Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಚಾಲೆಂಜ್ ಗೆಲ್ಲೋಕೆ ತಿನ್ನುತ್ತಿದ್ದ ರೋಚಕ ಪ್ರಸಂಗಗಳು!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಮೆಸ್ ಬಿಲ್ ಕೊಡುವುದು ಒಂದೆರಡು ತಿಂಗಳು ತಡವಾಯ್ತು. ಆಗ ಚೆನ್ನಕೇಶವಣ್ಣನ ಸಿಟ್ಟು ನನ್ನ ಮೇಲೆ ತಾರಕಕ್ಕೇರಿತ್ತು. ಈ ವಿಷಯವನ್ನು ಚೆನ್ನಕೇಶನಣ್ಣನ ಮನೆಯವರ ಬಳಿ ಹೇಳಿದೆ. ಆಗ ಅವರು ಅವರ ಬಳಿ ಇದ್ದ ಹಣವನ್ನೇ ಕೊಟ್ಟು ಮೆಸ್ ಬಿಲ್ ಕೊಡು ಎಂದು ತಿಳಿಸಿದ್ದರು. ಹೀಗೆ ಅವರು ಮಾತೃಹೃದಯಿಯಾಗಿದ್ದರು. ಅವರು ಕೋಪ ಮಾಡಿಕೊಂಡಿದ್ದನ್ನು ನಾನು ನೋಡಿಯೇ ಇರಲಿಲ್ಲ. ತುಂಬಾ ತಾಳ್ಮೆ ಇತ್ತು. ನಗುಮೊಗದ ಸ್ವಭಾವ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೇಳನೆಯ ಕಂತು ನಿಮ್ಮ ಓದಿಗೆ

Read More

‘ಮೀಸೆಯ ಮಹಿಮೆ’ ಎಂಬ ವಿಷಯದ ಬಗ್ಗೆ ನಾನೇಕೆ ಬರೆದೆ?!: ಬಸವನಗೌಡ ಹೆಬ್ಬಳಗೆರೆ ಸರಣಿ

ಅಂದಿನಿಂದ ಮೇಡಂ ಜೊತೆ ನಾನು ಅಷ್ಟಾಗಿ ಮಾತನಾಡಿಸುತ್ತಿರಲಿಲ್ಲ. ಪಾಠ ಮಾಡುವಾಗ ವಾದಗಳು ನನ್ನಿಂದ ಇರುತ್ತಿತ್ತು. ಒಮ್ಮೆ ಪೋಷಕರಿಗೆ ಹೆಣ್ಣು ಅಥವಾ ಗಂಡು ಎಂಬ ಲಿಂಗ ನಿರ್ಧಾರವಾಗಲು ಯಾರು ಕಾರಣ? ಎಂಬ ಪ್ರಶ್ನೆಯನ್ನು ನಮ್ಮ ಮುಂದಿಟ್ಟರು. ಆಗ ಕಾಲೇಜಿನ ನಮ್ಮ ಸೆಕ್ಷನ್‌ನಲ್ಲಿದ್ದ 60 ರಲ್ಲಿ 59 ಪ್ರಶಿಕ್ಷಣಾರ್ಥಿಗಳು ಹೆಣ್ಣೇ ಕಾರಣ ಎಂದರು. ನಾನೊಬ್ಬ ಮಾತ್ರ ಒಬ್ಬ ವ್ಯಕ್ತಿಯ ಲಿಂಗ ನಿರ್ಧಾರಕ್ಕೆ ಗಂಡೇ ಕಾರಣ ಎಂಬುದನ್ನು ಸಕಾರಣ ಸಹಿತ ತಿಳಿಸಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಓದುತ್ತಿದ್ದಾಗಲೇ ನಾನು ಮೇಷ್ಟ್ರು ಎಂಬ ಸುಳ್ಳಿನ‌ ಕತೆ ಕಟ್ಟಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಅವಳು “ನಿಮ್ಮ ತರಹದವರನ್ನೇ ನಾನು ಕಾಲೇಜಿನಲ್ಲಿ ನೋಡಿದೆ” ಎಂದಾಗ ನಾನು ನಗುತ್ತಾ “ಹೋ.. ಹೋ… ಅವನಾ? ನನ್ನ ತಮ್ಮ, ಅವನನ್ನು ನೋಡಿ ನೀನು ನಾನೇ ಎಂದು ಭಾವಿಸಿದೆಯಾ” ಎಂದು ಹೊಸ ಕಥೆ ಕಟ್ಟಿದೆ. ಆಗ ಅವಳು “ಅದ್ಹೇಗೆ? ನೀವಿಬ್ಬರೂ ಒಂದೇ ಕ್ಲಾಸಲ್ಲಿ ಇರಬೇಕಿತ್ತಲ್ವಾ?” ಎಂದಾಗ “ಹೋ ಹೋ ಅದಾ ಅವನು ಫೇಲ್ ಆಗೀ ಆಗೀ ಹಿಂದಕ್ಕೆ ಉಳಿದುಕೊಂಡ ನಾನು ಪಾಸ್ ಆಗೀ ಆಗೀ ಮುಂದಕ್ಕೆ ಹೋದೆ” ಎಂದೆ. ಅವಳು ನಂಬಿದಳು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಚುಟುಕು ಹೇಳಿ ನಾನು ಎಲ್ಲರ ಮುಂದೆ ಚುಟುಕಾಗಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಹೀಗೆ ಹೇಳಿದ ನಂತರ ಎಲ್ಲರೂ ನನ್ನ ಚುಟುಕನ್ನು ಮೆಚ್ಚುತ್ತಾರೆ ಎಂದುಕೊಂಡಿದ್ದೆ. ಆದರೆ ಆಗಿದ್ದೆ ಬೇರೆ. ಸಾಹಿತ್ಯದ ಬಗ್ಗೆ ಆಸಕ್ತಿಯಿದ್ದ ಬಿಕೆಎಂ ಸರ್ ಎದುರಿಗೆ ಹೇಳಿದ್ದರೆ ಅವರು ಅದನ್ನು ಯಾವ ರೀತಿಯಾಗಿ ತೆಗೆದುಕೊಳ್ಳುತ್ತಿದ್ದರೋ ಗೊತ್ತಿಲ್ಲ. ಆದರೆ ಅವರು ನನಗೆ ಹಿಗ್ಗಾ ಮುಗ್ಗಾ ಬಯ್ದರು. ಹುಡುಗಿಯರು ಜಗತ್ತಿನಲ್ಲಿ ನಾನೇನೋ ದೊಡ್ಡ ತಪ್ಪು ಮಾಡಿದ್ದ ರೀತಿಯಲ್ಲಿ ನನ್ನನ್ನು ನೋಡಲು ಶುರು ಮಾಡಿದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಮೌಲ್ಯಗಳಿರುವುದು ಪಾಲಿಸಲೇ ಹೊರತು, ಬರೀ ಬೋಧಿಸಲಿಕ್ಕಲ್ಲ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಬಹುತೇಕರು ಮಕ್ಕಳಿಗೆ ತಮ್ಮ ಮಗುವಿನ ಆಸಕ್ತಿಯ ಕ್ಷೇತ್ರ ಯಾವುದು? ಎಂಬುದನ್ನೇ ಗುರುತಿಸಿಯೇ ಇರುವುದಿಲ್ಲ. ತಾವು ಏನನ್ನು ಅಂದುಕೊಂಡಿರುತ್ತಾರೋ ಅದನ್ನು ಸಾಧಿಸಲು ಮಕ್ಕಳ ಮೇಲೆ ಒತ್ತಡ ಹೇರುತ್ತಾರೆ. ಟಿವಿ ಮಾಧ್ಯಮಗಳಲ್ಲಿ ಬರುವ ಸ್ಪರ್ಧೆಗಳಲ್ಲಿ ತಮ್ಮ ಮಗುವೂ ಭಾಗವಹಿಸಬೇಕು, ಬೇಗ ಫೇಮಸ್ ಆಗಬೇಕು ಎಂದು ಕೆಲವರು ತಮ್ಮ ಮಗುವಿಗೆ ಇಷ್ಟವಿದೆಯೋ ಇಲ್ಲವೋ ಎಂದು ಕೇಳದೇ ಸಿಕ್ಕ ಸಿಕ್ಕ ಕ್ಲಾಸ್‌ಗಳಿಗೆಲ್ಲಾ ಸೇರಿಸುತ್ತಾರೆ. ಜೊತೆಗೆ ಮಣಭಾರದ ಪುಸ್ತಕ, ಟ್ಯೂಷನ್! ಆ ಕೋಚಿಂಗ್, ಈ ಕೋಚಿಂಗ್ ಅಂತಾ ಮಕ್ಕಳ ಬಾಲ್ಯ ಇದರಲ್ಲೇ ಕಳೆದುಹೋಗುತ್ತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ