ಪೋಸ್ಟರ್ ಬಳಿಯೋ ಕೆಲಸದಾಗಿನ ಕೆಲ ಅನುಭವಗಳು… ಬಸವನಗೌಡ ಹೆಬ್ಬಳಗೆರೆ ಸರಣಿ
ನಾವು ಪೋಸ್ಟರನ್ನು ಅಂಟಿಸುತ್ತಾ ಲಕ್ಷ್ಮೀ ಮೆಕ್ಕೆಜೋಳದ ಬೀಜಗಳ ಬಗ್ಗೆ ಪ್ರಚಾರ ಮಾಡುತ್ತಾ ಹೋಗುತ್ತಿದ್ದಾಗ ಒಂದು ಹಳ್ಳಿಯವರು ನಮ್ಮನ್ನು ಸುತ್ತುವರೆದು “ಕಳೆದ ವರ್ಷ ಇದೇ ಬೀಜಗಳನ್ನು ಬಿತ್ತಿದ್ದೆವು. ನಮಗೆ ಬೆಳೆ ಲಾಸ್ ಆಗಿದೆ. ಅವು ಸರಿಯಾಗಿ ಹುಟ್ಟಿಲ್ಲ. ಆದ್ದರಿಂದ ಆ ನಷ್ಟವನ್ನು ನೀವೇ ಭರಿಸಬೇಕು” ಎಂದು ನಮ್ಮನ್ನು ಕೇಳಲು ಶುರು ಮಾಡಿದರು. ಅದೇನೋ ಹೇಳ್ತಾರಲ್ಲಾ. ‘ಮದುವೆ ಆಗೋ ತಿಮ್ಮ ಅಂದ್ರೆ ನೀನೇ ನನ್ನ ಹೆಂಡ್ತಿ ಆಗೋ ಅಂದ್ನಂತೆ’ ಅನ್ನೋ ಹಾಗಾಯ್ತು ನಮ್ಮ ಪರಿಸ್ಥಿತಿ. ನಮ್ಮನ್ನು ಹಳ್ಳಿಯವರು ಹಾಗೇ ಕೇಳಿದಾಗ ನಾವು ನಮ್ಮ “ಮ್ಯಾನೇಜರ್ನ ಕರೆದುಕೊಂಡು ಬರ್ತೀವಿ” ಎಂದು ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಓಡಿದೆವು!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
