Advertisement

ದೇವಿಕಾ ನಾಗೇಶ್

ಕಳೆದುಕೊಂಡವರ ನೆನಪಿನಲ್ಲಿ…

ಕರ್ಫ್ಯೂ ಆಗಿ ಅಂಚೆ ವ್ಯವಸ್ಥೆ ನಿಂತು ಹೋಗಿತ್ತು. ಒಂದು ಮುಖ್ಯವಾದ ಪಾರ್ಸೆಲ್ ಅಂಚೆ ಇಲಾಖೆಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಊರಿನಲ್ಲಿರುವ ಹೈಸ್ಕೂಲ್ ಗೆಳೆಯ ಆನಂದನಿಗೆ ಫೋನ್ ಮಾಡಿದ್ದೆ. ಅವರ ತಂದೆ ಊರಿನಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದರು. ‘ಏನಾದರೂ ಮಾಡಕ್ಕಾಗತ್ತಾ?’ ಕೇಳಿದ್ದೆ. ಆಗ ಚೆನ್ನಾಗೆ ಮಾತಾಡಿದ್ದ. ಅದಾಗಿ ಒಂದು ವಾರಕ್ಕೆ ಫೇಸಬುಕ್ಕಲ್ಲಿ ‘ರೆಸ್ಟ್ ಇನ್ ಪೀಸ್ ಆನಂದ್’ ಎಂದು ಸುದ್ದಿ ಬಂತು. ಕೋವಿಡ್ ಇಷ್ಟು ಹತ್ತಿರಕ್ಕೆ ಬಂತು. ಒಂದು ಸಾಂಕ್ರಾಮಿಕ ರೋಗ ಎಲ್ಲವನ್ನೂ ಹೀಗೆ ಕಸವನ್ನು ಬುಟ್ಟಿಯಲ್ಲಿ ಹಾಕಿ ಹೊತ್ತೊಯ್ಯುವಂತೆ ಮನುಷ್ಯರನ್ನು ಹೊತ್ತೊಯ್ಯಲು ಆರಂಭಿಸಿತ್ತು. ವ್ಯಾಪಾರವೇ ಇಲ್ಲದೆ ಜನ ಊಟಕ್ಕಾಗಿ ಪರದಾಡಿದ್ದರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ರುಚಿಯ ದಾರಿ ಹಿಡಿದವರ ಕಥೆ

ಕೋವಿಡ್ ಮೊದಲನೇ ಅಲೆಯ ಕಾರಣದಿಂದ ಹಲವರು ಕೆಲಸ ಕಳೆದುಕೊಳ್ಳುತ್ತಿದ್ದರು. ಮತ್ತೊಂದಿಷ್ಟು ಕಡೆ ಪರ್ಸಂಟೇಜ್ ಸ್ಯಾಲರಿಗೆ ಬಂದು ನಿಂತಿತ್ತು. ಸಂಯೋಜಕರಾಗಿ ಕೆಲಸ ಮಾಡುತ್ತಿದ್ದ ಮಿಸಸ್ ಪ್ರೆಸಿಲ್ಲಾ ಅವರನ್ನು ಹೆಚ್ಚುವರಿ ಹುದ್ದೆಗಳನ್ನು ವಜಾ ಮಾಡುವ ನೆಪ ಹೇಳಿ ಕೆಲಸದಿಂದ ತೆಗೆದು ಹಾಕಿದ್ದರು. ಅವರೇ ರೆಫರ್ ಮಾಡಿದ್ದ, ನಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಇಂಗ್ಲಿಷ್ ಭಾಷಾ ಅಧ್ಯಾಪಕರಾಗಿ ಸೇರಿಕೊಂಡರು. ನಾವೀಗ ಸಹೋದ್ಯೋಗಿಗಳಾಗಿದ್ದೆವು. ಜಂಕ್ಷನ್ ಪಾಯಿಂಟ್ ಅಂಕಣದಲ್ಲಿ ದಾದಾಪೀರ್ ಜೈಮನ್ ಬರಹ

Read More

ಕ್ಷಮೆ ಎಂಬ ಕನ್ನಡಿ…

‘ಡು ಐ ಹೇಟ್ ಮೈಸೆಲ್ಫ್?’ ಎಂದೆಲ್ಲಾ ಅನ್ನಿಸಲು ಶುರುವಾದರೂ ಬಲವಂತವಾಗಿ ಇಂತಹ ಯೋಚನೆಗಳನ್ನು ಅದುಮಿಟ್ಟೆ. ಇದೆಲ್ಲದರಿಂದ ಹೊರಬರಲು ಸಿನಿಮಾ ನೋಡುವುದೇ ಸೂಕ್ತ ಎಂದುಕೊಂಡು ಅವಳಲ್ಲಿ ಪ್ರಸ್ತಾಪಿಸಿದರೆ ಅವಳು ಒಲ್ಲದ ಮನಸ್ಸಿನಿಂದಲೇ ಸಮ್ಮತಿಸಿದಳು. ಸಿನಿಮಾದಲ್ಲಿ ಪ್ರತಿ ಪಾತ್ರಕ್ಕೆ ಅವಳು ತನ್ನನ್ನು, ರಘು ಮತ್ತು ಪೀಟರನಿಗೆ ಹೋಲಿಸಿಕೊಂಡು ಅದು ತನ್ನದೇ ಕಥೆಯಂತೆ ಭಾವಿಸಿ ಒಂದು ಭ್ರಮಾತ್ಮಕ ಸ್ಥಿತಿಗೆ ತಲುಪಿದಂತೆ ಕಾಣುತ್ತಿದ್ದಳು. ಯಾಕೋ ನನಗೆ ಹಿಂಸೆಯಾಗತೊಡಗಿತು. ನನ್ನ ಮಾನಸಿಕ ಸ್ಥಿಮಿತವನ್ನೇ ತಾನು ಕಳೆದುಕೊಳ್ಳುತ್ತಿದ್ದೇನೆ ಎನ್ನಿಸಲು ಶುರುವಾಯಿತು.

Read More

ಹೀಗೊಂದು ‘ಭಿನ್ನ ಸಾಮಾನ್ಯ’ರ ಪ್ರೇಮಚರಿತೆ

‘ಜೀವನದಲ್ಲೊಂದು ಘಳಿಗೆ ಬಂದಿತು. ನಾನೊಬ್ಬ ಗೇ ಎನ್ನುವುದೇ ನನ್ನ ಟ್ರು ಐಡೆಂಟಿಟಿ ಎಂದು ಅನಿಸೋಕೆ ಶುರುವಾಯಿತು. ಆಗ ನಾನು ನನ್ನ ತಂದೆ ತಾಯಿಗೆ ಹೇಳಲೇಬೇಕಾಯಿತು. ಅಪ್ಪ ಮೊದಲಿಗೆ ನೀನು ಮನೆಗೆ ವಾಪಸ್ ಬರಬೇಕೆಂದರೆ ಅದೆಲ್ಲ ಬಿಡಬೇಕು ಎಂದರು. ಬಿಡುವುದಕ್ಕೆ ಅದೇನದು? ನನ್ನನ್ನ ನಾನಿರುವ ಹಾಗೆ ಒಪ್ಪಿಕೊಳ್ಳದಿದ್ದರೆ ನಾನು ಬರುವುದಿಲ್ಲ ಎಂದಿದ್ದೆ. ಕೂಡಲೇ ಫೋನ್ ಕಟ್ ಮಾಡಿದ್ದರು. ಆಮೇಲೇನಾಯಿತೋ ಏನೋ ಮತ್ತೆ ಅವರಿಂದ ಫೋನ್ ಬಂದಿತು… ನಾವಿಬ್ಬರು ಬೆಂಗಳೂರಿನಲ್ಲಿ ಜೊತೆಗಿರಲು ಶುರುಮಾಡಿದಾಗ ನಿನಗೊಬ್ಬಳು ಹೆಂಗಸು ಬೇಕೇ ಬೇಕು ಅಂದ್ರು.’

Read More

ಉಳಿದು ಬದುಕುವುದನ್ನೇ ಆಯ್ಕೆ ಮಾಡಿಕೊಂಡವನ ಕಥೆ

ಒಮ್ಮೊಮ್ಮೆ ಯೋಚಿಸಿದರೆ ನಮ್ಮ ಅಳತೆಗಳನ್ನು ಯೋಜನೆಗಳನ್ನು ಮೀರಿ ಜೀವನದಲ್ಲಿ ಏನೋ ಘಟಿಸುತ್ತಿರುತ್ತದೆ. ಒಮ್ಮೊಮ್ಮೆ ಅದಕ್ಕೊಂದು ಅರ್ಥವೇ ಇರುವುದಿಲ್ಲ. ತರಗೆಲೆಯಂತೆ ತೂರಿ ಎತ್ತೆತ್ತಲೋ ಹಾರಿ ಮತ್ತೆಲ್ಲೋ ಮತ್ಯಾವುದೋ ಮಣ್ಣಿನಲ್ಲಿ ಸೇರಿ ಕೊಳೆತು ಹೋಗಿಬಿಡುವ ಹಾಗೆ ಅನಿಸುತ್ತದೆ. ಬದುಕೇ ಹಾಗೆ! ಹುಡುಕುವಾಗ ನಾವು ಹುಡುಕುತ್ತಿರುವುದು ಸಿಗುವುದಿಲ್ಲ. ಹುಡುಕುವುದನ್ನು ನಿಲ್ಲಿಸಿದಾಗ ಧುತ್ತೆಂದು ತಂದು ಎಸೆಯುತ್ತದೆ. ಈ ಬದುಕಿಗೆ ಅರ್ಥ ಎನ್ನುವುದು ಇದೆಯೇ? ಈ ಬದುಕು ಅರ್ಥಗಳ ಹಂಗನ್ನು ಮೀರಿಕೊಳ್ಳಲು ಪ್ರಯತ್ನಿಸುತ್ತಿರುವ ಕವಿತೆಯೇ?

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ