Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್‌ ಬರಹ

ಬಂಗಾಳದ ರಕ್ತ ಚರಿತ್ರೆಯನ್ನು ಲಕ್ಷಾಂತರ ಜನರ ನಿತ್ಯ ನರಕವನ್ನು ಪ್ರಭುತ್ವಗಳ ನಾಚಿಕೆಗೇಡಿನ ಹುಸಿತನವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಈ ಕೃತಿ ತೆರೆದಿಡುತ್ತದೆ. ಹಳೆಯ ಕಳೆದ ಶತಮಾನದ ಕೊನೆಯಲ್ಲಿ ನಮ್ಮ ದೇಶದಲ್ಲಿ ಹಲವು ಹೆಸರಾಂತ ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆಯನ್ನು ಅವರ ಅಸಲಿ ಮುಖವನ್ನು ತೆರೆದಿಡುತ್ತದೆ. “ವಿರೋಧಿಗಳು ನನಗೆ ಪ್ರೀತಿ ತೋರಿಸಿದಾಗ ಸಾಧ್ಯವಾಗದ್ದು, ಕೋಪ ತೋರಿಸಿದಾಗ ಸಾಧ್ಯವಾಗಿದೆ. ನನ್ನ ಕೋಪವನ್ನು ಅವರು ಜೀವಂತವಾಗಿಟ್ಟಿದ್ದಾರೆ. ಅವರ ಕೋಪದ ಫಲ ಶ್ರುತಿಯೇ ನನ್ನ ಪುಸ್ತಕ.” ಬ್ಯಾಪಾರಿಯವರ ಮಾತಿದು.
ಮನೋರಂಜನ್‌ ಬ್ಯಾಪಾರಿಯವರ ಆತ್ಮಕತೆಯನ್ನು ಡಾ. ಎಚ್. ಎಸ್.ನಾಗಭೂಷಣ “ಚಾಂಡಾಳನೊಬ್ಬನ ಆತ್ಮ ವಿಮರ್ಶೆ” ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು ಇದರ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

Read More

ಸೇವೆಯಲ್ಲಿ ಜೀವ ಸವೆಸುವ ಜೀವಗಳು…: ದೇವಿಕಾ ನಾಗೇಶ್‌ ಬರಹ

ಪ್ರತಿಯೊಂದು ಜೀವಿ ತನ್ನ ಅಸ್ತಿತ್ವದಿಂದ ವಿಶೇಷ ಅನ್ನಿಸಿಕೊಳ್ಳುವುದು ತಾನು ಮಾಡುವ ಸೇವೆಯಿಂದ ಎಂದು ನಂಬಿ ನಡೆಯುವ ಈ ಸನ್ಯಾಸಿನಿಯರು ಜಗತ್ತಿನ ಪಾಪ ತುಳಿಯುವ ಕಾಯಕ ತಮ್ಮದು ಎಂದು ನಂಬಿದವರು. ಹಾಗೆ ನೋಡಿದರೆ ಲಲ್ಲೇಶ್ವರಿ, ಅಕ್ಕಮಹಾದೇವಿ, ಮೀರಾ, ಸೂಫಿ ಸಂತ ಮಹಿಳೆಯರಾದ ಉಲೇಮ ರಬಿಯ ನಫೀಜಾ ತಮ್ಮ ಬದುಕಿನಲ್ಲಿ ಎದುರಾದ ಸಂಕಷ್ಟಗಳಿಗೆ ಮುಖಾಮುಖಿಯಾಗುತ್ತಲೇ ಜನ ಜೀವನದ ಸಂಕಷ್ಟಗಳಿಗೆ ಸ್ಪಂದಿಸುತ್ತ ಸಾಧನೆಯ ಪಥದಲ್ಲಿ ಮುನ್ನಡೆದವರು.
ಬಿ.ಎಂ. ರೋಹಿಣಿ ಹಾಗೂ ಮೋಲಿ ಮಿರಾಂದ ಬರೆದ “ಧರ್ಮ ಭಗಿನಿಯರು” ಕೃತಿಯ ಕುರಿತು ದೇವಿಕಾ ನಾಗೇಶ್‌ ಬರಹ

Read More

ಬೇರಿನಿಂದ ಬೆಳಕಿಗೆ: ಮಿತ್ರಾ ವೆಂಕಟ್ರಾಜ ಅನುವಾದಿತ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

‘ಒಂದು ಪುರಾತನ ನೆಲದಲ್ಲಿʼ ಕೃತಿ ಭಾರತ ಮತ್ತು ಈಜಿಪ್ಟ್‌ನಂತಹ ಎರಡು ಪುರಾತನ ನೆಲದ ಸಂಸ್ಕೃತಿಯ ತಾಯಿ ಬೇರುಗಳ ಸಂಶೋಧನೆಯ ಅತ್ಯುನ್ನತ ದಾಖಲೆಯಾಗಿದೆ. ಕಳೆದ ಆರು ಶತಮಾನಗಳಿಂದ ವಿಸ್ಮೃತಿಯೆಡೆಗೆ ದಾಪುಗಾಲಿಡುತ್ತಿರುವ ಕಡಲ ತೀರದ ಕೆಲವು ಮುಖ್ಯ ವ್ಯಾಪಾರ ಕೇಂದ್ರಗಳಲ್ಲಿನ, ಜನಜೀವನದ, ಸಾಂಸ್ಕೃತಿಕ ಸಾಮಾಜಿಕ ಬದುಕಿನ ಚಿತ್ರಣವನ್ನು ಪಾತ್ರಗಳ ಮೂಲಕ ಕಟ್ಟಿಕೊಡುವ ಇಲ್ಲಿನ ಕ್ರಮ ವಿನೂತನವಾಗಿದೆ.
ಹಿರಿಯ ಕಾದಂಬರಿಕಾರ್ತಿ ಮಿತ್ರಾ ವೆಂಕಟರಾಜ್ ಅನುವಾದಿಸಿರುವ ‘ಒಂದು ಪುರಾತನ ನೆಲದಲ್ಲಿʼ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

Read More

ದೇವಿಕಾ ನಾಗೇಶ್‌ ಬರೆದ ಈ ಭಾನುವಾರದ ಕತೆ

ಸಬಿತ ಚಿಕ್ಕಿಗೆ ಬರೆಯುವ ಪತ್ರದಲ್ಲಿ ಪದ್ದಜ್ಜನ ಮಾಮೂಲಿನ ಕ್ಷೇಮ ಸಮಾಚಾರ, ಉಭಯ ಕುಶಲೋಪರಿ, ಅಳಿಯಂದಿರಿಗೆ ಮೊಮ್ಮಕ್ಕಳಿಗೆ ಆಶೀರ್ವಾದದ ಜೊತೆಗೆ ಪತ್ರ ಮುಗಿಯುತಿದ್ದರೆ ಬಾಗಿದೊಡ್ಡನಿಗೆ ಬರೆಯಲು ಬಾಕಿ ಇನ್ನೊಂದಷ್ಟು ವಿಚಾರಗಳು ಇರುತ್ತಿದ್ದವು.
ದೇವಿಕಾ ನಾಗೇಶ್‌ ಬರೆದ ಈ ಭಾನುವಾರದ ಕತೆ “ಕತೆ ಕತೆ ಕಾರಣ” ನಿಮ್ಮ ಓದಿಗೆ

Read More

ಅಜ್ಜರಕಾಡು ಮತ್ತು ಅಜ್ಜ

ಆಸ್ಪತ್ರೆಗೆ ಸೇರಿಸಿದ ಒಂಬತ್ತು ದಿನದವರೆಗೆ ಶೆಟ್ರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಅವರು ನಂಬಿಕೊಂಡು ಬಂದ ಮನೆ ದೈವವಾದ ಅಬ್ಬಗ-ದಾರಗೆಯ ದಿನನಿತ್ಯದ ಪೂಜೆ ಪುನಸ್ಕಾರ ಮಾತ್ರವಲ್ಲದೆ ವರ್ಷಾವಧಿ ಜಾತ್ರೆಯ ಎಲ್ಲ ವಿಧಿ ವಿಧಾನಗಳನ್ನು ನಿಷ್ಠೆಯಿಂದ ಮಾಡಿಕೊಂಡು ಬಂದವರು. ಈಗ ಆ ದೇವಾಲಯದ ಪೂಜೆ ಮಾಡುವ ಭಟ್ರು ವಿಠ್ಠಲಶೆಟ್ಟಿಗಾಗಿ ವಿಶೇಷ ಹೂವಿನ ಪೂಜೆಯನ್ನು ಮಾಡಿ ಅದರ ಗಂಧ ಪ್ರಸಾದವನ್ನು ಆಸ್ಪತ್ರೆಗೆ ತಂದು ವಿಠಲ ಶೆಟ್ರ ಹಣೆಗೆ ಹಚ್ಚಿದ ನಂತರ ಅವರ ದೇಹಸ್ಥಿತಿಯಲ್ಲಿ ತುಸು ತುಸುವೇ ಬದಲಾವಣೆ ಆಗಿ ಅವರು ಚೇತರಿಸತೊಡಗಿದ್ದರು.
ದೇವಿಕಾ ನಾಗೇಶ್‌ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ