Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ನಂಬಿ ಬದುಕಿದವರ ಕಥೆ

ಝುಹೆಬಾನ್ ಎಂಬ ಮಧ್ಯವಯಸ್ಕನೊಬ್ಬರನ್ನು ಮಾತಿಗೆಳೆದಾಗ ಅವರು ದರ್ಗಾಹದ ಇತಿಹಾಸವನ್ನು ಬಿಚ್ಚಿಡುತ್ತಾ ಹೋದರು. ಸುಮಾರು ಎರಡುನೂರ ಎಪ್ಪತ್ತೈದು ವರ್ಷಗಳ ಹಿಂದೆ ಟಿಪ್ಪು ಮಸ್ತಾನ್, ಮಾಣಿಕ್ ಮಸ್ತಾನ್ ಮತ್ತು ತವಕ್ಕಲ್ ಮಸ್ತಾನ್ ಎಂಬ ಮೂವರು, ನವಾಬ್ ಹೈದರ್ ಆಲಿ ಕಟ್ಟಿಸುತ್ತಿದ್ದ ಕಲ್ಲಿನರಮನೆಯ ಕೆಲಸಕ್ಕೆಂದು ಬಂದರು. ಧರ್ಮನಿಷ್ಠರಿದ್ದ ಆ ಮೂವರೂ ಕೆಲಸವೇ ದೇವರೆಂದು ದುಡಿಯುತ್ತಿದ್ದರೂ ಪಗಾರದ ದಿನ ಮಾತ್ರ ಕಾಣೆಯಾಗಿಬಿಡುತ್ತಿದ್ದರಂತೆ!
ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ವಿದಾಯದಲ್ಲೂ ಬೆಳೆವ ಪ್ರೀತಿ

‘ಎಲ್ಲಾ ಕ್ಯಾಲ್ಕುಲೆಟ್ ಮಾಡಿ ಪ್ರೀತ್ಸಕೆ ಇದು ಅರೆಂಜ್ ಮ್ಯಾರೇಜ್ ಅಲ್ಲ. ಅವನನ್ನು ನೋಡಿದ್ರೆ ನನ್ನ ಎದೆಬಡಿತ ಹೆಚ್ಚಾಗತ್ತೆ. ಅವನ ಸಮುದ್ರದಂತಹ ಕಣ್ಣುಗಳ ಸೆಳೆತದಿಂದ ಪಾರಾಗೋದಿಕ್ಕೆ ಆಗದೆ ಇಲ್ಲ…’ ಎಂದು ಹೇಳುತ್ತಿದ್ದವನನ್ನು ತಡೆದು ‘ಇವೆಲ್ಲಾ ಮೊದಲ ನೋಟದಲ್ಲೇ ಆಯ್ತೆನೋ ಸಾಹೇಬ್ರಿಗೆ?!’ ಎಂದು ಕೇಳಿದಾಗ ಅವನು ಕೊಟ್ಟ ಉತ್ತರ ಅದೆಷ್ಟು ಸಮಂಜಸ ಅನಿಸುತ್ತದೆ… ಅವನು ಹೇಳಿದ; ‘ನೀ ಏನೇ ಅನ್ನು, ಮೊದಲ ನೋಟ, ಮೊದಲ ಗುರುತುಗಳೇ ನಮ್ಮನ್ನು ಸಾಹಸಿಗಳನ್ನಾಗಿ ಮಾಡದು.
ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಅವನಿಗೆ ಮೊದಲಿನಿಂದಾನು ಮನೆಕಡೆಯಿಂದ ಸಮಸ್ಯೆ ಇತ್ತು. ಅಮ್ಮ, ಅಪ್ಪ, ವಿಕಲ ಚೇತನ ಅಣ್ಣ, ಮನೆಯಲ್ಲಿ ಸದಾ ಇರುವ ಜಗಳಗಳು ನೆನಪಾದವು. ನನಗೆ ನನ್ನ ಮನೆಯಲ್ಲಿರುವ ಬಡತನ, ರಿಸರ್ವಶನ್ ಕೊಟ್ಟರೂ ಇವಕ್ಕೆ ಮುಂದೆ ಬರೋದಕ್ಕೆ ಗೊತ್ತಿಲ್ಲ ಎಂಬ ಕುಹಕಗಳು ಕುದಿಯುತ್ತಿದ್ದವು. ಎರಡು ಮಗ್ಗಿನಲ್ಲಿ ಚಾ ಬಗ್ಗಿಸಿಕೊಂಡು ಕೋಣೆಗೆ ಬಂದರೆ ಅವನು ಹಾಸಿಗೆಯಿಂದೆದ್ದು ಗೋಡೆಗಾತು ಯಾವುದೋ ಮ್ಯಾಗಜಿನ್ ಹಿಡಿದು ಕೂತಿದ್ದ. ಮೊಬೈಲು, ಬ್ಯಾಟರಿ ದಿಕ್ಕಿಗೊಂದೊಂದು ಬಿದ್ದಿದ್ದವು.
ದಾದಾಪೀರ್‌ ಜೈಮನ್ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಕೊನೆಗೂ ಉಷಾ ಇದ್ದ ಅಪಾರ್ಟ್ಮೆಂಟ್ ಬಂತು. ಲಿಫ್ಟ್ ಕಾರ್ನರ್ ಪ್ರವೇಶ ಮಾಡುವ ಮೊದಲೇ ಒಂದು ಮಂಟಪದಂತಹ ಜಾಗದಲ್ಲಿ ನಿಂತು ಅದರ ನಾಲ್ಕೂ ಮೂಲೆಗೂ ಹಬ್ಬಿದ್ದ ಮಲ್ಲಿಗೆ ಬಳ್ಳಿಯನ್ನು ನೋಡುತ್ತಾ ಅದರ ಸುಗಂಧವನ್ನು ಅಘ್ರಾಣಿಸಲು ನಿಂತರು. ಇಹದಲ್ಲಿ ನಿಂತು ಪರಲೋಕಕ್ಕೆ ಕೈಚಾಚಿ ನಿಂತ ಘಳಿಗೆಯಾಗಿ ನನಗದು ಕಂಡಿತು. ಆ ಕ್ಷಣದಲ್ಲಿ ನನಗವರ ಮೇಲೆ ಕ್ಯಾಬಲ್ಲಿ ಉಕ್ಕಿದ್ದ ಕೋಪವೆಲ್ಲಾ ಮಾಯವಾಯಿತು. ಉಷಾಳ ಗಂಡ ಅನಿಕೇತ್ ನೋಡುವುದಕ್ಕೆ ನಿಜಕ್ಕೂ ಚೆನ್ನಾಗಿದ್ದ.
ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಕಳೆದುಕೊಂಡವರ ನೆನಪಿನಲ್ಲಿ…

ಕರ್ಫ್ಯೂ ಆಗಿ ಅಂಚೆ ವ್ಯವಸ್ಥೆ ನಿಂತು ಹೋಗಿತ್ತು. ಒಂದು ಮುಖ್ಯವಾದ ಪಾರ್ಸೆಲ್ ಅಂಚೆ ಇಲಾಖೆಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಊರಿನಲ್ಲಿರುವ ಹೈಸ್ಕೂಲ್ ಗೆಳೆಯ ಆನಂದನಿಗೆ ಫೋನ್ ಮಾಡಿದ್ದೆ. ಅವರ ತಂದೆ ಊರಿನಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದರು. ‘ಏನಾದರೂ ಮಾಡಕ್ಕಾಗತ್ತಾ?’ ಕೇಳಿದ್ದೆ. ಆಗ ಚೆನ್ನಾಗೆ ಮಾತಾಡಿದ್ದ. ಅದಾಗಿ ಒಂದು ವಾರಕ್ಕೆ ಫೇಸಬುಕ್ಕಲ್ಲಿ ‘ರೆಸ್ಟ್ ಇನ್ ಪೀಸ್ ಆನಂದ್’ ಎಂದು ಸುದ್ದಿ ಬಂತು. ಕೋವಿಡ್ ಇಷ್ಟು ಹತ್ತಿರಕ್ಕೆ ಬಂತು. ಒಂದು ಸಾಂಕ್ರಾಮಿಕ ರೋಗ ಎಲ್ಲವನ್ನೂ ಹೀಗೆ ಕಸವನ್ನು ಬುಟ್ಟಿಯಲ್ಲಿ ಹಾಕಿ ಹೊತ್ತೊಯ್ಯುವಂತೆ ಮನುಷ್ಯರನ್ನು ಹೊತ್ತೊಯ್ಯಲು ಆರಂಭಿಸಿತ್ತು. ವ್ಯಾಪಾರವೇ ಇಲ್ಲದೆ ಜನ ಊಟಕ್ಕಾಗಿ ಪರದಾಡಿದ್ದರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ