Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಹೀಗೊಂದು ‘ಭಿನ್ನ ಸಾಮಾನ್ಯ’ರ ಪ್ರೇಮಚರಿತೆ

‘ಜೀವನದಲ್ಲೊಂದು ಘಳಿಗೆ ಬಂದಿತು. ನಾನೊಬ್ಬ ಗೇ ಎನ್ನುವುದೇ ನನ್ನ ಟ್ರು ಐಡೆಂಟಿಟಿ ಎಂದು ಅನಿಸೋಕೆ ಶುರುವಾಯಿತು. ಆಗ ನಾನು ನನ್ನ ತಂದೆ ತಾಯಿಗೆ ಹೇಳಲೇಬೇಕಾಯಿತು. ಅಪ್ಪ ಮೊದಲಿಗೆ ನೀನು ಮನೆಗೆ ವಾಪಸ್ ಬರಬೇಕೆಂದರೆ ಅದೆಲ್ಲ ಬಿಡಬೇಕು ಎಂದರು. ಬಿಡುವುದಕ್ಕೆ ಅದೇನದು? ನನ್ನನ್ನ ನಾನಿರುವ ಹಾಗೆ ಒಪ್ಪಿಕೊಳ್ಳದಿದ್ದರೆ ನಾನು ಬರುವುದಿಲ್ಲ ಎಂದಿದ್ದೆ. ಕೂಡಲೇ ಫೋನ್ ಕಟ್ ಮಾಡಿದ್ದರು. ಆಮೇಲೇನಾಯಿತೋ ಏನೋ ಮತ್ತೆ ಅವರಿಂದ ಫೋನ್ ಬಂದಿತು… ನಾವಿಬ್ಬರು ಬೆಂಗಳೂರಿನಲ್ಲಿ ಜೊತೆಗಿರಲು ಶುರುಮಾಡಿದಾಗ ನಿನಗೊಬ್ಬಳು ಹೆಂಗಸು ಬೇಕೇ ಬೇಕು ಅಂದ್ರು.’

Read More

ಉಳಿದು ಬದುಕುವುದನ್ನೇ ಆಯ್ಕೆ ಮಾಡಿಕೊಂಡವನ ಕಥೆ

ಒಮ್ಮೊಮ್ಮೆ ಯೋಚಿಸಿದರೆ ನಮ್ಮ ಅಳತೆಗಳನ್ನು ಯೋಜನೆಗಳನ್ನು ಮೀರಿ ಜೀವನದಲ್ಲಿ ಏನೋ ಘಟಿಸುತ್ತಿರುತ್ತದೆ. ಒಮ್ಮೊಮ್ಮೆ ಅದಕ್ಕೊಂದು ಅರ್ಥವೇ ಇರುವುದಿಲ್ಲ. ತರಗೆಲೆಯಂತೆ ತೂರಿ ಎತ್ತೆತ್ತಲೋ ಹಾರಿ ಮತ್ತೆಲ್ಲೋ ಮತ್ಯಾವುದೋ ಮಣ್ಣಿನಲ್ಲಿ ಸೇರಿ ಕೊಳೆತು ಹೋಗಿಬಿಡುವ ಹಾಗೆ ಅನಿಸುತ್ತದೆ. ಬದುಕೇ ಹಾಗೆ! ಹುಡುಕುವಾಗ ನಾವು ಹುಡುಕುತ್ತಿರುವುದು ಸಿಗುವುದಿಲ್ಲ. ಹುಡುಕುವುದನ್ನು ನಿಲ್ಲಿಸಿದಾಗ ಧುತ್ತೆಂದು ತಂದು ಎಸೆಯುತ್ತದೆ. ಈ ಬದುಕಿಗೆ ಅರ್ಥ ಎನ್ನುವುದು ಇದೆಯೇ? ಈ ಬದುಕು ಅರ್ಥಗಳ ಹಂಗನ್ನು ಮೀರಿಕೊಳ್ಳಲು ಪ್ರಯತ್ನಿಸುತ್ತಿರುವ ಕವಿತೆಯೇ?

Read More

ರಾಜರಥದಲ್ಲಿ ವಿರಾಜಮಾನರಾದ ಭುವನಮ್ಮನ ಕತೆ

‘ನಮ್ಮನೆಯವನಿಗೆ ಊಟಾನು ನಾನೇ ತಿನಿಸಬೇಕು. ತಿಂಡಿನೂ ನಾನೆ ತಿನಿಸಬೇಕು. ಅವ್ನ ಪ್ರತಿ ಕೆಲ್ಸನೂ ನಾನೇ ಮಾಡಿಕೊಡಬೇಕು. ಸದಾ ನನ್ ಹಿಂದೇನೆ ಸುತ್ತುತ್ತಾ ಇರುತ್ತೆ ಅಸಾಮಿ. ಪ್ರೀತಿ ವಿಷಯಕ್ಕೆ ಬಂದಾಗ ಒಂದು ಎಳ್ಳಷ್ಟೂ ಕೂಡ ಕಡಿಮೆ ಮಾಡಿಲ್ಲ. ನನ್ನನ್ನು ಜೀವಕ್ಕೆ ಜೀವಕ್ಕಿಂತ ಪ್ರೀತಿಸ್ತಾರೆ. ಆ ವಿಷ್ಯದಲ್ಲಿ ನಾನು ತುಂಬಾ ತುಂಬಾ ಪುಣ್ಯವಂತೆ.’ಎಂದು ಮಿಂಚುಗಣ್ಣಾಗಿ ಆಕೆ ಹೇಳಿದ್ದು ಇಂದಿಗೂ ನೆನಪಿದೆ.  ‘ಆದ್ರೆ ದುಡ್ಡಿನ ಜವಾಬ್ದಾರಿ ಅಂದ್ರೆ ಉಹೂ ಎಂದುಬಿಡುತ್ತಾರೆ’  ಎಂದು ಆಕೆ ಸೇರಿಸಿದರು.
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ ಬರಹ 

Read More

ಕಡೆಪಾನ್ ಬಸ್ಯಾನ ಲೀಲಾವಳಿ

ಅವನು ಹೇಳುತ್ತಿರುವುದು ಬರಿ ಕಥೆಯೇ. ಸುಳ್ಳು ಕಥೆ. ಅವನ ಕಲ್ಪನೆಯಲ್ಲಿ ಅರಳುವ ಕಥೆ ಎನ್ನುವುದಕ್ಕೆ ಪುರಾವೆ ಎಂಬಂತೆ ನನ್ನ ಬಳಿ ಹಲವಾರು ನಿದರ್ಶನಗಳಿವೆ. ಅವನು ತನ್ನೆಲ್ಲಾ ದಿನಚರಿಯಲ್ಲಿ ನಟ ಯಶ್ ಅನ್ನು ಅನುಕರಿಸುತ್ತಿದ್ದ. ಕೆ. ಜಿ. ಎಫ್. ಸಿನಿಮಾದ ಅವನ ಗೆಟಪನ್ನು ಅನುಕರಿಸುವುದು. ಪುರುಷ ಪ್ರಾಧಾನ್ಯದ ಮುಖ್ಯವಾಹಿನಿಯ ಮಾಸ್ ಸಿನಿಮಾಗಳಲ್ಲಿ ಹೀರೋಗಳು ಹೊಡೆಯುವ ಅಸೂಕ್ಷ್ಮ ಡೈಲಾಗುಗಳನ್ನು ಅವನು ವಾಟ್ಸಪ್ಪ್ ರೀಲಾಗಿ ಇಡುತ್ತಿದ್ದ. ಅವನು ಕನಸುತ್ತಿದ್ದ ಭವಿಷ್ಯದ ಬಸವರಾಜನ ಪೂರ್ವ ಬಿಂಬದ ಪರಿಕರಗಳನ್ನು ಪುಷ್ಟೀಕರಿಸುವಂತೆ ಅವು ಇರುತ್ತಿದ್ದವು.
ದಾದಾಪೀರ್‌ ಜೈಮನ್ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ದಾದಾಪೀರ್ ಜೈಮನ್ ಹೊಸ ಅಂಕಣ “ಜಂಕ್ಷನ್ ಪಾಯಿಂಟ್” ಇಂದು ಆರಂಭ

‘ನಾವು ಯಾವಾಗಲೂ ಹಾಗೆಯೇ ಅಲ್ಲವಾ? ನಮಗೆ ಗೊತ್ತಿರುವ ಯಾವುದೋ ಎಳೆ, ಬೇರೆಯವರ ಮಾತುಗಳಲ್ಲಿ ಬಂದಾಗ ಮಾತ್ರ ಅವರ ಮೇಲಿನ ವಿಶ್ವಾಸಾರ್ಹತೆ ಮತ್ತು ನಂಬಿಕೆ ಹೆಚ್ಚುತ್ತದೆ. ಅಲ್ಲೂ ಹೀಗೆ ಆಯಿತು’ ಎನ್ನುತ್ತ ಪೀಜಿ ಹಾಸ್ಟೆಲ್ ರೂಮ್ ನಲ್ಲಿ ನಡೆದ ಭೇಟಿಯೊಂದರ ಕುರಿತು ಬರೆದಿದ್ದಾರೆ ಹೊಸ ತಲೆಮಾರಿನ ಕಥೆಗಾರ ದಾದಾಪೀರ್ ಜೈಮನ್. ತಮ್ಮ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಯ ಸಂದರ್ಭದಲ್ಲಿ ಹೀಗೆ ಭೇಟಿಯಾದ ವ್ಯಕ್ತಿಗಳ ಕುರಿತು, ಸನ್ನಿವೇಶಗಳ ಕುರಿತು ಅವರು ತಮ್ಮ ಹೊಸ ಅಂಕಣ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ