Advertisement

ಕೆಂಡಸಂಪಿಗೆ

ಹೆಣ್ಣಿನ ನಾಲ್ಕು ಕಷ್ಟಗಳು – ಅಂದು, ಇಂದು: ಡಾ. ಎಲ್. ಜಿ. ಮೀರಾ ಅಂಕಣ

ಪಿತೃಪ್ರಧಾನ ವ್ಯವಸ್ಥೆಯ ಬೇರುಗಳು ನಾವು ಅಂದುಕೊಂಡದ್ದಕ್ಕಿಂತ ಬಹಳ ಆಳವಾಗಿರುತ್ತವೆ. ಅವು ಗಂಡಸರ ಮನಸ್ಸಿನಲ್ಲಿ ಮಾತ್ರವಲ್ಲ ಹೆಂಗಸರ ಮನಸ್ಸಿನಲ್ಲೂ ಇರುತ್ತವೆ! ಏಕೆಂದರೆ ಸಾಮಾಜಿಕ ಮೌಲ್ಯಗಳ ಅಂತರಂಗೀಕರಣದ ಸ್ವರೂಪ ಹಾಗಿರುತ್ತದೆ. ಹೀಗಾಗಿ `ಉರಿಯದ ಒಲೆ, ಏಳದ ದೋಸೆ, ಬಯ್ಯುವ ಗಂಡ, ಅಳುವ ಮಗು’, ಪದಪುಂಜಗಳು ಇಂದಿನ ಹೆಣ್ಣಿನ ಮಟ್ಟಿಗೆ ಅನ್ವಯಿಸುತ್ತವೆಯೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತನೆಯ ಬರಹ

Read More

ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ

ನಮ್ಮ ಪಿತೃಪ್ರಧಾನ ವ್ಯವಸ್ಥೆಯು `ಗಂಡನನ್ನು ಹಂಚಿಕೊಳ್ಳಬೇಕಾದ’ ಪರಿಸ್ಥಿತಿಯಲ್ಲಿರುವ ಹೆಣ್ಣಿನ ದುಃಖ ದುಮ್ಮಾನಗಳ ಬಗ್ಗೆ, ಅವಳ `ಅವಮಾನದ’ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ರಾಜಕುಮಾರಿಯರಿಗೆ ಮದುವೆಯಾದಾಗ `ಸವತಿಯರೊಂದಿಗೆ ಜಗಳ ಮಾಡಬೇಡ, ಅವರನ್ನು ಅಕ್ಕ ತಂಗಿಯರಂತೆ ನೋಡಿಕೊ’ ಎಂಬ ಉಪದೇಶವನ್ನು ತವರುಮನೆಯವರು, ಹಿರಿಯರು ಆಕೆಗೆ ನೀಡುತ್ತಿದ್ದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತೊಂಭತ್ತನೆಯ ಬರಹ

Read More

ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ

ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ

Read More

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ಸ್ತ್ರೀ ಅಸ್ಮಿತೆಯ ವಿಭಿನ್ನ ನೆಲೆಗಳು: ಡಾ. ಎಲ್.ಜಿ. ಮೀರಾ ಅಂಕಣ

ಸ್ತ್ರೀತ್ವವನ್ನು, ಅದರಿಂದ ಹೊಮ್ಮುವ ಅರಿವನ್ನು ತಾತ್ವಿಕವಾಗಿ ನಿರ್ವಚಿಸುವುದು ಒಂದು ಬಗೆಯಾದರೆ, ಪ್ರಸ್ತುತ ಬದುಕನ್ನು ಕಾಣುವ-ಕಟ್ಟುವ ಕ್ರಮವೊಂದನ್ನು ಅದು ನೀಡುವುದೇ ಎಂದು ಅನ್ವಯಕ್ರಮದಿಂದ ನೋಡುವುದು ಇನ್ನೊಂದು ಬಗೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಸ್ತ್ರೀಯ ಅಸ್ಮಿತೆಯು ಎದುರಿಸುತ್ತಿರುವ ಸವಾಲುಗಳನ್ನು ಚೇತನಾ ಗುರುತಿಸಿದ್ದಾರೆ ……. ಮಹಿಳೆಯರು ತಮ್ಮನ್ನು ಸ್ವಯಂ ಸಂಘಟಿಸಿಕೊಳ್ಳಲು ತಮ್ಮ ಅಸ್ಮಿತೆಯ ಮೂಲ ಸ್ವರೂಪ ಹಾಗೂ ಶಕ್ತಿ ಸಾಧ್ಯತೆಗಳನ್ನು ಅರಿಯುವುದು ಮೊದಲ ಹೆಜ್ಜೆ. ಇದು ಸಾಮಾಜಿಕ ಚಲನೆಗೂ ಪ್ರೇರಣೆಯಾಗುವ ಸಂಗತಿ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನಾರನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ