Advertisement

ಜಯಲಕ್ಷ್ಮಿ ಪಾಟೀಲ್

ಶತಮಾನ ಕಂಡ ವಿಸ್ಮಯ; ಅನ್ನಪೂರ್ಣಾ ದೇವಿ: ದೇವಿಕಾ ನಾಗೇಶ್‌ ಬರಹ

“ಯಾವುದೇ ಜ್ಞಾನಾರ್ಥಿ ನಿನ್ನನ್ನು ಹುಡುಕಿ ಬಂದರೆ ನೀನು ಎರಡನೆಯ ಯೋಚನೆ ಮಾಡದೆ ನಿನ್ನಲ್ಲಿರುವ ಜ್ಞಾನವನ್ನು ಹಂಚಬೇಕು. ತನ್ನ ಕುಟುಂಬದ ಸದಸ್ಯರಲ್ಲದವರಿಗೆ ಸಂಗೀತ ಹೇಳಿಕೊಡಲು ಹಿಂಜರಿಯುವ ಉಸ್ತಾದರನ್ನು ನಾನು ನನ್ನ ಬದುಕಿನಲ್ಲಿ ಕಂಡಿದ್ದೇನೆ. ಬೇರೆ ಬೇರೆ ಗುರುಗಳಿಂದ ಕಲಿಯುವಾಗ ನಾನು ಅನುಭವಿಸಿದ ತೊಂದರೆ, ನೋವು ಮತ್ತು ಕಷ್ಟ ನಿನ್ನಿಂದ ಊಹಿಸಲು ಸಾಧ್ಯವಿಲ್ಲ. ಎಲ್ಲ ಕಷ್ಟಗಳ ನಡುವೆಯೂ ನನ್ನ ಭಿಕ್ಷಾ ಪಾತ್ರೆಯಲ್ಲಿ ಏನನ್ನು ಸಂಗ್ರಹಿಸಲು ಸಾಧ್ಯವಾಯಿತು ಅದನ್ನು ನಾನು ಧಾರಾಳವಾಗಿ ಹಂಚಿದ್ದೇನೆ.”
ಅಪೂರ್ವ ಸಂಗೀತಗಾರ್ತಿ ಅನ್ನಪೂರ್ಣಾ ದೇವಿಯವರ ಕುರಿತು ಅತುಲ್‌ ಮರ್ಚಂಟ್‌ ಜಟಾಯು ಬರೆದ “ಅನ್ನಪೂರ್ಣಾ ದೇವಿ” ಕೃತಿಯನ್ನು ಎನ್‌. ಸಂಧ್ಯಾರಾಣಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತ ದೇವಿಕಾ ನಾಗೇಶ್‌ ಬರಹ ಇಲ್ಲಿದೆ.

Read More

ನೀರ ಮೇಲಣ ಗುಳ್ಳೆ-ಡಾಟರ್ ಆಫ್ ಪರ್ಷಿಯ: ದೇವಿಕಾ ನಾಗೇಶ್ ಬರಹ

ಈಕೆ ತನ್ನ ನೆಲದ ಸ್ಥಿತಿವಂತರು ಇಲ್ಲದವರ ಜೀವನ ಮಟ್ಟ ಸುಧಾರಣೆಗೆ ಕೈಜೋಡಿಸಿದರೆ ಸಾಮಾಜಿಕ, ರಾಜಕೀಯ, ಆಡಳಿತಾತ್ಮಕ ಬದಲಾವಣೆಗಳನ್ನು ತರಲು ಸಾಧ್ಯವಿದೆ… ಎನ್ನುವ ನಂಬಿಕೆ ಇದ್ದವರಾಗಿದ್ದಳು. ಈ ಹಿನ್ನೆಲೆಯಲ್ಲಿ ಅದ್ಭುತ ಯೋಜನೆಗಳನ್ನು ಹಾಕಿಕೊಂಡಿದ್ದಳು.. ಆಗ ಸ್ಪಂದಿಸಿದ ಹಲವರು ಈ ಸಾಧ್ಯತೆಯ ಪರಿಧಿಗಳನ್ನು ವಿಸ್ತರಿಸಿಕೊಂಡು ಆ ದೆಸೆಯಲ್ಲಿ ಸಕ್ರಿಯವಾದರು… ಇವಳ ಯೋಜನೆಗೆ ಕೈಜೋಡಿಸಿದರು.
ಸಟ್ಟರೆಹ್ ಫಾರ್ಮನ್ ಫರ್ಮ ಆತ್ಮಕಥೆ “ಡಾಟರ್ ಆಫ್ ಪರ್ಷಿಯಾ” ಕುರಿತು ದೇವಿಕಾ ನಾಗೇಶ್‌ ಬರಹ

Read More

“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್‌ ಬರಹ

ಬಂಗಾಳದ ರಕ್ತ ಚರಿತ್ರೆಯನ್ನು ಲಕ್ಷಾಂತರ ಜನರ ನಿತ್ಯ ನರಕವನ್ನು ಪ್ರಭುತ್ವಗಳ ನಾಚಿಕೆಗೇಡಿನ ಹುಸಿತನವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಈ ಕೃತಿ ತೆರೆದಿಡುತ್ತದೆ. ಹಳೆಯ ಕಳೆದ ಶತಮಾನದ ಕೊನೆಯಲ್ಲಿ ನಮ್ಮ ದೇಶದಲ್ಲಿ ಹಲವು ಹೆಸರಾಂತ ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆಯನ್ನು ಅವರ ಅಸಲಿ ಮುಖವನ್ನು ತೆರೆದಿಡುತ್ತದೆ. “ವಿರೋಧಿಗಳು ನನಗೆ ಪ್ರೀತಿ ತೋರಿಸಿದಾಗ ಸಾಧ್ಯವಾಗದ್ದು, ಕೋಪ ತೋರಿಸಿದಾಗ ಸಾಧ್ಯವಾಗಿದೆ. ನನ್ನ ಕೋಪವನ್ನು ಅವರು ಜೀವಂತವಾಗಿಟ್ಟಿದ್ದಾರೆ. ಅವರ ಕೋಪದ ಫಲ ಶ್ರುತಿಯೇ ನನ್ನ ಪುಸ್ತಕ.” ಬ್ಯಾಪಾರಿಯವರ ಮಾತಿದು.
ಮನೋರಂಜನ್‌ ಬ್ಯಾಪಾರಿಯವರ ಆತ್ಮಕತೆಯನ್ನು ಡಾ. ಎಚ್. ಎಸ್.ನಾಗಭೂಷಣ “ಚಾಂಡಾಳನೊಬ್ಬನ ಆತ್ಮ ವಿಮರ್ಶೆ” ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು ಇದರ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

Read More

ಸೇವೆಯಲ್ಲಿ ಜೀವ ಸವೆಸುವ ಜೀವಗಳು…: ದೇವಿಕಾ ನಾಗೇಶ್‌ ಬರಹ

ಪ್ರತಿಯೊಂದು ಜೀವಿ ತನ್ನ ಅಸ್ತಿತ್ವದಿಂದ ವಿಶೇಷ ಅನ್ನಿಸಿಕೊಳ್ಳುವುದು ತಾನು ಮಾಡುವ ಸೇವೆಯಿಂದ ಎಂದು ನಂಬಿ ನಡೆಯುವ ಈ ಸನ್ಯಾಸಿನಿಯರು ಜಗತ್ತಿನ ಪಾಪ ತುಳಿಯುವ ಕಾಯಕ ತಮ್ಮದು ಎಂದು ನಂಬಿದವರು. ಹಾಗೆ ನೋಡಿದರೆ ಲಲ್ಲೇಶ್ವರಿ, ಅಕ್ಕಮಹಾದೇವಿ, ಮೀರಾ, ಸೂಫಿ ಸಂತ ಮಹಿಳೆಯರಾದ ಉಲೇಮ ರಬಿಯ ನಫೀಜಾ ತಮ್ಮ ಬದುಕಿನಲ್ಲಿ ಎದುರಾದ ಸಂಕಷ್ಟಗಳಿಗೆ ಮುಖಾಮುಖಿಯಾಗುತ್ತಲೇ ಜನ ಜೀವನದ ಸಂಕಷ್ಟಗಳಿಗೆ ಸ್ಪಂದಿಸುತ್ತ ಸಾಧನೆಯ ಪಥದಲ್ಲಿ ಮುನ್ನಡೆದವರು.
ಬಿ.ಎಂ. ರೋಹಿಣಿ ಹಾಗೂ ಮೋಲಿ ಮಿರಾಂದ ಬರೆದ “ಧರ್ಮ ಭಗಿನಿಯರು” ಕೃತಿಯ ಕುರಿತು ದೇವಿಕಾ ನಾಗೇಶ್‌ ಬರಹ

Read More

ಬೇರಿನಿಂದ ಬೆಳಕಿಗೆ: ಮಿತ್ರಾ ವೆಂಕಟ್ರಾಜ ಅನುವಾದಿತ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

‘ಒಂದು ಪುರಾತನ ನೆಲದಲ್ಲಿʼ ಕೃತಿ ಭಾರತ ಮತ್ತು ಈಜಿಪ್ಟ್‌ನಂತಹ ಎರಡು ಪುರಾತನ ನೆಲದ ಸಂಸ್ಕೃತಿಯ ತಾಯಿ ಬೇರುಗಳ ಸಂಶೋಧನೆಯ ಅತ್ಯುನ್ನತ ದಾಖಲೆಯಾಗಿದೆ. ಕಳೆದ ಆರು ಶತಮಾನಗಳಿಂದ ವಿಸ್ಮೃತಿಯೆಡೆಗೆ ದಾಪುಗಾಲಿಡುತ್ತಿರುವ ಕಡಲ ತೀರದ ಕೆಲವು ಮುಖ್ಯ ವ್ಯಾಪಾರ ಕೇಂದ್ರಗಳಲ್ಲಿನ, ಜನಜೀವನದ, ಸಾಂಸ್ಕೃತಿಕ ಸಾಮಾಜಿಕ ಬದುಕಿನ ಚಿತ್ರಣವನ್ನು ಪಾತ್ರಗಳ ಮೂಲಕ ಕಟ್ಟಿಕೊಡುವ ಇಲ್ಲಿನ ಕ್ರಮ ವಿನೂತನವಾಗಿದೆ.
ಹಿರಿಯ ಕಾದಂಬರಿಕಾರ್ತಿ ಮಿತ್ರಾ ವೆಂಕಟರಾಜ್ ಅನುವಾದಿಸಿರುವ ‘ಒಂದು ಪುರಾತನ ನೆಲದಲ್ಲಿʼ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ