ದೇಹ ಮನಸ್ಸುಗಳ ಚಕ್ರಸುಳಿ……: ಡಾ. ಎಲ್.ಜಿ. ಮೀರಾ ಅಂಕಣ
ಮನಸ್ಸು ಮತ್ತು ಆತ್ಮ ಎಂದರೆ ಒಂದೆಯೇ ಅಥವಾ ಬೇರೆಬೇರೆಯೇ ಎಂಬ ನಮ್ಮ ಪ್ರಶ್ನೆಗೆ ಧರ್ಮಶಾಸ್ತ್ರ ಹಾಗೂ ತತ್ವಶಾಸ್ತ್ರಗಳು ಕೊಡುವ ಉತ್ತರ “ಇಲ್ಲ, ಅವು ಬೇರೆ ಬೇರೆ. ಆತ್ಮವು ಚಿರಂತನವಾದ, ಎಂದೂ ಬದಲಾಗದ ಮೂಲಸತ್ವ ಅಥವಾ ಶುದ್ಧಪ್ರಜ್ಞೆ” ಎಂದು. ಕಡುವಿಜ್ಞಾನವು ಆತ್ಮದ ಅಸ್ತಿತ್ವವನ್ನು – ವಾಸ್ತವಿಕ ಸಾಕ್ಷಿಗಳ ಕೊರತೆಯ ಕಾರಣಕ್ಕಾಗಿ – ಒಪ್ಪುವುದಿಲ್ಲ. ಸದ್ಯಕ್ಕೆ ಈ ಪ್ರಬಂಧದಲ್ಲಿ ಆತ್ಮವನ್ನು ಕುರಿತು ಚರ್ಚಿಸುತ್ತಿಲ್ಲ. `ಮನಸ್ಸಿನ’ ಸಂಕೀರ್ಣತೆಯೇ ಇಲ್ಲಿ ನಮಗೆ ಸಾಕಷ್ಟು ನೀರು ಕುಡಿಸುತ್ತಿದೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೊಂದನೆಯ ಬರಹ
