Advertisement

ದೇವಿಕಾ ನಾಗೇಶ್

ತೇರು, ಅಲಾಯಿ ದೇವರು ಮತ್ತು ಚವಂಗಿ ಕಲ್ಲು

ರಂಜಾನ್ ಹಬ್ಬದ ದಿನ ಅಮ್ಮ ನನ್ನನ್ನು ಬೆಳಿಗ್ಗೆಯೇ ಎಬ್ಬಿಸಿ ಗುಡಿಸಲಿನ ನೆರಕೆಯ ಪುಟ್ಟ ಬಚ್ಚಲಲ್ಲಿ ಎಂಟಾಣೆ ಕ್ಲಿನಿಕ್ ಪ್ಲಸ್ ಶಾಂಪೂ ಎಂಬ ಲಕ್ಷುರಿ ಬೆರೆಸಿ ಸ್ನಾನ ಮಾಡಿಸಿ, ಸಕ್ಕರೆ ರೇಟು ಜಾಸ್ತಿ ಎಂದು ಬೆಲ್ಲ ಹಾಕಿದ ಶಾವಿಗೆ ಖೀರು ಮಾಡಿ ಒಂದು ಪುಟ್ಟ ಟಿಫನ್ ಕ್ಯಾರಿಯರಲ್ಲಿ ಇಡೀ ಓಣಿಗೆಲ್ಲಾ ತುಂಬಿಕೊಡುತ್ತಿದ್ದಳು. ಚಿಕನ್ ಕೊಳ್ಳಲು ದುಡ್ಡಿಲ್ಲದೆ ಇದ್ದರೂ ಆಲೂಗಡ್ಡೆ ಸಾರನ್ನೇ ಮಾಡಿ ಅದನ್ನೇ ಚಿಕನ್ ಎಂದು ಅಮ್ಮ ನೂರಿ ನಂಬಿಸಬಲ್ಲವಳಾಗಿದ್ದಳು. ನಮ್ಮ ಓಣಿಯ ಛಲವಾದಿಗಳಾಗಿದ್ದ ರೂಪ, ರೇಖಿ, ಪರುಸ, ಕೆಂಚತ್ತಿ, ಸುಶೀಲತ್ತಿ, ಹಾಲಪ್ಪ ಮಾಮ ಎಲ್ಲರೂ ಶಾವಿಗೆ ಖೀರಿಗಾಗಿ ಕಾಯುತ್ತಿದ್ದರು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಕಮಿಷನ್ ಕನಕನ ನಿಧಿ ಶೋಧದ ಕಥೆ

ಅಣೋ, ನನ್ ಪ್ರೀತಿಸ್ತಾ ಇರೋ ಹುಡುಗಿ ತೋರಿಸ್ತೀನಿ.’ ಎಂದು ಫೋನಿನಲ್ಲಿ ವಿ ಪ್ಯಾಟರ್ನ್ ಹಾಕಿ ಲಾಕ್ ತೆರೆದು ‘ಇವಳೇ ನೋಡಣೋ’ ಎಂದು ತೋರಿಸಿದ. ನಾನೆ ಪೂರ್ವಗ್ರಹದಿಂದ  ‘ನಿಜಕ್ಕೂ ಪ್ರೀತಿಸ್ತಾ ಇದ್ಯೇನೋ? ಅಥವಾ ಫ್ರೆಂಡ್ಸ್ ವಿಥ್ ಬೆನಿಫಿಟ್ಸ?’ ಅಂತ ಕೇಳಿದೆ. ಅದಕ್ಕವನು ತುಂಬಾ ಕ್ಲಾರಿಟಿಯಿಂದ ‘ನನಗೆ ಅವಳಿಷ್ಟ. ಅವಳಿಗೆ ನಾನಿಷ್ಟ. ಮದ್ವೆ ಯಾಕಗಬಾರದು?’ ಎಂದು ತುಂಬಾ ನಿಖರವಾಗಿ ಹೇಳಿದ. ನಾನು ನನ್ನ ಮನಸ್ಸಿನಲ್ಲಿ ‘ಎಲಾ ಚಾಲಾಕಿ!’ ಎಂದುಕೊಂಡೆ. ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಮಲ್ಲಿಕಾ ಮತ್ತು ಸೌಭಾಗ್ಯಮ್ಮ … ಎರಡು ಪ್ರಸಂಗಗಳು

ಪ್ರತಿ ಅರ್ಧ ಗಂಟೆಗೊಮ್ಮೆ ಸಾವನ್ನು ಮಡಿಲಲ್ಲಿಟ್ಟುಕೊಂಡು ಸರಿದಾಡುವ ಆಂಬುಲೆನ್ಸ್ ಸದ್ದಿಗೆ ಸಂಕಟವಾಗುತ್ತಿದ್ದ ಹೊತ್ತದು. ಕೆಳಗಡೆ ಶುರುವಾದ ಗಿಜಿ ಗಿಜಿ ಕೇಳಿ ಕಿಟಕಿಯಿಂದ ನೋಡಿದಾಗ ಪೀಜಿ ಓನರ್ ಮತ್ತು ಅವನ ಹೆಂಡತಿ ಸುನೀತಕ್ಕ ಆಂಬುಲೆನ್ಸ್ ಹತ್ತುತ್ತಿದ್ದರು. ಕೂಡಲೇ ಕೆಳಗಡೆ ಓಡಿಹೋದೆ. ನಾನು ಹೋಗುವುದಕ್ಕೂ ಅಂಬುಲೆನ್ಸಿನ ಬಾಗಿಲು ಮುಚ್ಚುವುದಕ್ಕೂ ಸರಿ ಹೋಯಿತು. ಆ ಕ್ಷಣಭಂಗುರತೆಯ ಸಮಯದಲ್ಲೇ ನನಗೆ ಕಂಡಿದ್ದು ಕಣ್ಣೀರು ತುಂಬಿಕೊಂಡಿದ್ದ ಸುನೀತಕ್ಕನ ಕಣ್ಣುಗಳು…
ದಾದಾಪೀರ್‌ ಜೈಮನ್‌ ಅಂಕಣ

Read More

ಒಂದು ಮುತ್ತು ನಿಮ್ಮನ್ನು ಅಷ್ಟು ಭಯ ಪಡಿಸಿತಾ?

ಜೀವನದಲ್ಲಿ ನಾನು ಯಾರನ್ನು ನೋಡುತ್ತೇನೆಯೋ ಅವರಂತೆ ಆಗಲು, ಅವರಲ್ಲಿ ತಾನು ಇಷ್ಟಪಟ್ಟದ್ದನ್ನು ತನ್ನ ಭಾಗವಾಗಿಸಿಕೊಳ್ಳುವ ತನ್ನ ಗುಣಕ್ಕೆ ಏನೆನ್ನಬೇಕು? ಆ ರೀತಿ ಎಲ್ಲರೊಳಗಿನಿಂದ ಒಂದೊಂದು ಹೆಕ್ಕುತ್ತಾ ಅರಗಿಸಿಕೊಂಡು ಬರುತ್ತಾ ಇದ್ದ ತನಗೆ ತನ್ನ ನಿಜವಾದ ಅಸ್ಮಿತೆ ಯಾವುದು? ಎಂದು ಪ್ರತಿಸಲ ಗೊಂದಲಕ್ಕೆ ಬೀಳುತ್ತಾನೆ. ಅದೇ ಹೊತ್ತಿಗೆ ಆ ಹುಡುಗ ಅವನು ಕೂತಿದ್ದ ಜಾಗದಿಂದಲೇ ”ಅಂಕಲ್, ನೀವು ರೈಟರ್ ಆಲ್ವಾ?” ಎಂದು ಜೋರಾಗಿ ಕೇಳಿದ. ಅವನು ಸುಮ್ಮನೆ ತಲೆ ಅಲ್ಲಾಡಿಸಿದ.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಕಬೂಲ್…..

ನಿಶ್ಚಿತಾರ್ಥಕ್ಕೆ ಮೂರು ದಿನ ಉಳಿದಿತ್ತು. ಅದೇನಾಯಿತೋ ಕಾಣೆ. ರಾತ್ರಿ ಮನೆಯಲ್ಲಿ ಮಲಗಿದ್ದವಳು ಬೆಳಗ್ಗಿಗೆ ಕಾಣಲಿಲ್ಲ. ಊರೆಲ್ಲಾ ಹುಡುಕಾಯಿತು. ಸುಳಿವಿಲ್ಲ, ಸುದ್ದಿಲ್ಲ. ಅಮ್ಮ ಪಕ್ಕದೂರಿನ ದರ್ಗಾಕ್ಕೆ ಹೋಗಿ ”ಎಲ್ಲಾರ ಇರ್ಲಿ ಸುಖವಾಗಿರ್ಲಿ” ಅಂತ ದುವಾ ಕೇಳಿಕೊಂಡು ಬಂದ್ಲು. ಬಾಬಾ ‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ’ ಅನ್ನೊ ಗಾದೆ ನಿಜವಾಗಬಾರದೆಂದು ಉಳಿದ ನಾವು ನಾಲ್ಕು ಹೆಣ್ಣು ಮಕ್ಕಳನ್ನ ಹೆಚ್ಚು ಹೆಚ್ಚು ಕಾಯಲು ಶುರುಮಾಡಿದ. ಸಹಜವಾಗಿಯೇ ಪಾತಿ ಮತ್ತು ಸಯೀದನ ಮದುವೆ ಮುರಿದುಬಿದ್ದಿತ್ತು. ದಾದಾಪೀರ್‌ ಜೈಮನ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ