ಖಾದ್ರಿಗಳು ಮತ್ತು ಅವರ ಬದುಕು!: ದರ್ಶನ್ ಜಯಣ್ಣ ಸರಣಿ
“ನಮ್ಮ ಮನೆಯಲ್ಲಿ ನಾನೇ ಚಿಕ್ಕವನು ಮತ್ತು ಓದಿದ್ದು ನಾನೊಬ್ಬನೇ, ನನ್ನೆಲ್ಲಾ ಒಡಹುಟ್ಟಿದವರು ತೀರಿಹೋಗಿದ್ದಾರೆ. ಹರೆಯದರಲ್ಲೇ ಇಲ್ಲಿಗೆ ಬಂದದ್ದರಿಂದ ಯಾರೊಟ್ಟಿಗೂ ಅಂತಹಾ ಗೆಳೆತನವೂ ಉಳಿದಿಲ್ಲ. ನಮಗೆ ಮಕ್ಕಳಿಲ್ಲವಾದುದರಿಂದ ನನ್ನ ಹೆಂಡತಿಗೂ ಇಲ್ಲಿನ ಜೀವನ, ಅನಾಮಿಕತೆ, ಬೇಡದ ವಿಷಯಗಳಲ್ಲಿ ತಲೆಹಾಕುವ ಜನಗಳ ಕಿರಿ ಕಿರಿ ಯಾವುದೂ ಇಲ್ಲ ಮತ್ತು ಬೇಡವಾಗಿದೆ. ಅವಳಿಗೂ ಅಲ್ಲಿ ಹೇಳಿಕೊಳ್ಳುವ ಬಂಧು- ಬಂಧ ಎರಡೂ ಇಲ್ಲ. ಇಲ್ಲೂ ಇಲ್ಲ ಅನ್ನಿ, ಆದರೆ ನಾವಿಲ್ಲಿಗೆ ಒಗ್ಗಿ ಹೋಗಿದ್ದೇವೆ! ನಾನು ಬದುಕಿರುವವರೆಗೂ ನನ್ನ ವೀಸಾದಲ್ಲಿ ಅವಳಿಲ್ಲಿ ಇರಬಹುದು. ಆಮೇಲಿನದ್ದು ‘ಅಲ್ಲಾಹುವಿನ’ ಇಚ್ಛೆ. ಸತ್ತರೇ ಅವನದ್ದೇ ಮಣ್ಣಿನಲ್ಲಿ ಹೂಳುತಾರೆ. ಮತ್ತೇನು ಬೇಕು?”
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿ
