ರಾಗಿಮುದ್ದೆಗೆ ಬಾದಾಮಿ ಹಾಲು ಎಕ್ಸ್ಚೇಂಜ್ ಆಫರ್!: ಬಸವನಗೌಡ ಹೆಬ್ಬಳಗೆರೆ ಸರಣಿ
ಇವರು ಎಂಟರಿಂದ ಪಿಯೂಸಿ, ಡೈರಿ ಡಿಪ್ಲೊಮೋ ಹುಡುಗರ ವಾರ್ಡನ್ ಆಗಿದ್ದರು. ಇವರು ವಾಲಿಬಾಲನ್ನು ಕಿರುಬೆರಳಲ್ಲಿ ತಿರುಗಿಸುತ್ತಿದ್ದರು. ಕಳ್ಳತನ ಮಾಡಿದ ಕಳ್ಳರನ್ನು ಕಂಡುಹಿಡಿಯೋದ್ರಲ್ಲಿ ಇವರು ಎಕ್ಸ್ ಪರ್ಟ್. ಹಾಸ್ಟೆಲ್ಲಿನಲ್ಲಿ ಯಾರೇ ಕಳ್ಳತನ ಮಾಡಲಿ ಪರ್ಫೆಕ್ಟ್ ಆಗಿ ಇವರೇ ಅಂತಾ ಕಂಡುಹಿಡಿಯುತ್ತಿದ್ದರು. ಒಂದೊಮ್ಮೆ ಕಳ್ಳತನ ಮಾಡಿ ಅವರ ಕೈಗೆ ಸಿಕ್ಕಿ ಬಿದ್ರೆ ಮುಗೀತು ಚಟ್ನಿ ಅರೆದಂತೆ ರುಬ್ಬಿಬಿಡ್ತಾ ಇದ್ರು! ಒಂದು ರೂಮಲ್ಲಿ ಕೂಡಿ ಹಾಕಿಕೊಂಡು ಹೊಡಿತಾ ಇದ್ರೆ ಆ ಶಬ್ದ ನಮ್ಮನ್ನು ಸ್ಥಂಭೀಭೂತರನ್ನಾಗಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
