Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಡಾ. ಚಂದ್ರಮತಿ ಸೋಂದಾ ಬರೆದ ಈ ದಿನದ ಕವಿತೆ

“ಕೌರವೇಂದ್ರನ ಅಕ್ಷೋಹಿಣಿ ಅಳಿದಿದೆ ರಣರಂಗವೆಲ್ಲ ಮರುಳುಗಳ ನರ್ತನ
ಪ್ರತಿಷ್ಠೆಗೆ ಬಿದ್ದ ಆಘಾತ ಏಟಿಗೆ ಎದಿರೇಟು ಓಡಿದವರು
ಬೆರಸಿದವರು ಸುಸ್ತೋ ಸುಸ್ತು
ನೋಡುವ ಮಂದಿಗೆ ಆತಂಕ ದಿಗಿಲು”- ಡಾ. ಚಂದ್ರಮತಿ ಸೋಂದಾ ಬರೆದ ಈ ದಿನದ ಕವಿತೆ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ʻಕೆರೆಯಂ ಕಟ್ಟಿಸು ಬಾವಿಯಂ ಸವೆಸುʼ: ಚಂದ್ರಮತಿ ಸೋಂದಾ ಸರಣಿ

ಗದ್ದೆಯ ಕೆಲಸ ಮಾಡಿ ದಣಿದ ಎತ್ತುಗಳು ಒಮ್ಮೆ ಕೆರೆಯಲ್ಲಿ ಈಜಾಡಿ ಬಂದರೆ ದಣಿವೆಲ್ಲ ಮಾಯ. ಮೇಯಲು ಬಿಟ್ಟ ದನಗಳು ಕೆರೆಯಲ್ಲಿ ನೀರು ಕುಡಿದೇ ಮನೆಕಡೆ ಮುಖಮಾಡುತ್ತಿದ್ದವು. ಇನ್ನು ಬೇಸಿಗೆ ಕಾಲದಲ್ಲಿ ಕೆರೆಯಲ್ಲಿ ಝಾಂಡಾ ಹೊಡೆದಿರುವ ಎಮ್ಮೆಗಳನ್ನು ಕೆರೆಯಿಂದ ಎಬ್ಬಿಸುವುದೇ ಕಷ್ಟದ ಕೆಲಸ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಎಂಟನೆಯ ಕಂತು

Read More

ನೀ ನನಗಿದ್ದರೆ ನಾ ನಿನಗೆ: ಚಂದ್ರಮತಿ ಸೋಂದಾ ಸರಣಿ

ನಮ್ಮ ಬದುಕಿಗೆ ಹತ್ತಿರವಾದ ಹಕ್ಕಿಗಳಲ್ಲಿ ಕಾಗೆ, ಕೋಳಿಗಳೂ ಸೇರುತ್ತವೆ. ಕಾಗೆ ಬಣ್ಣ ಕಪ್ಪು ಅಂತ ಅದನ್ನು ಹಳಿಯುವುದಿದೆ. ಯಾರಾದರೂ ತಮ್ಮ ಮಕ್ಕಳನ್ನು ಹೊಗಳುತ್ತಿದ್ದರೆ ʻಕಾಗೆ ತನ್ನ ಮರಿ ಹೊನ್ನಮರಿ ಅಂದಿತ್ತಂತೆʼ ಎಂದು ಮೂಗುಮುರಿಯುವವರೂ ಇದ್ದಾರೆ. ಕೆಲವು ಬಾರಿ ಮಕ್ಕಳನ್ನು ನಂಬಿಸಲು ಕಾಗೆಯ ಬಳಕೆ ಇದೆ. ಮಗುವಿಗೆ ಕೊಡಬಾರದು ಎಂದಿರುವ ತಿನಿಸನ್ನು ಅದು ಬೇಕೇಬೇಕು ಎಂದು ಹಟಮಾಡಿದರೆ ʻಕಾಕಪಾಯಿ ಕಚ್ಗೊಂಡು ಹೋಯ್ತʼ ಅಂತ ಹೇಳುವುದಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ನಾವೇ ಭೂಮಿಯ ವಾರಸುದಾರರೇ?: ಚಂದ್ರಮತಿ ಸೋಂದಾ ಸರಣಿ

ನಮ್ಮ ಬಂಧುವೊಬ್ಬರದು ಅರಣ್ಯದ ನಡುವಿನ ಒಂಟಿ ಮನೆ. ಒಂದು ಬೇಸಿಗೆಯ ಬೆಳದಿಂಗಳ ರಾತ್ರಿಯಲ್ಲಿ ಹುಲಿ ಮತ್ತು ಕಾಡೆಮ್ಮೆ ಎರಡರ ನಡುವೆ ಭಯಂಕರ ಕಾದಾಟ. ಅವರ ಮನೆಯ ಹಿತ್ತಿಲಿನ ಪಕ್ಕದಲ್ಲಿಯೇ ಇವೆರಡರ ಹೋರಾಟವನ್ನು ಆ ಮನೆಯ ಜನರೆಲ್ಲ ಕುತೂಹಲದಿಂದ ಸುಮಾರು ಅರ್ಧಗಂಟೆಗೂ ಹೆಚ್ಚಿನ ಸಮಯ ವೀಕ್ಷಿಸಿದರಂತೆ. ಆ ಪ್ರಾಣಿಗಳ ಹೋರಾಟದ ಜಾಗಕ್ಕೂ ಇವರ ಮಧ್ಯೆ ಕೇವಲ ಒಂದು ಬೇಲಿಯಷ್ಟೆ ಇದ್ದುದು. ಇದು ಎಲ್ಲಿಯೂ ಸುದ್ದಿಯಾಗಲೇ ಇಲ್ಲ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ