ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ
ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ
