Advertisement

ಕ್ಷಮಾ ವಿ. ಭಾನುಪ್ರಕಾಶ್

ನೀಲ ಕುರುಂಜಿಯ ನಾಡಿನಲ್ಲಿ ರಕ್ತಸಿಕ್ತ ಅಧ್ಯಾಯ

ಯಾವುದೇ ಮನೆ, ಕಾಂಕ್ರೀಟ್ ಕಾಡಿನ ಕಟ್ಟಡಗಳಿಲ್ಲದ, ಒಂದು ಪ್ರಶಾಂತವಾದ ಜಾಗ. ಆದರೆ ಅಲ್ಲಿಗೆ ಹೋಗಿ ತಲುಪುವುದು ಸ್ವಲ್ಪ ಕಷ್ಟದ ಕೆಲಸ. ಹತ್ತು ಕಿಲೋಮೀಟರು ದೂರದವರೆಗೆ ನಿಮ್ಮ ವಾಹನಗಳಲ್ಲಿ ಹೋಗಿ, ಅಲ್ಲಿಂದ ಮುಂದೆ ಅದಕ್ಕೆಂದೇ ಬಾಡಿಗೆ ಇರುವ ಕೆಲವು ಫೋರ್ ವ್ಹೀಲ್ ಜೀಪ್‌ಗಳಲ್ಲಿ ಮಾತ್ರ ಹೋಗಬಹುದು. ಓರೆ ಕೋರೆ, ನೀರು ಹರಿದು, ಅರ್ಧ ಹಾಳಾದ ರಸ್ತೆಯಲ್ಲಿ ಹೋಗುವುದೇ ಒಂದು ಸಾಹಸ ಕ್ರೀಡೆ ಅರ್ಥಾತ್ ಅಡ್ವೆಂಚರ್. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿ ಮೇಲೆ ಇರುವ ಸ್ಥಳ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಸೀತೆ ನಡೆದ ‘ಪರ್ಯಾಯ ದಾರಿ’

ಅಪ್ಪ ತನ್ನ ಮಗಳನ್ನು ಗಡಂಗಿಗೆ ಪ್ಯಾಕೆಟ್ ತರಲು ಕಳುಹಿಸಲು ಶುರು ಮಾಡಿದ್ದು ಸೀತುವಿನ ಮನಸಿಗೆ ತುಂಬಾ ಕಸಿವಿಸಿಯನ್ನು ಉಂಟು ಮಾಡಿತ್ತು. ದಿನ ಕಳೆದಂತೆ ಗಡಂಗಿನಲ್ಲಿ ಚೋಮನ ದೋಸ್ತುಗಳ ಕಾಟವೂ ಹೆಚ್ಚತೊಡಗಿತು. ದಿನಾ ಸಾರಾಯಿಗೆ ಬರುತ್ತಿದ್ದ ಬೆಳ್ಳಿಯನ್ನು ಚುಡಾಯಿಸುವವರ ಸಂಖ್ಯೆ ಹೆಚ್ಚಿದಾಗ ಸೀತುವಿನ ಮನಸ್ಸು ಅಲ್ಲೋಲ ಕಲ್ಲೋಲವಾಗವಾಗ ತೊಡಗಿತ್ತು. ಸಂಜೆ ಬರುವಾಗಲೇ ಬೊಬ್ಬೆ ಹೊಡೆಯುತ್ತಿದ್ದ ಚೋಮ ಹೇಳದ ಮಾತಿಲ್ಲ. ಎಲ್ಲರೆದುರು ತನ್ನ ಹೆಂಡತಿ, ಮಗಳನ್ನು ತುಚ್ಚವಾಗಿ ಆಡುತ್ತಿದ್ದ ಚೋಮ ಮನೆಗೆ ಬಂದನೆಂದರೆ ಮಕ್ಕಳಾದ ತುಕ್ರ, ತನಿಯ ಓಡಿ ಮೂಲೆ ಸೇರುತ್ತಿದ್ದರು.”

Read More

ಭರಣಿ ಕೃತಿಕೆ ನಂಬಿದ ಅಪ್ಪ, ಪಡಿಪಾಟಲು ಅನುಭವಿಸಿದ ನಾನು

ಊರಿನಿಂದ ಬೆಳಿಗ್ಗೆ ಪ್ರಯಾಣಮಾಡಿ ಕಾಲೇಜಿನಲ್ಲಿ ಓಡಾಟ, ಹಾಸ್ಟೆಲ್ಲಿನ ಜಂಜಾಟ, ಎಲ್ಲಾ ಆಗುವಾಗ ಅಂದು ರಾತ್ರಿ ನನಗೆ ಬಂದದ್ದು ತಡೆಯಲಾರದ ತಲೆನೋವು. ಪರಿಚಯ ಇಲ್ಲದ ಜನ, ಗೊತ್ತಿಲ್ಲದ ಮನೆ.. ಇತ್ತ ತಲೆನೋವು ಜೋರಾಗಿ ವಾಂತಿ ಬರುತ್ತಿದೆ. ಯಾರಲ್ಲಿ ಹೇಳಿಕೊಳ್ಳುವುದು ನನ್ನ ಪರಿಸ್ಥಿತಿ. ಬಾತ್ರೂಮಿನಲ್ಲಿ ಹೋಗಿ ವಾಂತಿ ಮಾಡುತ್ತಿದ್ದ ನನ್ನನ್ನು ಕಂಡ ದೊಡ್ಡಗೌಡ್ರು ಕೂಡಲೇ ಬಂದು ನನ್ನ ತಲೆಯನ್ನು ಹಿಡಿದುಕೊಂಡರು. ಸ್ವಲ್ಪ ಹೊತ್ತಿಗೆ ವಾಂತಿ ಆಗಿ ತಲೆನೋವು ಸ್ವಲ್ಪ ಕಡಿಮೆಯಾದಂತೆ ಅನ್ನಿಸಿತು. ಪಾಪದ ಜನ ಅವರು.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಕ್ಲಾಸ್ಮೇಟ್..! ಗೋವಿಂದ ಗೋವಿಂದಾ..!!

ಬಾಲ್ಯದಲ್ಲಿ ನಮ್ಮ ಜೊತೆ ಆಟವಾಡುತ್ತಿದ್ದ ಅನೇಕರ ಹೆಸರು ಈಗಲೂ ನೆನಪಿಗೆ ಬಂದಾಗ, ಪ್ರತಿಯೊಬ್ಬರು ಆಗ ಮಾಡಿದ ಕೆಲವು ವಿಶೇಷ ಕಾರ್ಯಗಳನ್ನು ನೆನೆಸಿಕೊಂಡರೆ ನಗು ಕೂಡ ಬರುತ್ತಾ ಇರುತ್ತದೆ.. ಹೆಸರು ಮನಸ್ಸಿನ ಮೇಲೆ ಅಚ್ಚಾಗಿ ನಿಂತಿದ್ದರೂ, ಅವರು ಈಗ ಹೇಗಿರುತ್ತಾರೆ ಎಂದು ಗೊತ್ತಿರುವುದಿಲ್ಲ. ಹಾಗಾಗಿ ಕೆಲವೊಮ್ಮೆ ಅವರು ಬಂದು ನಮ್ಮ ಮುಂದೆ ನಿಂತರೂ ಅವರು ಯಾರು ಎಂಬುದು ತಿಳಿಯುವುದು ಅನೇಕ ಸರ್ತಿ ಕಷ್ಟಸಾಧ್ಯ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಡಾಕ್ಟರ್ ಸೂರ್ಯ ಕುಮಾರ್ ನೆನಪುಗಳ ಮೆರವಣಿಗೆ ಇಂದಿನಿಂದ

ಜನನ ಮರಣಗಳನ್ನೆರಡನ್ನೂ ನೋಡುವ ವೈದ್ಯ ವೃತ್ತಿ ಇತರ ವೃತ್ತಿಗಳಿಂದ ವಿಭಿನ್ನವಾದುದು. ವಿಧಿ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರಂತೂ ಎಷ್ಟೋ ನ್ಯಾಯದಾನ ಪ್ರಕ್ರಿಯೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವವರು. ಕೊಡಗಿನ ವೈದ್ಯ ಡಾ. ಕೆ.ಬಿ. ಸೂರ್ಯಕುಮಾರ್ ಅಂತಹ ವೃತ್ತಿಯಲ್ಲಿ ಸಂತೋಷ ಕಾಣುವವರು. ಅವರು ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ವೈದ್ಯಲೋಕದ ಕಥೆ ಹೇಳಲಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ