Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಬಸ್ಸಪ್ಪ ಮೇಷ್ಟ್ರ ಸೈಕಲ್ ಪಂಕ್ಚರ್ ಪ್ರಸಂಗ!: ಬಸವನಗೌಡ ಹೆಬ್ಬಳಗೆರೆ ಸರಣಿ

ಮೊದಲೆಲ್ಲಾ ಚಾಡಿ ಹೇಳಿದವರಿಗೆ ಹೊಡೆಯೋ ಬಸ್ಸಪ್ಪ ಮೇಷ್ಟ್ರು ಈ ಸಲ ಅವರಿಗೆ ಹೊಡೆಯಲಿಲ್ಲ. ಬದಲಿಗೆ ನನಗೇ ಜುಳುಪಿಯಿಂದ ಬಾರಿಸಲು ಶುರು ಮಾಡಿದರು! ನೋವಿನಿಂದ ಎಷ್ಟೇ ಅಬ್ಬರಿಸಿದರೂ ಅವರು ಹೊಡೆತ ಮಾತ್ರ ನಿಲ್ಲಿಸಲಿಲ್ಲ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಎಲ್ಲಿ ಕಿವಿ ಮುಟ್ಟು ನೋಡಣ…!: ಬಸವನಗೌಡ ಹೆಬ್ಬಳಗೆರೆ ಸರಣಿ

ಆ ಕಾಲ್ದಾಗೆ ಊರಾಗೆ ದೊಡ್ಡ ಸಿರಿವಂತನ ಮನೆಯವರಿಂದ ಹಿಡಿದು ಮಧ್ಯಮ ವರ್ಗ, ಬಡವರ ಮನೆಯವರಿಗೆಲ್ಲರಿಗೂ ಇದೇ ಕಲಿಕಾ ಮಂದಿರವಾಗಿತ್ತು. ಈಗಿನಂತೆ ಆಗಿನ್ನೆಲ್ಲಿಯ ಸಿಬಿಎಸ್‌ಇ, ಐಸಿಎಸ್‌ಇ ಸಿಲಬಸ್? ಎಲ್ಲರಿಗೂ ಒಂದೇ ಸಿಲಬಸ್.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆ’ ಇಂದಿನಿಂದ

‘ನಾನಿರೋದೇ ಹೀಗೇನೇ… ನಾನೇನೂ ಇದರಿಂದ ಕಲಿಯೋದಿಲ್ಲವೆಂದು ನಾವು ಅಹಮಿಕೆ ತೋರಿದೆವೋ, ಅಲ್ಲಿಗೆ ಮುಗೀತು ನಮ್ಮ ಬದುಕು! ಅದು ಕಬ್ಬಿಣದ ಕಡಲೆಯಂತಾಗುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪರೀಕ್ಷೆಯನ್ನು ಪಾಠ ಮಾಡಿ ಪರೀಕ್ಷೆ ಮಾಡ್ತಾರೆ! ಆದರೆ ಬದುಕು ಉಲ್ಟಾ. ಅದು ಪರೀಕ್ಷೆ ಮಾಡಿ ಪಾಠ ಕಲಿಸುತ್ತಾ ಹೋಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆʼ ಇಂದಿನಿಂದ

Read More

ಮರ್ಯಾದೆ ಉಳಿಸಿದ ಒಂದು ರೂಪಾಯಿ!: ಬಸವನಗೌಡ ಹೆಬ್ಬಳಗೆರೆ ಬರಹ

ಈಗಿನಂತೆ ಆಗ ಮಕ್ಕಳಿಗೆ ನೋಟ್ ಬುಕ್ಕಿನ ರಾಶಿ ಇರುತ್ತಿರಲಿಲ್ಲ. ಆರು ಪುಸ್ತಕವಿದ್ದರೆ ಆರು ನೋಟ್ಸ್, ಒಂದು ಆಲ್ ರಫ್ ಅಷ್ಟೇ. ಸಮಾಜ ನೋಟ್ಸ್‌ನಲ್ಲಿ ಇರುವ ಪಾಠಕ್ಕನುಗುಣವಾಗಿ ಪೌರನೀತಿ, ಭೂಗೋಳ, ಇತಿಹಾಸ ಎಂದು ಭಾಗ ಮಾಡಿ ಬಳಸಿಕೊಳ್ಳುತ್ತಿದ್ದೆವು. ಆಗ ಫೇಮಸ್ ಆಗಿದ್ದ ರೇನಾಲ್ಡ್ಸ್ ಪೆನ್ನನ್ನು ಪರೀಕ್ಷೆ ಬರೆಯಲು ಮಾತ್ರ ತೆಗೆದುಕೊಳ್ಳುತ್ತಿದ್ದೆನು. ಒಂದೊಮ್ಮೆ ಅದರ ಇಂಕ್ ಮುಗಿದು ಹೋದರೆ ಅದರ ಕಡ್ಡಿಯನ್ನು‌ ಎಸೆಯುತ್ತಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರಹ ನಿಮ್ಮ ಓದಿಗೆ

Read More

ಪಿಕ್ ನಿಕ್‍ ಎಂದು ಯಾಮಾರಿಸಿದ್ದು!!!: ಬಸವನಗೌಡ ಹೆಬ್ಬಳಗೆರೆ ಬರಹ

ಊರಿಂದ ಇನ್ನೇನು ಸ್ವಲ್ಪ ದೂರ ಹೋಗಿರಲಿಲ್ಲ, ಅವನ ವಿರೋಧಿಗಳು ಕೈಯಲ್ಲಿ ಕಣಿಗೆ (ಮರದ ಬಡಿಗೆ) ಹಿಡಿದು ನಮ್ಮ ರಸ್ತೆಗೆ ಅಡ್ಡವಾಗಿ ನಿಂತಿದ್ದರು. ವ್ಯಾನು ನಿಲ್ಲಿಸಿ ‘ಯಾಕೆ?’ಎಂದು ಕೇಳಿದಾಗ ಅವರು ವ್ಯಾನಿನ ಸುತ್ತಲೂ ನಿಂತು ‘ನೋಡಲು ನರಪೇತಲ ನಾರಾಯಣರಂತೆ ಇದೀರ ಬೋ… ಮಕ್ಕಳಾ.. ರೌಡಿಗಳೇನ್ರೂ ನೀವು, ತಲೆ ಸೀಳಿ ಬಿಡ್ತೀವಿ’ ಎಂದು ಸಿಟ್ಟಾಗಿ ಕಣಿಗೆ ಎತ್ತುತ್ತಾ ಬೈಗುಳ ಶುರು ಮಾಡಿದರು. ಆಗ ನಾವು ನಡುಗುತ್ತಾ ಕಣ್ಣೀರಿಡುತ್ತಾ ನಮ್ಮ ಹಿನ್ನೆಲೆ ತಿಳಿಸಿದೆವು. ತಾಳ್ಮೆಯಿಂದ ನಮ್ಮ ಮಾತನ್ನು ಅವರು ಕೇಳಿದ್ದರಿಂದಲೋ ಏನೋ ಅವರು ನಮಗೇನೂ ಮಾಡದೇ, ಹೋಗಲು ಸುಮ್ಮನೆ ಬಿಟ್ಟರು!
ಬಸವನಗೌಡ ಹೆಬ್ಬಳಗೆರೆ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ