Advertisement

ಸುಕನ್ಯಾ ಕನಾರಳ್ಳಿ

 ಕಾರುಚಾಲನಾ ಕಲಿಕಾ ಪುರಾಣವು …..!: ಎಲ್. ಜಿ. ಮೀರಾ ಅಂಕಣ

ಹುಲಿಯು ತನ್ನ ಸರಹದ್ದನ್ನು ದಿನಾ ತುಸುತುಸುವೇ ಹೆಚ್ಚು ಮಾಡಿಕೊಳ್ಳುವಂತೆ ನಾನು ಸಹ ನನ್ನ ಚಾಲನಾ ಸರಹದ್ದನ್ನು ನನ್ನ ಪ್ರತಿದಿನದ ನಸುಕಿನ ಅಭ್ಯಾಸದಲ್ಲಿ ಜಾಸ್ತಿ ಮಾಡುತ್ತಾ ಹೋದೆ. ಮನೆಯ ಅಕ್ಕಪಕ್ಕದ ರಸ್ತೆಗಳು, ಮೊದಮೊದಲು ಎಲ್ಲಿ ಗುದ್ದಿಬಿಡುತ್ತೇನೋ ಎಂದು ವಿಪರೀತ ಹೆದರಿಕೆ ಆಗಿ `ಯಾಕಪ್ಪಾ ಓಡಿಸ್ತೇನೆ, ಬೇಕಿತ್ತಾ ನಂಗೆ ಈ ವಯಸ್ಸಲ್ಲಿ ಇದು?’ ಎಂದು ಅನೇಕ ಸಲ ಅನ್ನಿಸುತ್ತಿತ್ತು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೇಳನೆಯ ಬರಹ

Read More

ಮನುಷ್ಯನ ಒಂದೇ ಜನ್ಮದಲ್ಲಿ ಹಲವು ಜನ್ಮಗಳು – ಏನಿದರ ಮರ್ಮ?: ಎಲ್. ಜಿ. ಮೀರಾ ಅಂಕಣ

ನಮ್ಮ ಗುರುತು ನಮಗೇ ಸಿಗದಷ್ಟು ನಾವು ಬದಲಾವುಗುವುದರ ಮರ್ಮ ಏನು? ಅದೂ ಅಲ್ಲದೆ ಎಲ್ಲರೂ ಹೀಗಾಗುವುದಿಲ್ಲ. ಎಲ್ಲ ಸಿದ್ಧಾರ್ಥರೂ ಬುದ್ಧರಾಗುವುದಿಲ್ಲ, ಎಲ್ಲ ನವಕೋಟಿ ನಾರಾಯಣರೂ ಪುರಂದರದಾಸರಾಗುವುದಿಲ್ಲ, ಎಲ್ಲ ಅಂಗುಲಿಮಾಲರೂ ಬೌದ್ಧಭಿಕ್ಷುವಾಗುವುದಿಲ್ಲ. ಹೀಗೆ ತಮ್ಮನ್ನು ತಾವು ಗುರುತೇ ಸಿಗದಂತೆ ನವೀಕರಿಸಿಕೊಳ್ಳಲು ಎಲ್ಲರಲ್ಲೂ ಇಲ್ಲದ ಏನೋ ಒಂದು ಗುಣವಿಶೇಷ ಈ ವ್ಯಕ್ತಿಗಳಲ್ಲಿ ಇರಬೇಕು ಅಥವಾ ಹೀಗೆ ಬದಲಾವುಗುವುದಕ್ಕಾಗಿ ಏನೋ ಒಂದು ಬಲವಾದ ಕಾರಣವನ್ನು ಬದುಕು ನಿರ್ಮಿಸಿರಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಕನ್ನಡ ವಿಜ್ಞಾನ ಸಂವಹನಕ್ಕೆ ಡಾ. ಕೆ. ಶಿವರಾಮ ಕಾರಂತರ ಕೊಡುಗೆ: ಎಲ್. ಜಿ. ಮೀರಾ ಅಂಕಣ

ಇಂತಹ ವಿಚಾರ ಮನಸ್ಸಿಗೆ ಬಂದ ಮೇಲೆ ಕಾರಂತರು ಸುಮ್ಮನೆ ಕೂರುವ ಜಾಯಮಾನದವರಲ್ಲ. ಮಕ್ಕಳಿಗೆ ತಮ್ಮ ಜಿಲ್ಲೆಯಾದ ದಕ್ಷಿಣಕನ್ನಡದ ಪರಿಚಯವನ್ನು ಸ್ವಾರಸ್ಯಕರವಾಗಿ ಮತ್ತು ಚಿತ್ರಸಹಿತವಾಗಿ ಮಾಡಿಕೊಡುವ `ಚಿತ್ರಮಯ ದಕ್ಷಿಣಕನ್ನಡ’ ಕೃತಿಯನ್ನು ರಚಿಸಿಯೇಬಿಟ್ಟರು. ಇದಕ್ಕಾಗಿ ಜಿಲ್ಲೆಯ ತುಂಬ ಓಡಾಡಿ ಅನೇಕ ಛಾಯಾಚಿತ್ರಗಳನ್ನು ತೆಗೆದರು, ಚಿತ್ರಗಳನ್ನು ಸ್ವತಃ ಬರೆದರು! ಮುಂದೆ ಮಕ್ಕಳಿಗಾಗಿ ಮತ್ತು ಆಸಕ್ತ ದೊಡ್ಡವರಿಗಾಗಿ `ದಕ್ಷಿಣ ಹಿಂದೂಸ್ಥಾನ’ ಕೃತಿಯನ್ನು ಹಾಗೂ `ಬಾಲಪ್ರಪಂಚ’, `ವಿಜ್ಞಾನ ಪ್ರಪಂಚ’ ಎಂಬ ವಿಶ್ವಕೋಶಗಳನ್ನು ರಚಿಸಿದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೈದನೆಯ ಬರಹ

Read More

ಸಂತೆಯಲ್ಲಿ ಸಂತರು ರಚಿಸಿದ ನುಡಿರತ್ನಗಳು : ಕನ್ನಡದ ತತ್ವಪದಗಳು: ಡಾ. ಎಲ್.ಜಿ.ಮೀರಾ

ಹೀಗೆ ಹಾಡುತ್ತಿರುವಾಗ ಕೆಲವರು ಮೂಲಕವಿಯ ಅಂಕಿತವನ್ನು ಬದಲಿಸಿ ತಮ್ಮ ನಡುವಿನ ಇಲ್ಲವೆ ದೇವರ ಹೆಸರುಗಳನ್ನು ಸೇರಿಸುವುದುಂಟು. ಆದರೆ ಇವು ಜನಪದರು ಹಾಡುತ್ತಿದ್ದ ಹಾಡುಗಳು ಎಂಬ ಕಾರಣದಿಂದಾಗಿ ಪಂಡಿತರು ಇವನ್ನು ಉಪೇಕ್ಷೆ ಮಾಡುತ್ತಿದ್ದರು. ಹೀಗಾಗಿ ಇವುಗಳ ಸಂಗ್ರಹಕಾರ್ಯ ವಿಳಂಬವಾಯಿತು. ಅವು ಹಾಡಿನ ರೂಪದಲ್ಲಿ ಇದ್ದುದರಿಂದ ಜನರ ಬಾಯಲ್ಲಿ ಹೇಗೋ ಉಳಿದುಕೊಂಡು ಅಳಿಯದೆ ಪ್ರಸಾರವಾಗುತ್ತಾ ಬಂದಿವೆ. ಜಾತಿಧರ್ಮಗಳನ್ನು ಮೀರಿ, ಈ ನೆಲದ ತತ್ವಚಿಂತನೆಯನ್ನು ನಿಸರ್ಗ ವಿವೇಕದ ಜೊತೆ ಬೆರೆಸುತ್ತ ಸಮಾಜದ ಚಿಂತನಾಕ್ರಮವನ್ನು ಆರೋಗ್ಯಕರವಾಗಿರುವಂತೆ ಈ ತತ್ವಪದಗಳು ನೋಡಿಕೊಂಡಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ವಿದ್ಯೆ ಹಾಗೂ ವಿವೇಕ – ಒಟ್ಟಿಗೆ ಇರುವುದಿಲ್ಲವೆ?: ಡಾ. ಎಲ್.ಜಿ. ಮೀರಾ ಅಂಕಣ

ವಿದ್ಯೆ ಮತ್ತು ವಿವೇಕದ ಪ್ರಶ್ನೆ ಬಂದಾಗ ನಮ್ಮ ಗ್ರಾಮೀಣ ಜನರಲ್ಲಿ ಸಾಕಷ್ಟು ವಿವೇಕವಿರುವುದನ್ನು ನಾವು ಗಮನಿಸುತ್ತೇವೆ. ಉದಾಹರಣೆಗೆ, ಭೂಮಿಯನ್ನು ಲಾಭ ತರುವ ಸರಕು ಎಂದು ನೋಡದೆ ತಾಯಿ ಎಂದು ಕರೆಯುವುದು, ಪರಿಸರವನ್ನು ಹಾನಿಗೊಳಪಡಿಸದಿರುವುದು, ಪ್ರಾಣಿ-ಪಕ್ಷಿ- ಪುಟ್ಟ ಪುಟ್ಟ ಜೀವಗಳಿಗೂ ತಮ್ಮ ಬದುಕಿನಲ್ಲಿ ಸ್ಥಳಾವಕಾಶ ಮಾಡಿಕೊಡುವುದು, ಮಣ್ಣು ಅಂದರೆ ನಗರದವರಂತೆ ಅಸಹ್ಯ ಪಟ್ಟುಕೊಳ್ಳದೆ ಇರುವುದು, ಮನೆಯಲ್ಲಿ ಮಾಡುವ ಸರಳ ಅಡಿಗೆಗಳಲ್ಲಿ ಸಂತೋಷವನ್ನು ಕಾಣುವುದು‌, ದೊಡ್ಡ ದೊಡ್ಡ ಕುಟುಂಬಗಳಲ್ಲಿ ಹೊಂದಿಕೊಂಡು ಹೋಗುವುದು‌ – ಇಂತಹ ಅನೇಕ ಜೀವನ ವಿವೇಕದ ನಿದರ್ಶನಗಳನ್ನು ನಾವು ಅವಿದ್ಯಾವಂತರಾದ ನಮ್ಮ ಹಳ್ಳಿಗರಲ್ಲಿ ಕಾಣಬಹುದು.‌
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ