ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ
ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ