Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

 ಕನ್ನಡ ಕಲಿಕೆಯ ಮೂರು ಪ್ರಸಂಗಗಳು: ಎಲ್.ಜಿ.ಮೀರಾ ಅಂಕಣ

ನಾನು ಈ ಹುಡುಗಿಗೆ “ನಿನ್ನ ಗುರುತಿನ ಚೀಟಿ ಕೊಡಮ್ಮ” ಅಂದೆ. ಅವಳು ಗಾಬರಿಯಿಂದ “ಅದು ಇಲ್ಲ ಮ್ಯಾಮ್” ಅಂದಳು. ಪಾಪ, ಅದು ಅವಳ ಕುತ್ತಿಗೆಯಲ್ಲೇ ತೂಗುತ್ತಿತ್ತು. ಈ ಘಟನೆಯು ಘಟಿಸುತ್ತಿದ್ದಾಗ ನಮ್ಮ ಕೋಣೆಯಲ್ಲೇ ಕುಳಿತಿದ್ದ ಇಂಗ್ಲಿಷ್ ಅಧ್ಯಾಪಕಿಯೊಬ್ಬರು ಮುಗುಳ್ನಗುತ್ತಾ “ಅದು ನಿನ್ನ ಮೈಮೇಲೇ ಇದೆಯಲ್ಲಮ್ಮ” ಅಂದರು. ಆದರೂ ಆ ಹುಡುಗಿಗೆ ಗುರುತಿನ ಚೀಟಿ ಅಂದರೆ ಏನೆಂದು ಗೊತ್ತಾಗಲಿಲ್ಲ. ಏನು ಒತ್ತಡ ಇತ್ತೋ ಏನೋ ಪಾಪ ಅವಳಿಗೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತನೆಯ ಬರಹ

Read More

ಕನ್ನಡದ ಡಿಜಿಟಲ್ ನವೋದಯ ಮತ್ತು ವಿಜ್ಞಾನ ಬರವಣಿಗೆ: ಎಲ್.ಜಿ.ಮೀರಾ ಅಂಕಣ

ಹಲವಾರು ಲೇಖಕ-ಲೇಖಕಿಯರು ತಮ್ಮ ಕೊಡುಗೆಗಳನ್ನು ಕೊಟ್ಟಿದ್ದಾರೆ, ಕೊಡುತ್ತಿದ್ದಾರೆ. ಆದರೂ ಕರ್ನಾಟಕದ ಜನಮಾನಸದಲ್ಲಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ವಿಜ್ಞಾನದ ಅಧ್ಯಾಪಕರಲ್ಲಿ ಮತ್ತು ಸಂಶೋಧಕರಲ್ಲಿ `ವಿಜ್ಞಾನವೆಂದರೆ ಇಂಗ್ಲಿಷಿನಲ್ಲಿ ಇರುವಂಥದ್ದು, ಇರಬೇಕಾದದ್ದುʼ ಎಂಬ ಗಾಢ ಭಾವನೆ ಬೇರೂರಿದೆ. ಈ ಭಾವನೆ-ಚಿಂತನೆಯ ತಿರುಳು ಎಂದರೆ “ತೀರಾ ಗಂಭೀರ ವಿಜ್ಞಾನ ವಿಚಾರಗಳನ್ನು ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಲೇಖನಗಳನ್ನು ಕನ್ನಡದಲ್ಲಿ ಬರೆಯಲಾಗದು, ಹಾಗೆ ಬರೆಯಲು ಸೂಕ್ತ ಪದಗಳೇ ಸಿಗುವುದಿಲ್ಲ” ಎಂಬ ಅನಿಸಿಕೆ ಅಥವಾ ಪೂರ್ವಗ್ರಹ. ಇದು ವಿಜ್ಞಾನಕ್ಷೇತ್ರದ ಹಲವು ಅಧ್ಯಾಪಕರು ಮತ್ತು ವಿಜ್ಞಾನಿಗಳಲ್ಲಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ

Read More

ಹಿರಿಯರಿಗೂ ಇಂದಿನ ಪೀಳಿಗೆಗೂ ಇರುವ ಅಂತರವನ್ನು ದಾಟುವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ’ ತಮ್ಮ ಸಂತಾನಗಳ ಮನಸ್ಸಿನ ಹಾಗೂ ಬದುಕಿನ ಮರ್ಮವೇನು ಎಂಬುದನ್ನು ಅರಿಯಲು ಮೊದಲು ತಾವೇ ಒಂದು ಹೆಜ್ಜೆ ಮುಂದೆ ಇಡಬೇಕಿದೆ. ಜಗತ್ತೇ ಒಂದು ಹಳ್ಳಿಯಾದ ಅಂತರ್ಜಾಲದ ಯುಗದಲ್ಲಿ, ಹಳ್ಳಿಯೇ ತಮ್ಮ ಜಗತ್ತಾಗಿದ್ದ ಪೀಳಿಗೆಗೆ ಮತ್ತು ಅವರ ಮಕ್ಕಳಿಗೆ ಈ ಹೆಜ್ಜೆಯು ಒಂದು ಸವಾಲು. ಆದರೆ, ವಿಧಿ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮಿಂದ ಮಾನಸಿಕವಾಗಿ ಹಾಗೂ ಭಾವನಾತ್ಮಕವಾಗಿ ದೂರ ಆಗಬಾರದು ಎಂದರೆ ಅವರ ಬದುಕಿನ ಲಯಗಳನ್ನು ಅರಿಯಲು ಹಿರಿಯ ಪೀಳಿಗೆಯವರು ಪ್ರಯತ್ನ ಮಾಡಲೇಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ

ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಇಂದಿನ ಕನ್ನಡ ಅಧ್ಯಾಪಕರು ಮತ್ತು ಇಂಗ್ಲಿಷ್ ಭಾಷೆ: ಎಲ್.ಜಿ.ಮೀರಾ ಅಂಕಣ

ಬರಬರುತ್ತಾ ಓದು, ವ್ಯುತ್ಪತ್ತಿ, ಭಾಷಾ ಪ್ರೌಢಿಮೆಗಳ ಬಗೆಗಿನ ಆಸ್ಥೆ ಕಡಿಮೆಯಾಗಿ `ಹಾಗೂ ಹೀಗೂ ಒಂದಿಷ್ಟು ಪಾಠ ಮಾಡೋದು, ಸಂತೆ ಹೊತ್ತಿಗೆ ಮೂರು ಮೊಳ ಆದ್ರೆ ಸಾಕು’ ಎಂಬ ಮನಃಸ್ಥಿತಿ ಮೂಡಿತು. ಇದೊಂದು ರೀತಿಯ ಸುಲಭೀಕರಣ. ಇದಕ್ಕೆ ಕನ್ನಡ ಅಧ್ಯಾಪಕರು ಮಾತ್ರ ಕಾರಣ ಅಲ್ಲ. ಜಾಗತೀಕರಣದ ನಂತರ, ಭಾರತ ದೇಶದ ಬದುಕು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳವಾಗಿ ಬದಲಾಯಿತು. ಉಪಗ್ರಹ ಪ್ರಸಾರದ ಅಂತಾರಾಷ್ಟ್ರೀಯ ಚಲನಚಿತ್ರ ವಾಹಿನಿಗಳು, ಅಂತರ್ಜಾಲ, ಮುಂದೆ ಸರ್ವವ್ಯಾಪಿಯಾದ ಚಲನವಾಣಿಗಳ ಬಳಕೆ ಇವುಗಳಿಂದಾಗಿ ಓದುಸಂಸ್ಕೃತಿ ಹಿಂದೆ ಸರಿದು ನೋಡುಸಂಸ್ಕೃತಿ ಮುನ್ನೆಲೆಗೆ ಬಂದಿತಲ್ಲವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ