Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕ್ಲಾಸು ಮಾತ್ರ ಮೂರು; ಕಲಿತ ಪಾಠ ನೂರಾರು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಭಾನುವಾರದಂದು ಹಸಿರು ಜೀರುಂಡೆಯನ್ನು ಒಂದು ಬೆಂಕಿಪೊಟ್ಟಣದಲ್ಲಿ ಇಟ್ಟುಕೊಂಡು ಅದಕ್ಕೆ ಚೆಂಡು ಹೂವಿನ ಎಲೆಗಳನ್ನು ತಿನ್ನಲು ಇಟ್ಟು ಆಗಾಗ್ಗೆ ಅದು ಎಷ್ಟು ತಿಂದಿತು ಎಂದು ನೋಡುತ್ತಿದ್ದೆ. ನಾನು ಅದನ್ನು ಸಾಕುತ್ತಿದ್ದೇನೆ. ಇಲ್ಲ ಅಂದ್ರೆ ಅದು ಬದುಕಲು ಕಷ್ಟ ಇತ್ತು ಎಂಬ ಭಾವದಿಂದ ಅದನ್ನು ಇಟ್ಟುಕೊಂಡಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಕಾಲದೊಂದಿಗೆ ಇಲ್ಲಿ ಕೆಲವೊಂದು ಬದಲಾಗುತ್ತವೆ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಊರಲ್ಲಿ ಯಾವುದೇ ಮನೆಯ ಮದುವೆಯಾದ್ರೂ ನಮಗೆ ಊರ ಹಬ್ಬದ ವಾತಾವರಣದಂತೆ ಅನಿಸುತ್ತಿತ್ತು. ಮದುವೆ ಮನೆ ಊಟದ ಖುಷಿ ಒಂದೆಡೆಯಾದರೆ ಅಲ್ಲಿ ಮೈಕಿನಲ್ಲಿ ಹಾಕಿರುತ್ತಿದ್ದ ಚಲನಚಿತ್ರ ಗೀತೆಗಳನ್ನು ಕೇಳುವುದೂ ಖುಷಿ ಕೊಡುತ್ತಿತ್ತು. ಮೊದಲಿಗೆ ‘ಮೂಷಿಕ ವಾಹನ ಮೋದಕ ಹಸ್ತ’ ಹಾಡಿನಿಂದ ಮದುವೆಯ ಮನೆಯ ಹಾಡುಗಳು ಶುರುವಾಗುತ್ತಿದ್ದವು. ಆಗ ಊರಲ್ಲಿ ಮದುವೆಯಾದರೆ ಆ ಮದುವೆಯಲ್ಲಿ ಊಟ ಬಡಿಸೋಕೆ ಅಂತಾ ದುಡ್ಡು ಕೊಟ್ಟು ಜನರನ್ನು ಕರೆಸುತ್ತಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಆಫ್‌ಲೈನ್ ಹಾಗೂ ಆನ್‌ಲೈನ್ ಭಿಕ್ಷುಕರು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಮನೆಯಲ್ಲಿ ಬೆಳೆದ ಭತ್ತದಲ್ಲಿ ಭಿಕ್ಷುಕರಿಗೆಂದೇ, ಭತ್ತ ಕೊಯ್ದು, ತುಳಿಸಿ, ತೂರಿ ಚೀಲದಲ್ಲಿ ತುಂಬಿಕೊಂಡು ಕೊನೆಯಲ್ಲಿ‌ ಮಿಕ್ಕಿದ ಗುಡಿಸಿಟ್ಟುಕೊಂಡ ಭತ್ತವನ್ನು ಚೀಲದಲ್ಲಿ ತುಂಬಿಟ್ಟುಕೊಳ್ಳುತ್ತಿದ್ದರು. ಅದನ್ನು ಮನೆಗೆ ನೀಡಿಸಿಕೊಳ್ಳೋಕೆ ಬರುವ ಭಿಕ್ಷುಕರಿಗೆ ಹಾಕಲು ಇಟ್ಟುಕೊಳ್ಳುತ್ತಿದ್ದರು. ಸಣ್ಣ ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡಿ ಬಂದೋರಿಗೆ ಭತ್ತ ಹಾಕಿದ ನಂತರ ‘ಏನಾದ್ರೂ ತಿನ್ನೋಕಿದ್ರೆ ಕೊಡಪ್ಪ’ ಅಂತಾ ಅವರು ಕೇಳಿದಾಗ ಕರುಳು ಚುರ್ ಎನ್ನುತ್ತಿತ್ತು..
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನ ಸಂಜೆ ಒಂದು‌ ಧಾರವಾಹಿ, ಶುಕ್ರವಾರ ‘ಚಿತ್ರಮಂಜರಿ’ ಹೆಸರಿನಲ್ಲಿ‌ ಕನ್ನಡ ಚಲನಚಿತ್ರ ಗೀತೆಗಳು ಬರುತ್ತಿದ್ದವು. ಇವನ್ನ ನೋಡಲು ನಾವು ತುಂಬಾ ಕಾತುರರಾಗಿ ಸಂಜೆ ಏಳು ಗಂಟೆಗೆಲ್ಲಾ ಟಿವಿ ಮುಂದೆ ಹಾಜರಾಗುತ್ತಿದ್ದೆವು. ನಮ್ಮಜ್ಜನ ಮನೆಯಲ್ಲಿ ಟಿವಿ ಇರಲಿಲ್ಲ. ನಾವು ಬೇರೆಯವರ ಮನೆಗೆ ಟಿವಿ‌ ನೋಡಲು ಹೋಗಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಬಾಲ್ಯದ ಅಟ, ಆ ಮೊಂಡಾಟ ಇನ್ನೂ ಮರೆತಿಲ್ಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ಮನೆಯಲ್ಲೋ ರಾಗಿ ಮುದ್ದೆ ಊಟ ಇರುತ್ತಿತ್ತು. ಅದು ಕಪ್ಪಾಗಿ ಇರುತ್ತಿದ್ದರಿಂದ ಉಣ್ಣೋಕೆ ಅಳುತ್ತಿದ್ದೆ. ಅಜ್ಜಿ‌ ಮನೆಯಲ್ಲಿ ಜೋಳದ ಮುದ್ದೆ ಬೆಳ್ಳಗೆ ಇರುತ್ತಿದ್ದರಿಂದ ಅದನ್ನು ಉಣ್ಣುತ್ತಿದ್ದೆ‌. ಒಮ್ಮೆ ಅಮ್ಮನ ಒತ್ತಾಯಕ್ಕೆ ಊಟ ಮಾಡಿ, ಕಕ್ಕಸ್ಸು ಕಪ್ಪಾದಾಗ ಬಹಳ ಬೇಸರವಾಗಿ ಮತ್ತೆ ಅಮ್ಮ ಉಣಿಸೋಕೆ ಬಂದಾಗ ಬಾಯೇ ತೆರೆಯದೇ ಊಟ ಮಾಡೋಕೆ ಹಠ ಮಾಡಿದ್ದೆ. ಅನ್ನಕ್ಕೆ ತತ್ವಾರ ಇದ್ದ ಕಾಲವದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂರನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ