Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಹಿರಿಯರಿಗೂ ಇಂದಿನ ಪೀಳಿಗೆಗೂ ಇರುವ ಅಂತರವನ್ನು ದಾಟುವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ’ ತಮ್ಮ ಸಂತಾನಗಳ ಮನಸ್ಸಿನ ಹಾಗೂ ಬದುಕಿನ ಮರ್ಮವೇನು ಎಂಬುದನ್ನು ಅರಿಯಲು ಮೊದಲು ತಾವೇ ಒಂದು ಹೆಜ್ಜೆ ಮುಂದೆ ಇಡಬೇಕಿದೆ. ಜಗತ್ತೇ ಒಂದು ಹಳ್ಳಿಯಾದ ಅಂತರ್ಜಾಲದ ಯುಗದಲ್ಲಿ, ಹಳ್ಳಿಯೇ ತಮ್ಮ ಜಗತ್ತಾಗಿದ್ದ ಪೀಳಿಗೆಗೆ ಮತ್ತು ಅವರ ಮಕ್ಕಳಿಗೆ ಈ ಹೆಜ್ಜೆಯು ಒಂದು ಸವಾಲು. ಆದರೆ, ವಿಧಿ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮಿಂದ ಮಾನಸಿಕವಾಗಿ ಹಾಗೂ ಭಾವನಾತ್ಮಕವಾಗಿ ದೂರ ಆಗಬಾರದು ಎಂದರೆ ಅವರ ಬದುಕಿನ ಲಯಗಳನ್ನು ಅರಿಯಲು ಹಿರಿಯ ಪೀಳಿಗೆಯವರು ಪ್ರಯತ್ನ ಮಾಡಲೇಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ

ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಇಂದಿನ ಕನ್ನಡ ಅಧ್ಯಾಪಕರು ಮತ್ತು ಇಂಗ್ಲಿಷ್ ಭಾಷೆ: ಎಲ್.ಜಿ.ಮೀರಾ ಅಂಕಣ

ಬರಬರುತ್ತಾ ಓದು, ವ್ಯುತ್ಪತ್ತಿ, ಭಾಷಾ ಪ್ರೌಢಿಮೆಗಳ ಬಗೆಗಿನ ಆಸ್ಥೆ ಕಡಿಮೆಯಾಗಿ `ಹಾಗೂ ಹೀಗೂ ಒಂದಿಷ್ಟು ಪಾಠ ಮಾಡೋದು, ಸಂತೆ ಹೊತ್ತಿಗೆ ಮೂರು ಮೊಳ ಆದ್ರೆ ಸಾಕು’ ಎಂಬ ಮನಃಸ್ಥಿತಿ ಮೂಡಿತು. ಇದೊಂದು ರೀತಿಯ ಸುಲಭೀಕರಣ. ಇದಕ್ಕೆ ಕನ್ನಡ ಅಧ್ಯಾಪಕರು ಮಾತ್ರ ಕಾರಣ ಅಲ್ಲ. ಜಾಗತೀಕರಣದ ನಂತರ, ಭಾರತ ದೇಶದ ಬದುಕು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳವಾಗಿ ಬದಲಾಯಿತು. ಉಪಗ್ರಹ ಪ್ರಸಾರದ ಅಂತಾರಾಷ್ಟ್ರೀಯ ಚಲನಚಿತ್ರ ವಾಹಿನಿಗಳು, ಅಂತರ್ಜಾಲ, ಮುಂದೆ ಸರ್ವವ್ಯಾಪಿಯಾದ ಚಲನವಾಣಿಗಳ ಬಳಕೆ ಇವುಗಳಿಂದಾಗಿ ಓದುಸಂಸ್ಕೃತಿ ಹಿಂದೆ ಸರಿದು ನೋಡುಸಂಸ್ಕೃತಿ ಮುನ್ನೆಲೆಗೆ ಬಂದಿತಲ್ಲವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ

ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ

Read More

ಕಾಡು, ಪುಸ್ತಕ, ಅಭಿಮಾನ ಹಾಗೂ ಅಂತರ್ಜಾಲ ಸಮುದಾಯಗಳ ಆಹ್ಲಾದಕರ ಲೋಕ: ಎಲ್.ಜಿ.ಮೀರಾ ಅಂಕಣ

ಮನುಷ್ಯ ಎಂಬ ಜೀವಿ ಈ ಭೂಮಿಯ ಮೇಲೆ ವಿಕಾಸಗೊಂಡಾಗಿನಿಂದ ಒಂದಲ್ಲ ಒಂದು ರೀತಿಯ ಸಮುದಾಯಗಳನ್ನು ಕಟ್ಟಿಕೊಂಡು ಬದುಕುತ್ತಿದ್ದಾನೆ. ಎಷ್ಟೇ ಜಗಳ, ಭಿನ್ನಾಭಿಪ್ರಾಯ, ಇರಿಸುಮುರಿಸು, ವೈಯಕ್ತಿಕ ಇಚ್ಛೆಗಳ ಬಲ್ಮೆ ಇದ್ದರೂ ನೆರೆಹೊರೆಯೋ, ವೃತ್ತಿ ಸಮುದಾಯವೋ, ಸ್ನೇಹಿತರ ಬಳಗವೋ, ನೆಂಟರಿಷ್ಟರ ಜೊತೆಗಾರಿಕೆಯೋ, ವಠಾರವೋ, ಅನೇಕ ಮನೆಘಟಕಗಳಿರುವ ಸಮುಚ್ಚಯಗಳೋ(ಅಪಾರ್ಟ್ಮೆಂಟ್)… ಒಟ್ಟಿನಲ್ಲಿ ಮನುಷ್ಯರಿಗೆ ಮನುಷ್ಯರ ಸಂಗ-ಸಹವಾಸ ಬೇಕು ಅಷ್ಟೆ. ಇದನ್ನು ಹೆಚ್ಚು ವಿವರಿಸುವ ಅಗತ್ಯ ಇಲ್ಲ ಅನ್ನಿಸುತ್ತೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ನಾಲ್ಕನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ