Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಊರೆಂಬ ಹರಿಗೋಲು: ಚಂದ್ರಮತಿ ಸೋಂದಾ ಸರಣಿ

ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಗಳಂದು ನಮಗೆಲ್ಲ ಸಂಭ್ರಮವೋ ಸಂಭ್ರಮ. ಹಿಂದಿನ ದಿನವೇ ನಮ್ಮ ಮೇಷ್ಟ್ರು ಯಾರ‍್ಯಾರಿಗೆ ಏನೇನು ಕೆಲಸ ಎಂದು ತಿಳಿಸುತ್ತಿದ್ದರು. ಸ್ವಲ್ಪ ದೊಡ್ಡ ಮಕ್ಕಳು ಹಿಂದಿನ ಸಂಜೆಯೇ ತಮ್ಮನೆಯ ಹಿತ್ತಲಿನಲ್ಲಿರುವ ಮಾವಿನ ಗಿಡದಿಂದ ಮಾವಿನ ಸೊಪ್ಪನ್ನು ತಂದು ಅದನ್ನು ದಾರದಲ್ಲಿ ಪೋಣಿಸಿ ಶಾಲೆಯ ಬಾಗಿಲಿಗೆ ಕಟ್ಟುತ್ತಿದ್ದರು. ಹೆಚ್ಚಾಗಿ ಇದು ಗಂಡುಮಕ್ಕಳ ಕೆಲಸವಾಗಿತ್ತು. ಆಗ ನಮಗೆ ಸಮವಸ್ತ್ರದ ಕಟ್ಟುಪಾಡಿರಲಿಲ್ಲ. ಹಾಗಾಗಿ ನಮ್ಮ ಬಳಿ ಇರುವ ಒಳ್ಳೆಯ ಬಟ್ಟೆಯನ್ನು ಧರಿಸಿ, ಎಂಟುಗಂಟೆಗೆ ನಾವು ಶಾಲೆಯಲ್ಲಿರುತ್ತಿದ್ದೆವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಮಲಗು ಮಲಗೆನ್ನ ಮಗುವೆ…: ಚಂದ್ರಮತಿ ಸೋಂದಾ ಸರಣಿ

ನನಗೆ ಈಗಲೂ ನೆನಪಿದೆ, ನನ್ನ ತಮ್ಮಂದಿರನ್ನು, ಅಕ್ಕನ ಮಕ್ಕಳನ್ನು ತೊಟ್ಟಿಲಲ್ಲಿ ಮಲಗಿಸಿ ತೂಗುವಂತೆ ಅಮ್ಮ ಹೇಳುತ್ತಿದ್ದಳು. ಸುಮ್ಮನೆ ತೂಗಿದರೆ ಮಕ್ಕಳು ಅಳುತ್ತಿದ್ದವು. ಲಾಲಿಪದ ಹೇಳಿದರೆ ಸಾಕು ಕೆಲವೇ ಹೊತ್ತಿನಲ್ಲಿ ಅವು ಮಲಗುತ್ತಿದ್ದವು. ಆಗೆಲ್ಲ ನಾವು ದೊಡ್ಡವರು ಹೇಳುತ್ತಿದ್ದ ಜೋಗುಳ, ಲಾಲಿಪದಗಳನ್ನು ಕೇಳಿ ಕಲಿಯುತ್ತಿದ್ದೆವು. ʻಅಳದಿರು ತಮ್ಮಯ್ಯ ಅಳಿರ ಕಣ್ಣಿಗೆ ನಿದ್ದೆ ಬೆಳಗಾದರೆ ಬಕ್ಕು ನಿನ ಮಾವ ತಮ್ಮಯ್ನ ಮಡಿಲಿಗೆ ತಕ್ಕು ಕಡಲೆಯʼ ಅಂತಲೋ ನಮ್ಮದೇ ಆದ ರಾಗದಲ್ಲಿ ಹಾಡುವುದಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿಮೂರನೆಯ ಕಂತಿನಲ್ಲಿ ಲಾಲಿಹಾಡುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ʻಬಾಳೆ ಪಣ್ಣದೊಂದು ರುಚಿ…ʼ: ಡಾ. ಚಂದ್ರಮತಿ ಸೋಂದಾ ಸರಣಿ

ಮಲೆನಾಡಿನ ಊರುಗಳಲ್ಲಿ ಬಾಳೆಹಣ್ಣನ್ನು ಅಕ್ಕಿಯೊಂದಿಗೆ ರುಬ್ಬಿ ರೊಟ್ಟಿ, ದೋಸೆ, ಸುಟ್ಟೇವು ಎನ್ನುವ ತಿಂಡಿಗಳನ್ನು ಮಾಡುತ್ತಾರೆ. ಬಾಳೆಹಣ್ಣಿನ ರೊಟ್ಟಿ, ದೋಸೆಗಳೆಂದರೆ ಹಿರಿಯರಿಂದ ಕಿರಿಯರವರೆಗೆ ಪ್ರಿಯವಾದ ತಿಂಡಿ. ಅಮ್ಮನ ಭಾಷೆಯಲ್ಲಿ ಹೇಳುವುದಾದರೆ ಎರಡು ಹೊಟ್ಟೆ. ಬಾಳೆಹಣ್ಣಿನ ಕಡುಬು ಹಲಸಿನಹಣ್ಣಿನ ಕಡುಬಿನಷ್ಟೆ ರುಚಿಯಾದ ಸಿಹಿತಿಂಡಿ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಭಾಷೆಯ ಭಾವಯಾನ: ಡಾ. ಚಂದ್ರಮತಿ ಸೋಂದಾ ಸರಣಿ

ನಮಗೆ ಅಗತ್ಯವಿಲ್ಲದ ಪದಗಳ ಬಳಕೆಯ ವಿಷಯದಲ್ಲಿ ಸರಿ. ಆದರೆ ದಿನನಿತ್ಯದ ವ್ಯವಹಾರದಲ್ಲಿ ಬಳಸುವ, ನಾವು ಉಪಯೋಗಿಸುವ ವಸ್ತುಗಳ ವಿಷಯವೇ ಬೇರೆ. ಅನೇಕ ಪದಗಳನ್ನು ಕನ್ನಡದಲ್ಲಿ ಹೇಳಲು ಕಷ್ಟಪಡುತ್ತೇವೆ. ಯಾಕೆಂದರೆ ನಮಗೆ ಅವೆಲ್ಲ ಮರೆತೇ ಹೋಗುತ್ತಿವೆ. ಇಂಗ್ಲಿಷ್‌ ಪದಗಳು ಆ ಸ್ಥಾನವನ್ನು ಆಕ್ರಮಿಸಿವೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹತ್ತನೆಯ ಕಂತಿನಲ್ಲಿ ದಿನನಿತ್ಯ ಕನ್ನಡ ಭಾಷೆಯ ಬಳಸುವಿಕೆಯ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ