Advertisement

ಸುವರ್ಣ ಚೆಳ್ಳೂರು

“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ

ಸಂಜೆ ಆರಾಗುತ್ತಿದ್ದಂತೆ ಮನೆ ಎದುರಿನ ಅಥವಾ ಹಿಂದಿನ ಅಡಿಕೆ ಚಪ್ಪರದ ಕೆಳಗೆ ಅಡಿಕೆ ಸುಲಿಯುವ ಹೆಂಗಳೆಯರು ಮೇಳೈಸುತ್ತಿದ್ದರು. ಕಿಲಕಿಲ ನಗು, ಮಾತು, ಹರಟೆ, ಹಾಸ್ಯ, ವಿನೋದಗಳ ನಡುವೆ ಮೆಟ್ಟುಗತ್ತಿಯ ಮೇಲೆ ಕುಳಿತು ತಮ್ಮ ಚುರುಕು ಕೈಗಳಿಂದ ಅಡಿಕೆಗಳನ್ನು ಹೆಕ್ಕಿಕೊಂಡು ಕತ್ತಿಯಲ್ಲಿಟ್ಟು ಸಿಪ್ಪೆ ತೆಗೆದು, ಅಡಿಕೆಯನ್ನು ಹೋಳು ಮಾಡಿ ಕತ್ತರಿಸಿ ಬುಟ್ಟಿಗೆ ತುಂಬುತ್ತಾರೆ. ಮಧ್ಯರಾತ್ರಿಯವರೆಗೂ ಈ ಕೆಲಸ ನಡೆಯುವುದರಿಂದ ಊರಿನ ಪ್ರಚಲಿತ ವಿದ್ಯಮಾನಗಳು, ಸದ್ಯದಲ್ಲೇ ನಡೆಯಲಿರುವ ಮದುವೆಗಳು, ನಡೆದ ಜಗಳಗಳು, ಸಾವು-ನೋವು, ಕಷ್ಟಸುಖಗಳು ಅಲ್ಪಸ್ವಲ್ಪ ಬಣ್ಣ ಹಚ್ಚಿಕೊಂಡು, ಅತಿರಂಜಿತವಾಗಿ ಇಲ್ಲಿ ಚರ್ಚಿತವಾಗುತ್ತವೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ‌ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಮನೆಯಂಗಳದ ನಾಕವೀ ಹೂವಿನಲೋಕ: ಭವ್ಯ ಟಿ.ಎಸ್. ಸರಣಿ

ಈ ಹೂ ಮುಡಿಯುವ ವಿಷಯದಲ್ಲಿ ಒಂದು ರೀತಿಯ ಸ್ಪರ್ಧೆಯಿದ್ದ ಕಾಲವದು. ತಾವು ಮುಡಿದು, ಗೆಳತಿಯರಿಗೂ ತರುವವರೂ ಇದ್ದರು. ಆದರೆ ನನ್ನ ಜಡೆ ಏರುತ್ತಿದ್ದ ಈ ಸೊಬಗಿನ ಡೇರೆ ಹೂಗಳ ಮೇಲೆ ಗೆಳತಿಯರ ಕಣ್ಣು. ಅವರ ಆಸೆಗೆ ಮಣಿದು ಸಂಜೆಯಾದರೂ ಬಾಡದೇ ನಗುತ್ತಿದ್ದ ಡೇರೆ ಹೂವನ್ನು ಮುಡಿಯಿಂದ ತೆಗೆದು ಕೊಟ್ಟು ಬಂದದ್ದು ಇತ್ತು. ಈ ಡೇರೆಯ ವೈಜ್ಞಾನಿಕ ಹೆಸರು ಡೇಲಿಯಾ. ಇದು ಬೇಸಿಗೆಯಲ್ಲಿ ಬೆಳೆಯಲಾರದು. ಬೇಸಿಗೆಯಲ್ಲಿ ಇದರ ಗೆಡ್ಡೆಗಳನ್ನು ಒಣ ಮಣ್ಣಿನಲ್ಲಿ ಸಂಗ್ರಸಿಟ್ಟು, ಮಳೆ ಬಿದ್ದೊಡನೆ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಟ್ಟು ಬೆಳೆಯುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ತವರೆಂಬ ಬೆಚ್ಚಗಿನ ಗೂಡಿನಲ್ಲಿ ಹಿತ ತಂದ ಬಾಣಂತನ: ಭವ್ಯ ಟಿ.ಎಸ್. ಸರಣಿ

ನಾಲಗೆ‌ ಖಾರದಿಂದ ಚುರುಕ್ ಎಂದ‌ ಕೂಡಲೇ ಜೋರಾಗಿ ಅಳುವ ಮಗುವನ್ನು ಸಮಾಧಾನಿಸಿ, ತೊಟ್ಟಿಲಿಗೆ ಹಾಕಿ ತೂಗಿ ಜೋಗುಳ ಹಾಡಿದ ಕೂಡಲೇ ನಿದ್ರೆ. ಖಾರ ಹಾಕಿದ ದಿನ ತುಸು ಹೆಚ್ಚೇ ನಿದ್ರೆ. ನನ್ನಿಬ್ಬರೂ ಮಕ್ಕಳು ರಾತ್ರಿ ಹಗಲು ಎರಡೂ ಹೊತ್ತು ಗಾಢವಾಗಿ ನಿದ್ರಿಸುತ್ತಿದ್ದರು. ಇದರಿಂದಾಗಿ ನಾನು ಬಾಣಂತನದ ಏಕತಾನತೆಯ ನಡುವೆ ಲವಲವಿಕೆಯಿಂದ ಇರಲು ಸಾಧ್ಯವಾಗುತಿತ್ತು. ಮಳೆರಾಯನ ಆರ್ಭಟದ ನಡುವೆ‌ ದೊಡ್ಡ ದೊಡ್ಡ ಹಗಲುಗಳು, ದೀರ್ಘ ಇರುಳುಗಳು ಕಳೆದು ಹೋದದ್ದೇ ತಿಳಿಯುತ್ತಿರಲಿಲ್ಲ. ಎಷ್ಟೋ ರಾತ್ರಿಗಳು ಕರೆಂಟ್ ಸಹ ಇರುತ್ತಿರಲಿಲ್ಲ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ