Advertisement

ನಾರಾಯಣ ಯಾಜಿ

ಜಿ. ಎಚ್. ನಾಯಕರ ನೆನಪು: ಡಾ. ಎಲ್.ಸಿ. ಸುಮಿತ್ರಾ ಬರಹ

ಮೀರಕ್ಕ ಕೂಡ ಯಾವಾಗಲೂ ನೂಲಿನ ಸೀರೆ ಧರಿಸುವವರು. ನಾವು ಎಂಎ ಓದುತ್ತಿದ್ದಾಗ ಮಾನಸಗಂಗೋತ್ರಿಯ ಬಯಲು ರಂಗಮಂದಿರದ ಆವರಣದಲ್ಲಿ ನಡೆದ ಯಾವುದೋ ಕಾರ್ಯಕ್ರಮ ನೋಡಲು ಮೀರಕ್ಕ, ಮಗಳು ಕೀರ್ತಿಯೊಡನೆ ಬಂದಿದ್ದರು. ಅವರುಟ್ಟ ರೇಷ್ಮೆ ಸೀರೆಯನ್ನು ಚೆನ್ನಾಗಿದೆಯೆಂದು ನಮ್ಮ ಗುಂಪಿನಲ್ಲಿದ್ದವರು ಯಾರೋ ಹೇಳಿದಾಗ ಕೀರ್ತಿ ತಕ್ಷಣ ಇದು ಅಮ್ಮನಿಗೆ ಯಾರೋ ಪ್ರಸೆಂಟ್ ಮಾಡಿದ್ದು ಅಪ್ಪ ಬರೀ ಕಾಟನ್ ಸೀರೆ ಕೊಡಿಸ್ತಾರೆ ಅಂತ ತಮಾಷೆಗೆಂಬಂತೆ ಹೇಳಿದಳು.
ನೆನ್ನೆಯಷ್ಟೇ ಅಗಲಿದ ಹಿರಿಯ ವಿಮರ್ಶಕ ಜಿ. ಎಚ್. ನಾಯಕರ ಕುರಿತು ಡಾ. ಎಲ್.ಸಿ. ಸುಮಿತ್ರಾ ಹಂಚಿಕೊಂಡಿದ್ದ ನೆನಪುಗಳು ನಿಮ್ಮ ಓದಿಗೆ

Read More

ಎಚ್.ಎಸ್. ಅನುಪಮಾ ಕಾದಂಬರಿಯಲ್ಲಿ “ಅಕ್ಕ”

ಅಕ್ಕಮಹಾದೇವಿಯದು ಅಭಾವ ವೈರಾಗ್ಯಅಲ್ಲ. ಅವಳದು ಸ್ವಭಾವ ವೈರಾಗ್ಯ ಎಲ್ಲ ಇದ್ದು ಅದರ ಕುರಿತು ಆಕರ್ಷಣೆ ಇಲ್ಲದಿರುವುದು ಅವಳ ವ್ಯಕ್ತಿತ್ವವೇ ವಿಶಿಷ್ಟ ಚೈತನ್ಯ ಉಳ್ಳದ್ದು. ಮಠದ ಗುರು ಲಿಂಗ ಶರಣರು ಅವಳಿಗೆ ಲಿಂಗ ದೀಕ್ಷೆ ನೀಡುತ್ತಾರೆ. ದಿಗಂಬರ ಸನ್ಯಾಸಿಗಳನ್ನು ನೋಡಿ ಎಲ್ಲವನ್ನು ಕಳಚಿ ಇರುವುದರ ಕುರಿತು ಯೋಚಿಸುತ್ತಾಳೆ. ಲಿಂಗ ಶರಣರು ಕಲ್ಯಾಣಕ್ಕೆ ಹೋಗಿ ಬಂದು ಬಸವಣ್ಣನ ಮಹಾಮನೆಯ ವಿಷಯ ಹೇಳುತ್ತಾರೆ. ಕಸಪಯ್ಯ ರಾಯ ಇವನ ಗುಡಿ ಕಟ್ಟಿಸುವಾಗ ಅವನ ಸತಿಗೂ ಗುಡಿ ಕಟ್ಟಲು ಹೇಳುತ್ತಾಳೆ.
ಡಾ. ಎಚ್.ಎಸ್. ಅನುಪಮಾ ಅವರ ಹೊಸ ಕಾದಂಬರಿ “ಬೆಳಗಿನೊಳಗು” ಕುರಿತು ಡಾ. ಎಲ್.ಸಿ. ಸುಮಿತ್ರಾ ಬರಹ

Read More

ಸಾತ್ವಿಕ ಆತ್ಮವಿಶ್ವಾಸದ ಪ್ರತೀಕ

ರಾಜೇಶ್ವರಿ ತೇಜಸ್ವಿ ಜೀವನೋತ್ಸಾಹದ, ಲವಲವಿಕೆಯ ಮಹಿಳೆ.  ಒಬ್ಬರೇ ಇದ್ದಾಗಲೂ ಅಡಿಗೆ ಮಾಡಲು ಅವರಿಗೆ ಎಂದಿನ ಉತ್ಸಾಹವೇ ಇರುತ್ತಿತ್ತು. ಸಾಮಾನ್ಯ ವಾಗಿ ಅವರ ಮೆನು ವಿನಲ್ಲಿ ಮೂರು ತರಕಾರಿ ಐಟಂಗಳು. ಪಲ್ಯ ಚಟ್ನಿ , ಸಾರು ಅಥವಾ ಸಾಂಬಾರು. ಕೆಸುವಿನ ಸೊಪ್ಪನ್ನು ಗಂಟು ಕಟ್ಟಿ ಮಾಡುವ ಸಾಂಬಾರು, ಹೀರೆ ಸಿಪ್ಪೆಯ ಚಟ್ನಿ, ಪತ್ರೊಡೆ, ಪಕೋಡಗಳು ಹೀಗೆ. ಮಲೆನಾಡಿನ ವಿಶೇಷಗಳು. ಎಂಬತ್ನಾಲ್ಕರ ಪ್ರಾಯದಲ್ಲಿ ಸದೃಢವಾದ ಹಲ್ಲುಗಳನ್ನು ಹೊಂದಿದ್ದ ಅವರು ಎಂದೂ ಯಾರ ಬಗ್ಗೆಯೂ ಕಟಕಿಯಾಡಿದ್ದಿಲ್ಲ. ತುಂಬು ಬದುಕನ್ನು ಸವಿದು ಅವರೀಗ ಹೊರಟು ಹೋಗಿದ್ದಾರೆ.

Read More

ಮರದ ನೆರಳಿನಲ್ಲಿ…

ಮನೆಯ ಎದುರಿಗೆ ರಸ್ತೆಯ ಪಕ್ಕದಲ್ಲಿ ಜೀರಕನ ಮರ ಹಣ್ಣು ಬಿಟ್ಟಾಗ ನಮಗೆ ಆ ಮರದ ಆಕರ್ಷಣೆ.. ಹೊಂಬಣ್ಣದ ಜೀರ್ಕ ಹಣ್ಣುಗಳನ್ನು ದೋಟಿಗೆ ಎಟುಕಿಸಿ ಉದುರಿಸಿ ಹಿರಿಯರ ಕಣ್ಣು ತಪ್ಪಿಸಿ ಅಡಿಕೆ ಚಪ್ಪರದ ಮೇಲೆ ತೆಗೆದುಕೊಂಡು ಹೋಗಿ ಇಟ್ಟು.. ಅಡಿಗೆ ಮನೆಯಿಂದ ಉಪ್ಪು ಬಾಳೆಲೆ, ಬೆಲ್ಲ ಇನ್ನೊಬ್ಬರು ತರುವುದು. ಜೀರಿಗೆ ಮೆಣಸು ಮತ್ತೊಬ್ಬರು.. ಹಣ್ಣಿನ ತೊಳೆ ಬಿಡಿಸಿ ಬಾಳೆ ಎಲೆ ಮೇಲೆ ಉಪ್ಪು, ಮೆಣಸು ಬೆಲ್ಲ ಹಾಕಿ ಕಲೆಸಿ ಮತ್ತೆ ಚಿಕ್ಕ ಬಾಳೆ ಎಲೆ ತುಂಡಿನ ಮೇಲೆ ಎಲ್ಲರಿಗೂ ಹಂಚಿ ಆ ಕಟುವಾದ ಹುಳಿ, ಸಿಹಿ, ಖಾರದ ರುಚಿಯನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದೆವು..
ಡಾ. ಎಲ್.ಸಿ. ಸುಮಿತ್ರಾ ಬರೆದ ಪ್ರಬಂಧ

Read More

ಹೊತ್ತು ಮಾರುವವರು:ಒಂದು ಪ್ರಬಂಧ

ಅಜ್ಜಿ ಆಯ್ದ ಮಡಕೆಯನ್ನು ತಿರುಗಿಸಿ ಮುರುಗಿಸಿ ನೋಡಿ, ಬೆರಳಿನಿಂದ ಬಾರಿಸಿ, ಟಣ್ ಶಬ್ದ ಬರಿಸಿ ಪರೀಕ್ಷಿಸಿದರು. ರುಕ್ಕು ಕುಳ್ಳಗೆ ಅಗಲ ಬಾಯಿಯಿದ್ದ ಮಡಕೆಯೊಂದನ್ನು ತೋರಿಸಿ ಮೀನು ಬತ್ತಿಸಲು ಲಾಯ್ಕಿದೆ ತಗಣಿ ಅಂದಳು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ