ದೀಪಾ ಗೋನಾಳ ಬರೆದ ಈ ದಿನದ ಕವಿತೆ
ಪದ್ಯ ಸಿಗದಿದ್ದಾಗ ತನ್ನ ತಾನು ಪದಪದವೆಂದು ಬಗೆದು ಒಂದೊಂದೆ ಅಡಿ ಮುಂದಿಡುತ್ತಾ ಬರುತ್ತಾಳೆ, ಬರುತ್ತ ಬರುತ್ತ ತನಗೂ...
Read MorePosted by ದೀಪಾ ಗೋನಾಳ | Jan 2, 2026 | ದಿನದ ಕವಿತೆ |
ಪದ್ಯ ಸಿಗದಿದ್ದಾಗ ತನ್ನ ತಾನು ಪದಪದವೆಂದು ಬಗೆದು ಒಂದೊಂದೆ ಅಡಿ ಮುಂದಿಡುತ್ತಾ ಬರುತ್ತಾಳೆ, ಬರುತ್ತ ಬರುತ್ತ ತನಗೂ...
Read MorePosted by ದೀಪಾ ಗೋನಾಳ | Oct 19, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ ಪತ್ರವಿದೆಯಲ್ಲ ಅದು ಒಬ್ಬ ಆದರ್ಶ ತಂದೆ ತನ್ನ ಮಗಳ ಕುರಿತ ಅಪರಿಮಿತ ಅಪ್ಯಾಯತೆ ಮತ್ತು ಕಾಳಜಿಯಿಂದ ಮಾಡಿದ ಕೆಲಸವೆಂದೇ ನನ್ನ ದೃಢಭಾವನೆ. ಈ ಪತ್ರಗಳು ಒಮ್ಮೊಮ್ಮೆ ಖಂಡಕಾವ್ಯದಂತೆಯೂ ಭಾಸವಾಗಿದ್ದು ನನಗೆ ಆಶ್ಚರ್ಯ ಹುಟ್ಟಿಸಿದೆ.
ಎಂಕೆ ಗಾಂಧಿ ರಚಿತ “ಪ್ರಿಯ ಮೀರಾ” ಬಾಪು ಮಗಳಿಗೆ ಬರೆದ ಪ್ರೇಮ ಪತ್ರಗಳನ್ನು ಮಂಜುನಾಥ್ ಚಾಂದ್ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ದೀಪಾ ಗೋನಾಳ ಬರಹ
Posted by ದೀಪಾ ಗೋನಾಳ | Jan 29, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ
Posted by ದೀಪಾ ಗೋನಾಳ | Oct 2, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕವಿಯಾದವನಿಗೆ ತನ್ನ ಪದಗಳ ಗೊಡವೆ ಬೇಡ, ಅದು ಯಾರದ್ದೊ ನೋವು, ಆರ್ತನಾದ ಮಾತ್ರ ನನ್ನದು ಎನ್ನುವ ದೈನ್ಯತೆ ಎಂದಿಗೂ ಬೇಕು. ಅದು ನನ್ನ ಮಿತ್ರನ ಕವಿತೆಗಳಲಿ ತುಂಬಿ ಹೋಗಿದೆ. ಹೀಗಾಗಿಯೇ ಈ ಸಂಕಲನ ‘ಗಾಯಗೊಂಡ ಸಾಲುಗಳು’ ಎಂಬ ಹಣೆಪಟ್ಟಿ ಹೊತ್ತು ಹೊರಬಂದಿವೆ. ಗಾಯಗೊಂಡ ಪದಗಳನೇ ಹೆಣೆದು ಬ್ಯಾಂಡೇಜು ಕಟ್ಟಿದ ಪದಗಳಿವು. ಯಾರೂ ಮೂಸದ ಸರ್ಕಾರಿ ಆಸ್ಪತ್ರೆಯ ಕಟ್ಟೆಯ ಮೇಲೆ ಕೂತ ಅನಾಥ ವೃದ್ಧನಂತೆ ಇಲ್ಲಿನ ಕವಿತೆಗಳು ಕಾಣಿಸತೊಡಗುತ್ತವೆ.
ಸದಾಶಿವ ಸೊರಟೂರು ಕವನ ಸಂಕಲನ “ಗಾಯಗೊಂಡ ಸಾಲುಗಳು” ಕುರಿತು ದೀಪಾ ಗೋನಾಳ ಬರಹ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
