ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ
ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
