Advertisement

ಎಸ್. ಗಂಗಾಧರಯ್ಯ

ಜೀವಶಾಸ್ತ್ರದಲ್ಲಿ ಸ್ಕೋರ್ ಮಾಡಿಸಿದ ಕೈಬೆರಳ ತಂತ್ರ!! ಬಸವನಗೌಡ ಹೆಬ್ಬಳಗೆರೆ‌ ಸರಣಿ

ಊರಲ್ಲಿ ಫಲಿತಾಂಶ ಕೇಳಿ ಏನೂ ಹೇಳಲಿಲ್ಲ. “ವಿಜ್ಞಾನವೆಂದರೆ ಕಷ್ಟ; ಅಂತಾದ್ರಲ್ಲಿ ನೀನು ಇಷ್ಟಾದ್ರೂ ತೆಗೆದೆಯಲ್ಲಾ ಅಂತಾ ಖುಷಿ ಪಟ್ಟರು”! ಅವರು ನನ್ನ ಫಲಿತಾಂಶದಲ್ಲಿ ಬೇಸರ ಪಟ್ಟುಕೊಳ್ಳದಿರಲು ಇನ್ನೊಂದು ಕಾರಣವಿದೆ. ಅವರಿಗೆ ನನ್ನ ಹಾಸ್ಟೆಲ್ ಹುಡುಗರ ಫಲಿತಾಂಶ ಹೇಳಿದ್ದು. ನಮ್ಮ ಹಾಸ್ಟೆಲ್ಲಿನಲ್ಲಿ ಇದ್ದ ಸೆಕಂಡ್ ಪಿಯುಸಿಯ 24 ವಿದ್ಯಾರ್ಥಿಗಳ ಪೈಕಿ ಪಾಸ್ ಆಗಿದ್ದು ಇಬ್ಬರೇ!! ಅದು ನಾನು ಮತ್ತು ಲಿಂಗರಾಜ ಮಾತ್ರ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆಯ ಎಡವಟ್ಟಿನ ಪ್ರಸಂಗಗಳು!!: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಒತ್ತಡ ಶುರುವಾಗಿ ಪರೀಕ್ಷೆಯ ಪ್ರವೇಶ ಪತ್ರವನ್ನು ಎಲ್ಲಾ ಕಡೆ ಹುಡುಕಿದಾಗ ರಾತ್ರಿ 10 ಘಂಟೆಯವರೆಗೂ ನನಗೆ ಸಿಗಲಿಲ್ಲ. ನನಗೆ ಏನು ಮಾಡಬೇಕು ಅಂತಾನೆ ಗೊತ್ತಾಗಲಿಲ್ಲ. ಟೆನ್ಷನ್ ಆಗಿ ಏನು ಮಾಡಬೇಕು ಎಂದು ಗೊತ್ತಾಗದೇ ಕುಳಿತಿದ್ದಾಗ ರಾತ್ರಿ 10 ಗಂಟೆಯ ಸುಮಾರಿಗೆ ನಮ್ಮ ಸೀನಿಯರ್ ‘ಅನಿಲ್’ ಹಾಸ್ಟೆಲ್ ಮೈದಾನದಲ್ಲಿ ‘ನಿನ್ನ ಹಾಲ್ ಟಿಕೆಟ್ಟು ಸಿಕ್ಕಿತು’ ಎಂದು ತಂದುಕೊಟ್ಟಾಗ ‘ಬದುಕಿದೆಯಾ ಬಡ ಜೀವವೇ’ ಎಂದುಕೊಂಡು ಆಗ ಇಂಗ್ಲೀಷ್ ಓದಲು ಕುಳಿತೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತನೆಯ ಕಂತು ನಿಮ್ಮ ಓದಿಗೆ

Read More

ಪರೀಕ್ಷೆ ತಪ್ಪಿಸಿಕೊಳ್ಳಲು ಮಾಡಿದ ಐಡಿಯಾ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಹಲವಾರು ಬಾರಿ ನಮ್ಮನೆ ಕಂಡೀಶನ್‌ಗೆ ಚೆನ್ನಾಗಿ ಓದಬೇಕು ಆದರೆ ಈ ರೀತಿ ಯಾಕೆ ಮಾಡ್ತಾ ಇದೀನಿ ಅನಿಸೋದು. ಆದರೆ ನಾನು, ಲಿಂಗರಾಜ, ಸುಧಾಕರ ಅಕ್ಟೋಬರ್ ವೇಳೆಗಾಗಲೇ ಈ ವರ್ಷ ರಿಜೆಕ್ಟ್ ಮಾಡಬೇಕು ಅಂತಾ ತೀರ್ಮಾನ ಮಾಡಿದ್ವಿ. ನಾನೂ ಈ ತೀರ್ಮಾನಕ್ಕೆ ಬರೋದಿಕ್ಕೂ ಒಂದು ಕಾರಣ ಇತ್ತು. ನಾನು ಮೊದಲ ಪಿಯೂಸಿಯಿಂದ ದ್ವಿತೀಯ ಪಿಯೂಸಿಗೆ ಕಾಲೇಜ್ ಬದಲಾಯಿಸಬೇಕು ಅಂತಾ ಹೋದಾಗ 2 ರಿಂದ 3 ತಿಂಗಳು ಬೋರ್ಡ್‌ಗೆ ಓಡಾಟದ ಮೂಲಕ ಸಮಯ ವ್ಯರ್ಥವಾಗಿ ಹೋಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಗಣಿತ ಟ್ಯೂಷನ್ನಿನ ಹಾಸ್ಯ ಪ್ರಸಂಗಗಳು… ಬಸವನಗೌಡ ಹೆಬ್ಬಳಗೆರೆ ಸರಣಿ

ಸುಧಾಕರನ ಅಣ್ಣನ ದಿನಚರಿಯೇ ವಿಶೇಷ ಎನಿಸುತ್ತಿತ್ತು. ಅವರು ಮಿತ ಭಾಷಿ, ಏಕಾಂಗಿಯಾಗಿರ್ತಾ ಇದ್ರು. ರಾತ್ರಿ 10 ಕ್ಕೆ ಓದಲು ಕುಳಿತರೆ ಬೆಳಗಿನ ಜಾವ 5 ಗಂಟೆಯವರೆಗೂ ಓದೋದು. ಮತ್ತೆ 5 ಕ್ಕೆ ಮಲಗಿ 10 ಗಂಟೆಗೆ ಎದ್ದು ಕಾಲೇಜಿಗೆ ಹೋಗೋರು. ಇದೇ ರೀತಿಯಾಗಿ ನಮ್ಮ ಹಾಸ್ಟೆಲ್ಲಿನ ಎಂಜಿನಿಯರಿಂಗ್ ಹುಡುಗರು ಓದ್ತಾ ಇದ್ರು. ಈ ರೀತಿ ರಾತ್ರಿಯಿಡೀ ಓದೋಕೆ ‘ನೈಟ್ ಔಟ್ ಮಾಡೋದು’ ಎಂಬ ಪದ ಬಳಸ್ತಾ ಇದ್ರು. ಹಾಸ್ಟೆಲ್ಲಿನ ಮಧ್ಯಭಾಗದಲ್ಲಿದ್ದ ಫೀಲ್ಡಿನಲ್ಲಿ ಸ್ಟಡಿ ಚೇರ್ ಹಾಕ್ಕೊಂಡು ಕುಳಿತು ಓದೋಕೆ ಶುರು ಮಾಡ್ತಿದ್ರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಉದರನಿಮಿತ್ಥಂ ಸುಳ್ಳಿನ ವೇಷಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಆತನಕ ಎಲ್ಲಾ ಅಂದುಕೊಂಡಂತೆಯೇ ನಡೆದು ಇನ್ನೇನು ಛತ್ರದೊಳಗೆ ಎರಡು ಹೆಜ್ಜೆ ಹೋಗಿಲ್ಲ, ಅಷ್ಟರೊಳಗೆ ಪ್ರೌಢಶಾಲಾ ಗೆಳೆಯ, ನನ್ನ ಜ್ಯೂನಿಯರ್ ಒಬ್ಬ ಸಿಕ್ಕ. ನನ್ನ ಮುಖಪರಿಚಯ ಚೆನ್ನಾಗಿಯೇ ಇದ್ದ ಮಂಜುನಾಥನೇ ಅವನು! ನಾನು ಅವನ ಮುಖ ಕಂಡೊಡನೆಯೇ ತಬ್ಬಿಬ್ಬಾಗಿ, ನನ್ನ ಪರಿಚಿತರ ಮದುವೆಗೆ ಬಂದಿದ್ದೇನೆ ಎಂದು ಅವನ ಎದುರು ತೋರ್ಪಡಿಸಿಕೊಳ್ಳಲು, ಅವನು ಮಾತಾಡುವ ಮುನ್ನವೇ ‘ಏನ್ ಮಂಜು ಇಲ್ಲಿ?’ ಎಂದು ಪ್ರಶ್ನಿಸಿದೆ. ಅದಕ್ಕವನು ಅತ್ಯಾಶ್ಚರ್ಯ ಮುಖ ಭಾವದಿಂದ ‘ಅಣ್ಣಾ, ಇಲ್ಲಿ ನಡೆಯುತ್ತಿರುವುದು ನನ್ನ ಸ್ವಂತ ಅಕ್ಕನ ಮದುವೆ’ ಎಂದ! ಈಗ ತಬ್ಬಿಬ್ಬಾಗುವ ಸರದಿ ನನ್ನದಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ