Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಆಟದ ಸುತ್ತ ಒಂದು ಸುತ್ತು: ಚಂದ್ರಮತಿ ಸೋಂದಾ ಸರಣಿ

ಮಳೆಗಾಲ ಮುಗಿದ ಮೇಲೆ ಊರಿನ ಬೀದಿ ಶಾಲೆಯ ಅಂಗಳ, ದೇವಸ್ಥಾನದ ಮುಂದಿನ ಬಯಲು ಎಲ್ಲವೂ ನಮ್ಮ ಆಟಕ್ಕೆ ಸೂಕ್ತ ಎಂದು ಭಾವಿಸಿ ಆಡುತ್ತಿದ್ದೆವು. ಮುಟ್ಟಾಟ ಅಥವಾ ಹಿಡಿಯೋ ಆಟಕ್ಕೆ ಬಹಳ ಪ್ರಾಧಾನ್ಯವಿತ್ತು. ಅಟ್ಟಿಸಿಕೊಂಡು ಹೋಗಿ ಹಿಡಿಯುವುದು ಒಂಥರಾ ಖುಶಿ ಕೊಡುತ್ತಿತ್ತು. ಇದರ ಇನ್ನೊಂದ ರೂಪವೇ ʻಕೂತು ಹಿಡಿತಿಯೋ ನಿಂತು ಹಿಡಿತಿಯೋʼ ಎನ್ನುವುದು. ಕೇಳಿದಾಗ ನಿಂತು ಎಂದರೆ ನಿಂತಾಗ, ಇಲ್ಲವೆ ಕುಳಿತು ಎಂದರೆ ಕುಳಿತಾಗ ಅವರನ್ನು ಮುಟ್ಟಬೇಕು, ಆಗ ಅವರು ಆಟದಿಂದ ಹೊರಕ್ಕೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ನೆನಪಿನಲ್ಲಿ ಉಳಿಯುವ ಸಾಮಾನ್ಯರು: ಚಂದ್ರಮತಿ ಸೋಂದಾ ಸರಣಿ

ಒಮ್ಮೆ ವಾಕಿಂಗಿಗೆ ಹೋಗುವಾಗ ಸರ್ಕಲ್ಲಿನಲ್ಲಿ ಅವಳು ಸೊಪ್ಪು ಮಾರುವುದನ್ನು ಗಮನಿಸಿದೆ. ಒಂದು ದಿನ ಅವಳು ನನ್ನನ್ನು ಕರೆದು ʻಸೊಪ್ಪು ತಕಳಿ. ಈ ಸೊಪ್ಪು ಬಾರಿ ಚೆನಾಗದೆʼ ಅಂತ ಕೊಟ್ಟಳು. ಇನ್ನೂ ಮೊಬೈಲ್‌ ಕೈಯಲ್ಲಿ ಇಲ್ಲದ ಕಾಲ. ʻದುಡ್‌ ತಂದಿಲ್ಲʼ ಅಂದೆ. ʻನಾಳೆ ಕೊಡಿʼ ಅಂದಳು. ʻನಾಳೆ ಬರದಿದ್ದರೆ?ʼ ಅಂದಿದ್ದಕ್ಕೆ ʻಯಾವತ್ತೋ ಕೊಡಿ ಹೋಗಿʼ ಅಂದಳು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ತೆರಡನೆಯ ಕಂತು

Read More

ಮದುವೆ ಎನ್ನುವ ಊರ ಸಂಭ್ರಮ: ಚಂದ್ರಮತಿ ಸೋಂದಾ ಸರಣಿ

ಈಗಿನಂತೆ ಅವರಪಾಡಿಗೆ ಅವರು ಮದುವೆಗೆ ಹೋಗುವ ರಿವಾಜಿರಲಿಲ್ಲ. ಎಲ್ಲರನ್ನೂ ಒಳಗೊಂಡು ಹೋಗುವುದಿತ್ತು. ಹೋಗುವಾಗ ಬರುವಾಗ ಹಾಡುಗಳ ಸ್ಪರ್ಧೆ ಇರುತ್ತಿತ್ತು. ಯಾರು ಎಷ್ಟು ಹಾಡನ್ನು ಹೇಳುತ್ತಾರೆ ಅಂತ. ಹೆಣ್ಣುಮಕ್ಕಳು ತಮ್ಮ ಹಾಡಿನ ಸಾಮರ್ಥ್ಯವನ್ನು ಒರೆಹಚ್ಚುವ ಅವಕಾಶವನ್ನು ಕಳೆದುಕೊಳ್ಳುತ್ತಿರಲಿಲ್ಲ. ಮದುಮಗನನ್ನು ಎದುರುಗೊಳ್ಳುವುದಿರಲಿ, ಸಭಾಪೂಜೆಯೋ, ವರಪೂಜೆ ಅಥವಾ ಧಾರೆ ಯಾವುದೇ ಸನ್ನಿವೇಶವನ್ನು ಬಿಡದೆ ಹಾಡುತ್ತಿದ್ದರು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಸೊಪ್ಪು-ತರಕಾರಿ ಎನ್ನುವ  ಕಿರುವೈದ್ಯ: ಚಂದ್ರಮತಿ ಸೋಂದಾ ಸರಣಿ

ನಾವು ದಿನನಿತ್ಯ ಬಳಸುವ ಕೆಲವು ತರಕಾರಿ ಸೊಪ್ಪುಗಳಲ್ಲಿ ನಮ್ಮ ಕೆಲವು ಚಿಕ್ಕಪುಟ್ಟ ಕಾಯಿಲೆಗಳನ್ನು ಗುಣಪಡಿಸುವ ಅಂಶಗಳಿವೆ ಎನ್ನವುದನ್ನು ಹಿಂದಿನವರು ಬಲ್ಲವರಾಗಿದ್ದರು. ʻಅಗ್ಗಾರು ಬ್ಯಾಸಿಗೆ, ಇನ್ನೊಂದಿಷ್ಟು ದಿವ್ಸ ಒಂದೆಲಗದ ತಂಬುಳಿ ಮಾಡದೆʼ ಎನ್ನುತ್ತಿದ್ದರು. ʻಈ ಚಳಿಗಾಲದಲ್ಲಿ ಕನ್ನೆಕುಡಿ ಕಟ್ನೆ ಮಾಡಿಕ್ಯಂಡು ಬಿಸಿಬಿಸಿ ಕಟ್ನೆಗೆ ತುಪ್ಪ ಹಾಕಿ ಉಂಡು ಹೊದ್ದು ಮಲಗಿದ್ರೆ ಚಳಿಯೆಲ್ಲ ಹೆದ್ರಿ ಓಡ್ಹೋಗ್ತುʼ ಎನ್ನುವ ಮಾತು ಕೇಳಿಬರುತಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ತನೆಯ ಕಂತು ನಿಮ್ಮ ಓದಿಗೆ

Read More

ಹೂವೆಂಬ ವಿಸ್ಮಯ: ಚಂದ್ರಮತಿ ಸೋಂದಾ ಸರಣಿ

ಅದು ಸಂಜೆಯಲ್ಲಿ ಬಿರಿಯುವ ಹೂವು. ಬೆಳಗ್ಗೆವರೆಗೆ ಬಿಟ್ಟರೆ ಪೂರ್ತಿಯಾಗಿ ಅರಳುತ್ತದೆ. ಅರಳಿದ ಮೇಲೆ ಕಟ್ಟಿದರೆ ಹೂವಿನ ಎಸಳು ಉದುರುತ್ತದೆ. ಹಾಗಾಗಿ, ರಾತ್ರಿ ಹೊತ್ತಿನಲ್ಲಿ ದೀಪದ ಬೆಳಕಿನಲ್ಲಿ ಕಟ್ಟಬೇಕಿತ್ತು. ಹೀಗೆ ಕಟ್ಟಿದ ಮಾಲೆಯನ್ನು ಮಾರನೆಯ ಬೆಳಗ್ಗೆ ಮುಡಿಯಬೇಕು/ದೇವರಿಗೆ ಅರ್ಪಿಸಬೇಕು ಇಲ್ಲವೆ ಬಿಸಿಲಿನಲ್ಲಿ ಬತ್ತದ ಹುಲ್ಲಿನ ಮೇಲೆ ಒಣಗಿಸಿ ಅದನ್ನು ಕಾಪಿಡಬೇಕು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ