Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಹೊಸ ಜೀವಸೆಲೆ ಮತ್ತು ಹೊಸ ಹೊಳಹುಗಳು….

ರಾತ್ರಿ ನಿದ್ದೆಗೆಟ್ಟಿದ್ದಕ್ಕೆ ಬಂದಿದ್ದ ತಲೆಸುತ್ತೋ, ಹೊಟ್ಟೆಗಿಲ್ಲದೇ ಆದ ಆಯಾಸವೋ ಅಥವಾ ಹ್ಯಾಂಗೋವರೋ ಒಟ್ಟು ತಲೆ ಗಿಂ ಎಂದು ಬಹಳ ಜೋರಾಗಿ ಚಕ್ಕರ್ ಬಂದು ವಾಂತಿ ಬರುವ ಹಾಗಾಯಿತು. ಇನ್ನು ಒಂದೇ ಒಂದು ಕ್ಷಣ ನಿಂತಿದ್ದರೂ ಬಿದ್ದೇಬಿಡುತ್ತೇನೆ ಎಂದನಿಸಿತು. ಕೈಯಲ್ಲಿ ಹಸುಗೂಸಿದೆ ಎನ್ನುವುದನ್ನೂ ಮರೆತು ಮಗುವಿನ ತಲೆಯನ್ನು ಎದೆಗೆ ಅವುಚಿಸಿಕೊಂಡಿದ್ದ ಎಡಗೈಯಿಂದ ಅರವಿಂದನ ತೋಳನ್ನು ಹಿಡಿದುಕೊಳ್ಳಲು ಹೋದಳು. ಮಗುವಿನ ತಲೆಗೆ ಯಾವ ಆಧಾರವೂ ಇಲ್ಲದಂತಾಗಿ ಹಿಮ್ಮೀಟಿದಂತಾಗಿ ಜೋರಾಗಿ ಅಳತೊಡಗಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಕೊನೆಯ ಕಂತು ನಿಮ್ಮ ಓದಿಗಾಗಿ

Read More

ಒಂದೇ ಮನೆಯ ಹಲವು ಮನಗಳು….

ಫೋನಿನಲ್ಲಿ ವಿನಯನ ಜತೆ ಮಾತಾಡುತ್ತಿದ್ದವನು ಅಲಿಶಾ ಉಸಿರಾಡುತ್ತಿದ್ದಾಳಾ? ಆಕೆ ಮಾತಾಡುತ್ತಿದ್ದಾಳಾ? ಮೂವತ್ತು ಸೆಕಂಡುಗಳ ಕಾಲ ಆಕೆಯ ಉಸಿರಾಟ ಮತ್ತು ನಾಡಿಬಡಿತ ನೋಡಿ ಹೇಳು ಎಂದು ಅವನ ಪ್ರೋಟೊಕಾಲಿನಲ್ಲಿದ್ದಂತೆ ವಿನಯನಿಗೆ ಹೇಳುತ್ತಿದ್ದ. ವಿನಯ ‘ನಾನೂ ಒಬ್ಬ ಡಾಕ್ಟರು. ನನ್ನ ಹೆಂಡತಿಯೂ ಡಾಕ್ಟರು. ಅವಳಿಗೇನೂ ಆಗಿಲ್ಲ. ಅವಳಿಗೆ ತಕ್ಷಣ ಹೆರಿಗೆಯಾಗಬೇಕು. ನೀನು ತಕ್ಷಣ ಆ್ಯಂಬುಲೆನ್ಸ್ ಕಳಿಸಲಿಲ್ಲ ಎಂದರೆ ನಾನೇ ಡ್ರೈವ್ ಮಾಡಿಕೊಂಡು ಆಸ್ಪತ್ರೆಗೆ ಹೋಗುತ್ತೇನೆ’…
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಏಳನೆಯ ಕಂತು ನಿಮ್ಮ ಓದಿಗಾಗಿ

Read More

ದಡ ಮುಟ್ಟದ ದೋಣಿಗಳಲ್ಲಿ ಕೂತು…

ಒಂದಾದ ನಂತರ ಒಂದರಂತೆ ಮೂರು ಮಕ್ಕಳನ್ನು ಮಾಡಿಕೊಂಡು ನಂತರ ತಮ್ಮತಮ್ಮ ಕೆಲಸ, ಕಾರ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕೇವಲ ಒಂದು ದಿನದ ಹಿಂದೆ ಮಾತಾಡಿದ್ದಷ್ಟೇ ಅಲ್ಲ, ಮನೆಗೆ ಬಂದು ಸಹಾಯ ಮಾಡಬೇಕು ಎಂದು ನನ್ನನ್ನು ದುಂಬಾಲುಬಿದ್ದ ಅಪ್ಪಟ ಶ್ರೀಸಂಸಾರಿಯಂತೆ ಕಾಣುವ ವಿನಯ, ಅಲಿಶಾ ಜತೆ ನಿಜವಾಗಿಯೂ ಒಂದು ಬದ್ಧ ಸಂಬಂಧದಲ್ಲಿದ್ದಾನೆಯೇ?
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಆರನೆಯ ಕಂತು ನಿಮ್ಮ ಓದಿಗಾಗಿ

Read More

‘ವಾಟ್ ದ ಹೆಕ್’ ಅಮ್ಮಾ…

‘ನೀವೇ ಸರಿ, ಅರವಿಂದರಾಯರೇ. ಮಕ್ಕಳನ್ನು ಬಹಳ ಚೆನ್ನಾಗಿ ಬೆಳೆಸಿದ್ದೀರಿ’ ಇನ್ನೂ ಅವರ ಮಾತು ಮುಗಿದಿಲ್ಲ. ಎಲ್ಲಿಂದ ಬಂತೋ ಒಂದು ದೊಡ್ಡ ಅಲೆ, ಅಲ್ಲಿ ಕೂತಿದ್ದವರನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿಬಿಟ್ಟಿತು. ಕಣ್ಣು ಮುಚ್ಚಿ ಬಿಡುವುದರಲ್ಲಿ ಎಲ್ಲ ಮರಳು, ಎಲ್ಲೆಲ್ಲೂ ನೀರು. ಜನರ ಕೂಗು, ಹಾಹಾಕಾರ. ಸುಕನ್ಯ ಕಣ್ಣು ಬಿಟ್ಟಾಗ ಹತ್ತಿರ ಯಾರೂ ಕಾಣುತ್ತಿಲ್ಲ. ‘ವಿನೂ, ವಿಶೂ’ ಜೋರಾಗಿ ಕೂಗುತ್ತಾ ಇಡೀ ಸಮುದ್ರದ ದಡದಲ್ಲಿ ಹುಚ್ಚು ಹಿಡಿದಂತೆ ಓಡುತ್ತಿದ್ದಾಳೆ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆಯ ಕಂತು

Read More

ನನ್ನ ನೆಲೆಯಾದರೂ ಯಾವುದು?

ಸುಕನ್ಯಾಳಿಗೆ ಅರವಿಂದನ ಇಂಥ ಮಾತುಗಳು, ನಿರ್ಲಿಪ್ತ ಸ್ಥಿತಿ ಕೆಲವೊಮ್ಮೆ ಬಹಳ ರೇಜಿಗೆ ತರಿಸಿಬಿಡುತ್ತಿತ್ತು. ಸಮಸ್ಯೆಗಳು ಬರುವಾಗಲೇ ಪರಿಹಾರವನ್ನೂ ತಮ್ಮ ಜತೆಗೇ ತಂದಿರುತ್ತವೆ ಎಂಬುದು ಅವನ ಯಾವತ್ತಿನ ನಂಬಿಕೆ. ಪರಿಹಾರ ಅನ್ನೋದು ಇಲ್ಲದಿದ್ದರೆ ಅದನ್ನು ಸಮಸ್ಯೆಯೇ ಅಲ್ಲ ಅನ್ನುತ್ತಿದ್ದ, ಆತ. ‘ಅನ್ನ ಮಾಡೊಕೆ ಅಕ್ಕಿ ಇಲ್ಲ ಅಂದರೆ ಅಂಗಡೀಗೆ ಹೋಗಿ ಅಕ್ಕಿ ತರಬೇಕು. ಅಕ್ಕಿಯೇ ಸಿಗದೇ ಇರೋ ಸಂದರ್ಭ ಬಂದಲ್ಲಿ ಅನ್ನ ಮಾಡುವ ಯೋಚನೆಯನ್ನೇ ಬಿಟ್ಟುಬಿಡಬೇಕು. ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ನಾಲ್ಕನೆಯ ಕಂತು ನಿಮ್ಮ ಓದಿಗಾಗಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ