್ಟು ಹೋಗುವಷ್ಟು ಸಿಟ್ಟು ಬರುತ್ತಿತ್ತು. ಆದರೆ ನನಗೆ ಜೀವನದಲ್ಲಿ ಸೆಟ್ಲ್ ಆಗಬೇಕೆಂಬ ಮನೋಭಿಲಾಶೆ ಇದ್ದುದರಿಂದ ಎಷ್ಟೇ ಒತ್ತಡ ಬಂದರೂ ನಾನು ಸಹಿಸಿಕೊಳ್ಳುತ್ತಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತನೆಯ ಕಂತು ನಿಮ್ಮ ಓದಿಗೆ

Read More

ಸಾಧನೆಯೇ ಮಾತಾಗಬೇಕು!: ಬಸವನಗೌಡ ಹೆಬ್ಬಳಗೆರೆ ಸರಣಿ

ಕೆಲವೊಂದರಲ್ಲಿ ಇಡೀ ಕರ್ನಾಟಕಕ್ಕೆ ನಮ್ಮ ಕಂಪೆನಿಯಲ್ಲಿ ಟಾಪರ್ ಆಗೋವಷ್ಟು ಸೇಲ್ ಮಾಡಿದ್ದೆ. ಆದರೆ ಹಲ್ಲು ನೋವಿಗೆ ಬಳಸುವ ಟೂಥ್ ಪೇಸ್ಟ್ ಒಂದರ ಸೇಲ್‌ನಲ್ಲಿ ತುಂಬಾ ಕಮ್ಮಿ ಸಾಧನೆ ಮಾಡಿದ್ದೆ. ಇದುವರೆಗೂ ಹೊಗಳಿದವರು ಈ ವಿಷಯ ಬಂದಾಗ ನನ್ನನ್ನು ಹಿಗ್ಗಾ ಮುಗ್ಗಾ ಬಯ್ದರು. ನಾನು ತುಂಬಾ ಸೆನ್ಸಿಟೀವ್ ಆಗಿ ಇದ್ದುದ್ದರಿಂದ ಅಂದು ಅವರು ನೀಡಿದ್ದ ಸುಗ್ರಾಸ ಭೋಜನವನ್ನು ಸೇವಿಸಲು ಮನಸ್ಸಾಗಲಿಲ್ಲ… ಆಗ ಬೇರೆ ಮೆಡಿಕಲ್ ರೆಪ್‌ಗಳು ಬಂದು ಇಲ್ಲೆಲ್ಲಾ ಬಯ್ಯೋದು, ಬಯ್ಸಿಕೊಳ್ಳೋದು ಕಾಮನ್. ಇವುಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂದಾಗ ನನಗೆ ಮನಸ್ಸಿಗೆ ಸಮಾಧಾನ ಎನ್ನಿಸಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಸಂದರ್ಶಕರಿಗೆ ಆಟ ಹಾಜರಾದವರಿಗೆ ಸಂಕಟ…: ಬಸವನಗೌಡ ಹೆಬ್ಬಳಗೆರೆ ಸರಣಿ

ಈ ಘಟನೆಯಿಂದ ನಾನು ಕಲಿತ, ಪರರೂ ಅನುಸರಿಸಬಹುದಾದ ಒಂದು ಪಾಠವನ್ನು ನಾನಿಲ್ಲಿ ಹಂಚಿಕೊಳ್ಳ ಬಯಸುತ್ತೇನೆ. ನಾವು ಯಾವುದೇ ಸಂದರ್ಶನಕ್ಕೂ ಹಾಜರಾಗುವ ಮುನ್ನ ನಾವು ಅವರು ನೀಡಿದ್ದ ಸಮಯಕ್ಕಿಂತ ಮುಂಚಿತವಾಗಿ ಹೋಗಬೇಕು. ಅಲ್ಲದೇ ಅವರು ಕೋಪ ಬರುವಂತಹ ಯಾವುದೇ ಪ್ರಶ್ನೆಯನ್ನು ಕೇಳಿದ್ರೂ ಅವರು ನಿಮ್ಮ ಮಾತಿನ ಶೈಲಿ ಮತ್ತು ಸಹನೆ ಪರೀಕ್ಷಿಸುತ್ತಿದ್ದಾರೆ ಎಂದು ತಿಳಿಯಬೇಕು. ಸಾಧ್ಯವಾದಷ್ಟು ಸಂದರ್ಶಕರ ಕಣ್ಣಲ್ಲಿ ಕಣ್ಣಿಟ್ಟು ಉತ್ತರಿಸಬೇಕು. ಉತ್ತರ ಗೊತ್ತಿಲ್ಲದಿದ್ದಾಗ ಪ್ರಾಮಾಣಿಕವಾಗಿ ಗೊತ್ತಿಲ್ಲವೆಂದು ಹೇಳುವುದರ ಜೊತೆಗೆ ನಾನು ಇದರ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದು ಹೇಳಬೇಕೇ ಹೊರತು ತಪ್ಪು ಉತ್ತರ ಹೇಳಬಾರದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ