Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ‌ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಮನೆಯಂಗಳದ ನಾಕವೀ ಹೂವಿನಲೋಕ: ಭವ್ಯ ಟಿ.ಎಸ್. ಸರಣಿ

ಈ ಹೂ ಮುಡಿಯುವ ವಿಷಯದಲ್ಲಿ ಒಂದು ರೀತಿಯ ಸ್ಪರ್ಧೆಯಿದ್ದ ಕಾಲವದು. ತಾವು ಮುಡಿದು, ಗೆಳತಿಯರಿಗೂ ತರುವವರೂ ಇದ್ದರು. ಆದರೆ ನನ್ನ ಜಡೆ ಏರುತ್ತಿದ್ದ ಈ ಸೊಬಗಿನ ಡೇರೆ ಹೂಗಳ ಮೇಲೆ ಗೆಳತಿಯರ ಕಣ್ಣು. ಅವರ ಆಸೆಗೆ ಮಣಿದು ಸಂಜೆಯಾದರೂ ಬಾಡದೇ ನಗುತ್ತಿದ್ದ ಡೇರೆ ಹೂವನ್ನು ಮುಡಿಯಿಂದ ತೆಗೆದು ಕೊಟ್ಟು ಬಂದದ್ದು ಇತ್ತು. ಈ ಡೇರೆಯ ವೈಜ್ಞಾನಿಕ ಹೆಸರು ಡೇಲಿಯಾ. ಇದು ಬೇಸಿಗೆಯಲ್ಲಿ ಬೆಳೆಯಲಾರದು. ಬೇಸಿಗೆಯಲ್ಲಿ ಇದರ ಗೆಡ್ಡೆಗಳನ್ನು ಒಣ ಮಣ್ಣಿನಲ್ಲಿ ಸಂಗ್ರಸಿಟ್ಟು, ಮಳೆ ಬಿದ್ದೊಡನೆ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಟ್ಟು ಬೆಳೆಯುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ತವರೆಂಬ ಬೆಚ್ಚಗಿನ ಗೂಡಿನಲ್ಲಿ ಹಿತ ತಂದ ಬಾಣಂತನ: ಭವ್ಯ ಟಿ.ಎಸ್. ಸರಣಿ

ನಾಲಗೆ‌ ಖಾರದಿಂದ ಚುರುಕ್ ಎಂದ‌ ಕೂಡಲೇ ಜೋರಾಗಿ ಅಳುವ ಮಗುವನ್ನು ಸಮಾಧಾನಿಸಿ, ತೊಟ್ಟಿಲಿಗೆ ಹಾಕಿ ತೂಗಿ ಜೋಗುಳ ಹಾಡಿದ ಕೂಡಲೇ ನಿದ್ರೆ. ಖಾರ ಹಾಕಿದ ದಿನ ತುಸು ಹೆಚ್ಚೇ ನಿದ್ರೆ. ನನ್ನಿಬ್ಬರೂ ಮಕ್ಕಳು ರಾತ್ರಿ ಹಗಲು ಎರಡೂ ಹೊತ್ತು ಗಾಢವಾಗಿ ನಿದ್ರಿಸುತ್ತಿದ್ದರು. ಇದರಿಂದಾಗಿ ನಾನು ಬಾಣಂತನದ ಏಕತಾನತೆಯ ನಡುವೆ ಲವಲವಿಕೆಯಿಂದ ಇರಲು ಸಾಧ್ಯವಾಗುತಿತ್ತು. ಮಳೆರಾಯನ ಆರ್ಭಟದ ನಡುವೆ‌ ದೊಡ್ಡ ದೊಡ್ಡ ಹಗಲುಗಳು, ದೀರ್ಘ ಇರುಳುಗಳು ಕಳೆದು ಹೋದದ್ದೇ ತಿಳಿಯುತ್ತಿರಲಿಲ್ಲ. ಎಷ್ಟೋ ರಾತ್ರಿಗಳು ಕರೆಂಟ್ ಸಹ ಇರುತ್ತಿರಲಿಲ್ಲ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಮಳೆ ಜಿನುಗಿಗೆ ಅರಳುವ ಜೀವನಪ್ರೀತಿ: ಭವ್ಯ ಟಿ.ಎಸ್. ಸರಣಿ

ಮಳೆಗಾಲ ಮಲೆನಾಡಿನ ವಸುಂಧರೆಯನ್ನು ಸಿಂಗರಿಸಿದೆ. ಮಂಜು ಆವರಿಸಿದ ಬೆಟ್ಟ ಗುಡ್ಡಗಳು, ಮಳೆಯಲ್ಲಿ ಮಾತ್ರ ಗೋಚರಿಸುವ ಸೀತಾಳೆಯಂತಹ ವನಸುಮಗಳು, ಬಗೆಬಗೆಯ ಅಣಬೆಗಳು, ದಾರಿಯುದ್ದಕ್ಕೂ ಮನಸೆಳೆಯುವ ಸಣ್ಣ ಸಣ್ಣ ಜಲಪಾತಗಳು, ತುಂಬಿ ಹರಿಯುವ ನದಿ ತೊರೆಗಳು ಮಲೆನಾಡನ್ನು ಭೂ ಲೋಕ ಸ್ವರ್ಗವಾಗಿಸಿವೆ. ದೂರದೂರುಗಳಿಂದ ಪ್ರವಾಸಿಗರು ಮಳೆಗಾಲದಲ್ಲಿ ಮಲೆನಾಡಿನ ದೃಶ್ಯ ವೈಭವ ಸವಿಯಲು ಬರುತ್ತಿದ್ದಾರೆ. ಅನೇಕ ರೆಸಾರ್ಟ್‌ಗಳು, ಹೋಂ ಸ್ಟೇಗಳು ತಲೆಎತ್ತಿವೆ. ಮಲೆನಾಡು ತನ್ನ ಮೊದಲ ನೀರವ, ನಿರ್ಜನ ಭವ್ಯತೆಯನ್ನು ಕಳೆದುಕೊಳ್ಳುವ ಭೀತಿಯೂ ಇದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ