Advertisement

ಉಮಾರಾವ್

ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಸಾಂಗತ್ಯ”

ಯಶೋದಳಿಗೆ ಮುಂದೆ ಮಾತನಾಡಲು ಆಗಲಿಲ್ಲ. ಅವಳು ಬಿಕ್ಕಿದಳು. ಅವಳ ಕಣ್ಣಿನಿಂದ ಒಂದೇಸಮನೆ ನೀರು ಇಳಿಯುತ್ತಿತ್ತು. ಅಷ್ಟರಲ್ಲಿ ಮಗುವನ್ನು ಕರೆದುಕೊಂಡು ಮಾದೇವಿ ಬಂದಳು. ಮಗುವನ್ನು ಎತ್ತಿಕೊಂಡ ಯಶೋದ ಮಗುವನ್ನು ಹೆಗಲಿಗೆ ಹಾಕಿಕೊಂಡು ಎದ್ದು ನಿಂತಳು. ಅವಳನ್ನು ಒಳಗೆ ಕರೆದುಕೊಂಡು ಹೋಗುವಂತೆ ಪ್ರಕಾಶ ಮಾದೇವಿಗೆ ಸೂಚಿಸಿದ. ಕೀಕೊಟ್ಟ ಬೊಂಬೆಯಂತೆ ಯಶೋದ ಮಾದೇವಿಯನ್ನು ಅನುಸರಿಸಿದಳು. ಅವಳಿಗೆ ಯಾವುದೋ ಆಘಾತವಾಗಿರಬೇಕು ಎಂದು ಪ್ರಕಾಶ ತರ್ಕಿಸಿದ. ನಿಧಾನವಾಗಿ ಅದನ್ನು ಹೊರತೆಗೆಯಬೇಕು. ಒಂದೆರಡು ದಿನದವರೆಗ ಕಾಯಬೇಕು.
ಚಂದ್ರಮತಿ ಸೋಂದಾ ಬರೆದ ಕತೆ “ಸಾಂಗತ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ

ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ

Read More

ಚಂದ್ರಮತಿ ಸೋಂದಾ ಬರೆದ ಈ ದಿನದ ಕವಿತೆ

“ಸಂಜೆಯಲಿ ಏರುವಳು ತಂದೆ ಹೆಗಲು
ಮುಂಜಾನೆ ನಲಿಯಲು ತಾಯ ಮಡಿಲು
ರಾಕ್ಷಸನ ಆರ್ಭಟಕ್ಕೆ ಅಜ್ಜನೆಡೆ ಸರಿತ
ರಾಜಕುವರಿಯ ವ್ಯಥೆಗೆ ಕಣ್ಣೀರ ಸುರಿತ”- ಚಂದ್ರಮತಿ ಸೋಂದಾ ಬರೆದ ಈ ದಿನದ ಕವಿತೆ

Read More

ಮತ್ತೆ ಸಿಗುವ ಆಶಯದ ಪಯಣ: ಚಂದ್ರಮತಿ ಸೋಂದಾ ಸರಣಿ

ಮನೆಯ ಜನರೆಲ್ಲರಿಗೂ ʻಹೋಗಿ ಬರ್ತೇನೆʼ ಎನ್ನುತ್ತ ಅವರು ಎಲ್ಲಿದ್ದಾರೋ ಅಲ್ಲಿಗೆ ಹೋಗಿ ಹೇಳುವುದು, ಅಲ್ಲಿಂದ ನಡುಮನೆಯಲ್ಲಿ ಕೆಲಹೊತ್ತು ಮಾತನಾಡುತ್ತ ನಿಲ್ಲುವುದು, ಅಲ್ಲಿಂದ ಜಗಲಿಗೆ, ಅನಂತರ ಹೆಬ್ಬಾಗಿಲಲ್ಲಿ ತುಸುಹೊತ್ತು ಮಾತನಾಡುತ್ತ ನಿಂತರೆ, ಹೊರಡಲು ಮುಂದಾದವರು ʻಇನ್ನೂ ಮಾತು ಮುಗಿದಿಲ್ವಾ?ʼ ಎಂದು ಕೇಳುತ್ತಲೇ ʻಬಂದೆʼ ಎಂದು ಬಾಯಲ್ಲಿ ಹೇಳಿದರೂ ಅಂಗಳದ ತುದಿಯಲ್ಲಿ ಒಂದು ಗಳಿಗೆಯ ಮಾತುಕತೆ. ಹೀಗೆ ಸಾಗುವ ವಿದಾಯದ ಕ್ಷಣ ನೆನಪಿಡುವಂಥದು. ಕೆಲವೊಮ್ಮೆ ಮನೆಗೆ ಬಂದ ಅಣ್ಣ-ತಮ್ಮಂದಿರು, ಅಥವಾ ಅಕ್ಕ-ತಂಗಿಯರನ್ನು ಕಳುಹಿಸಲು ಊರಬಾಗಿಲತನಕ ಹೋಗುವುದಿದೆ. ಎಲ್ಲರ ಎದುರಿನಲ್ಲಿ ಹಂಚಿಕೊಳ್ಳಲು ಆಗದ ಅದೆಷ್ಟೋ ಸಂಗತಿಗಳು ಅಲ್ಲಿ ವಿನಿಮಯಗೊಳ್ಳುತ್ತಿದ್ದವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಕೊನೆಯ ಕಂತು

Read More

ಅಯ್ಯೋ ಉಪ್ಪಿಟ್ಟಾ!: ಚಂದ್ರಮತಿ ಸೋಂದಾ ಸರಣಿ

ಎಲ್ಲ ಬಗೆಯ ಉಪ್ಪಿಟ್ಟುಗಳಲ್ಲಿ ಅವರೆಕಾಳಿನ ಉಪ್ಪಿಟ್ಟಿನ ಗಮ್ಮತ್ತೆ ಬೇರೆ. ಯಾರಾದರೂ ಮನೆಗೆ ಬಂದಾಗ ಉಪ್ಪಿಟ್ಟು ಕೊಡಲಾ? ಅಂತ ಕೇಳಿದರೆ `ಈಗ ತಿಂಡಿಯೇನು ಬ್ಯಾಡ’ ಅಂತಾರೆ. `ಅವರೆಕಾಳು ಉಪ್ಪಿಟ್ಟು ಮಾಡಿದ್ದೆ. ಅದ್ಕೆ ಕೇಳ್ದೆ’ ಅಂತ ಹೇಳಿನೋಡಿ. `ಅವರೆಕಾಳು ಉಪ್ಪಿಟ್ಟಾ, ಸ್ವಲ್ಪ ಕೊಡಿ’ ಅಂದೇ ಅಂತಾರೆ. ಅವರ ಮಾತು ನಂಬಿ ತುಸು ಕೊಟ್ಟರೆ `ಬಹಳ ಚೆನ್ನಾಗಿದೆ…
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ನಾಲ್ಕನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ