ಕರ್ವಾಲೋ ಮರು ಓದು, ಒಂದು ಧ್ಯಾನ: ದೇವಿಕಾ ನಾಗೇಶ್ ಬರಹ
ಇರುವೆಯಿಂದ ರಕ್ಷಿಸಿಕೊಳ್ಳಲು ಆ ಪ್ರಾಣಿ ಇದ್ದಕ್ಕಿದ್ದಂತೆ ಪಕ್ಕದ ದೊಡ್ಡ ಮರಕ್ಕೆ ಹಾರಿ ಮರ ಕೂತು ತನ್ನ ದೇಹಕ್ಕೆ ಅಂಟಿಕೊಂಡಿದ್ದ ಕೆಂಪಿರುವೆಗಳನ್ನು ತಿನ್ನತೊಡಗಿತು. ಇದು ಕಂಡು ಆಶ್ಚರ್ಯ ಚಕಿತರಾದ ಲೇಖಕರು ಹಾರೋ ಓತಿಕ್ಯಾತ ಇದು ಎಂದು ಖಾತ್ರಿಯಾದ ಖುಷಿಯಲ್ಲಿ ತನ್ನ ತಂಡದವರನ್ನು ಕೂಗಿ ಕರೆದರು. ಆದರೆ ಹಾರುವ ಓತಿಕ್ಯಾತ ಇದ್ದಲ್ಲಿ ನಿಲ್ಲುತ್ತದೆಯೇ? ಲೇಖಕರು ಅದನ್ನೇ ತದೇಕ ಚಿತ್ತರಾಗಿ ಕಣ್ಣಲ್ಲೇ ಹಿಂಬಾಲಿಸುತ್ತ ತಾವು ಕಂಡ ಈ ಅದ್ಭುತ ಸರೀಸೃಪವನ್ನು ತನ್ನ ತಂಡದವರಿಗೆ ಪರಿಚಯಿಸುವ ಆತುರದಲ್ಲಿದ್ದರು…
ಪೂರ್ಣಚಂದ್ರ ತೇಜಸ್ವಿಯವರ ಪ್ರಮುಖ ಕಾದಂಬರಿ “ಕರ್ವಾಲೋ”ದ ಮರು ಓದು, ದೇವಿಕಾ ನಾಗೇಶ್ ಬರಹ
