ಕೆ.ಎಸ್.ನ ಕಾವ್ಯದ ಸೊಲ್ಲು – ಕನ್ನಡತೋಟದ ಮಲ್ಲಿಗೆಯರಳು: ಎಲ್. ಜಿ. ಮೀರಾ ಅಂಕಣ
ಕೆ.ಎಸ್.ನ. ಅವರ `ಮೈಸೂರು ಮಲ್ಲಿಗೆ’ ಕವನ ಸಂಕಲನವು ನಮ್ಮ ಸಾಹಿತ್ಯ ಕ್ಷೇತ್ರದ ಒಂದು ಸುಕುಮಾರ ಬೆರಗು! ಹಿಂದಿರುಗಿ ನೋಡಿದರೆ ಇಂಥದೊಂದು ಘಟಿತ ಸಾಧ್ಯ ಆಗಿದ್ದು ಹೇಗೆ ಎಂದು ಮೂಗಿನ ಮೇಲೆ ಬೆರಳಿಡುವಂತಾಗುತ್ತದೆ. ಹೌದು, ಡಾ.ಎಚ್.ಎಸ್.ವಿ. ಅವರು ಸರಿಯಾಗಿ ಗುರುತಿಸಿರುವಂತೆ ಆಚಾರ್ಯ ಬಿ.ಎಂ.ಶ್ರೀ ಅವರ ಯುಗಪ್ರವರ್ತಕ ಅನುವಾದ ಕೃತಿ `ಇಂಗ್ಲಿಷ್ ಗೀತಗಳು’ ಹಾಗೂ ತೀ.ನಂ.ಶ್ರಿ. ಅವರ `ಒಲುಮೆ’ ಕವನ ಸಂಕಲನಗಳ ಪ್ರಭಾವ `ಮೈಸೂರು ಮಲ್ಲಿಗೆ’ಯ ಮೇಲಿರುವ ಹಾಗಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಐವತ್ತೊಂದನೆಯ ಬರಹ

