Advertisement

ಸುವರ್ಣ ಚೆಳ್ಳೂರು

ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್

ಮಹಿಳೆಯರ ಬದುಕು ಸ್ವಾವಲಂಬಿಯಾಗಿರಬೇಕೆಂದು ಶಕ್ತಿದಾಯಕವಾಗಿ ಇರಬೇಕೆಂದು ಗಾಂಧಿ ಬಯಸಿದ್ದರು ಎಂಬುದನ್ನು ಮೂಕಮ್ಮ ಮತ್ತು ರಮಾ ಪಾತ್ರದ ಮೂಲಕ ನಾಟಕಕಾರರು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ರಮಾ ವಿಧವೆಯಾಗಿದ್ದರು ಮತ್ತೊಬ್ಬನನ್ನು ಪ್ರೀತಿಸಿ ಮರು ಮದುವೆ ಮಾಡಿಕೊಳ್ಳುವ ಉತ್ಸಾಹವನ್ನು ತೋರಿಸಿದ್ದು ಕೂಡ ಗಾಂಧಿ ವಿಚಾರಧಾರೆಗಳಿಗೆ ಮನಸೋತು. ರಮಾ ಮತ್ತು ರಹಿಮರ ಪ್ರೇಮ ಭಾವೈಕ್ಯತೆಯ ಪ್ರತೀಕವಾಗಿ ಹೊರಹೊಮ್ಮಿದೆ.
‘ನಮ್ಮೊಳಗೊಬ್ಬ ಗಾಂಧಿ’ ನಾಟಕದ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

Read More

ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಬರಹ

ಇಂದಿನ ಆಧುನಿಕ ತಂತ್ರಜ್ಞಾನ ಕೃತಕ ಬುದ್ಧಿಮತ್ತೆಯಲ್ಲಿ ನಿಸರ್ಗದ ಚೈತನ್ಯವನ್ನು ನೋಡುವುದನ್ನು ಮರೆತುಬಿಟ್ಟಿದ್ದೇವೆ. ಗುಬ್ಬಿ ಗೂಡು ಕಟ್ಟುವುದನ್ನು,ಸೂರ್ಯೋದಯ ಚಂದ್ರೋದಯಗಳ ನಯನ ಮನೋಹರ ದೃಶ್ಯವನ್ನು, ಕರು ಆಕಳ ಕೆಚ್ಚಲನ್ನು ಹುಡುಕುವ ಹೊತ್ತನ್ನು ಮರೆತುಬಿಟ್ಟಿದ್ದೇವೆ. ಆಕಾಶದಿಂದ ಜಾರುವ ಮಳೆ, ಕಾಮನಬಿಲ್ಲು, ಇಬ್ಬನಿಯ ರೂಪ, ಪ್ರೀತಿ -ವಿರಹಗಳ ನಡುವಿನ ಬಾಂಧವ್ಯ, ಮೌನ ರಹಸ್ಯಗಳ ನಡುವಿನ ವಿಸ್ಮಯ. ಇವುಗಳ ನಡುವಿನ ಪ್ರೀತಿಯನ್ನು ಗಳಿಸುವ, ಬೆಳೆಸುವ, ಉಳಿಸುವ ದಾಹ ನಮ್ಮದಾಗಲಿ ಎಂಬ ಆಶಯ ವಿಫುಲ ರೂಪ ಧಾರಣಿಯದು. ಏಕೆಂದರೆ ‘ದಾರಿ ನೂರಾರಿವೆ ಬಿಡುಗಡೆಯ ಬೆಳಕಿನ ಅರಮನೆಗೆ’ ಎಂಬ ಸಾಲುಗಳು ನಮ್ಮಲ್ಲಿ ಪ್ರೀತಿಯ ಬುಗ್ಗೆ ಚಿಮ್ಮುವಂತಾಗಲಿ.
ಜಿ.ಎಸ್.‌ ಶಿವರುದ್ರಪ್ಪನವರ ಕವಿತೆಗಳನ್ನು ಆಧರಿಸಿದ ‘ವಿಫುಲ ರೂಪ ದಾರಿಣಿ’ ಕಾವ್ಯ ಅಭಿನಯದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಕನ್ನಡ ಕಾವ್ಯದಲ್ಲಿ ಸಮಾಧಾನದ ಪ್ರಭು ಯೇಸುವಿನ ಆರಾಧನೆ: ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ಯಾರು ಏನೇ ಅಂದರೂ ಯಾರು ಏನೇ ತಿಳಿದುಕೊಂಡರು ನಾವು ನಂಬಿರುವ ಪರಿಶುದ್ಧ ಮೌಲ್ಯಗಳೊಂದಿಗೆ ಜೀವಿಸಿದರೆ ಸಕಲವೂ ಸಾಧ್ಯ ಎಂಬುದನ್ನು ಮಹಾತ್ಮರು ತಿಳಿಸಿದ್ದಾರೆ. ಮೌಲ್ಯಗಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕುಸಿಯುತ್ತಿವೆ. ಅದನ್ನು ಹೇಗೆ ಕಾಪಾಡಿಕೊಳ್ಳಬೇಕು, ಸುಧಾರಿಸಿಕೊಳ್ಳಬೇಕು ಹೇಗೆ ಪುನರ್ ಸ್ಥಾಪಿಸಿಕೊಳ್ಳಬೇಕೆಂಬ ಗೊಂದಲದಲ್ಲಿದ್ದೇವೆ. ಮೌಲ್ಯಗಳು ಇಂದು ಬರಿ ಬಾಯಿ ಮಾತಾಗಿವೆ ಹೊರತು ಪ್ರಾಯೋಗಿಕವಾಗಿ ಮೌನವಾಗಿವೆ ಎಂಬ ಅಳಲು ಕವಿತೆಯದು.
ಕನ್ನಡ ಕಾವ್ಯದಲ್ಲಿ ಯೇಸುವಿನ ಕುರಿತ ಬರೆಯಲ್ಪಟ್ಟ ಕವಿತೆಗಳ ಕುರಿತು ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

Read More

ವಿಷಮಯ ವಿಶ್ವದ ವಿಷಾದ ಗಾಥೆ: ನಾಗೇಶ್‌ ಹೆಗಡೆ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ತನ್ನ ಮಕ್ಕಳಿಗಾಗಿ ಆಸ್ತಿ, ಐಶ್ವರ್ಯ ಸಂಪತ್ತುಗಳನ್ನೆಲ್ಲ ಮಾಡುತ್ತಾನೆ. ಆದರೆ ಪ್ರಕೃತಿ ಮಾನವನಿಗೆ ಕೊಟ್ಟ ನಿಸರ್ಗದತ್ತವಾದ ಸಂಪತ್ತನ್ನೆಲ್ಲ ಲೂಟಿ ಮಾಡುತ್ತಿದ್ದಾನೆ. ನಾವು ಪ್ರಕೃತಿಗೆ ಕೊಡಬೇಕಾದ ಗೌರವವನ್ನು ಕೊಡದೆ ಅವಿಧೇಯತೆಯಿಂದ ನಡೆಸಿಕೊಳ್ಳುತ್ತಾ ಬಂದಿದ್ದೇವೆ. ಪ್ರಕೃತಿಯ ಮುನಿಸನ್ನು ಎದುರಿಸಲು ನಾವು ಸಿದ್ಧರಿದ್ದೇವೆಯೇ, ಅದು ಸಾಧ್ಯವೇ? ಪ್ರಕೃತಿಯ ವಿರುದ್ಧ ಮನುಷ್ಯ ಗೆದ್ದಿದ್ದೇ ಆದರೆ ಮುಂದೆ ಅವನಿಗೆ ಸೋಲು ಕಟ್ಟಿಟ್ಟ ಬುತ್ತಿ’ ಎಂದು ಚಿಂತಕ ಯೂಜಿನ್ ಶುಮಾಕರ್‌ರ ಮಾತನ್ನು ಲೇಖಕರು ಉಲ್ಲೇಖಿಸುತ್ತಾರೆ.
ನಾಗೇಶ್‌ ಹೆಗಡೆ ಬರೆದ ‘ಪರಿಸರದ ಮಹಾ ದುರಂತಗಳು’ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

Read More

ಯೇಸುವಿನ ಪ್ರೀತಿ ಔದಾರ್ಯಕ್ಕೆ ಮಿಡಿದ ಕಾವ್ಯಲೋಕ: ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ

ವಾಕ್ಯವೇ ದೇವರು ಎನ್ನುವ ಕ್ರಿಸ್ತನ ಅನುಯಾಯಿಗಳು ವಾಕ್ಯದ ಮುಖಾಂತರ ನಡೆಯುತ್ತೇವೆ ಎಂಬ ಭ್ರಮೆಯಲ್ಲಿ ಇರುತ್ತಾರೆ ಅದು ಅವರ ಅರಿವಿಗೆ ಬರುವಷ್ಟರಲ್ಲಿ ಪಾಪದ ಕೊಡ ತುಂಬುತ್ತಲಿರುತ್ತದೆ. ಅಂದು ಏಸುವನ್ನು ದೈಹಿಕವಾಗಿ ಶಿಲುಬೆಗೆ ಏರಿಸಿದರೆ, ಇಂದಿನ ಅನುಯಾಯಿಗಳೆಂಬ ಅಂಧ ಭಕ್ತರ ದಂಡು ಮಾನಸಿಕವಾಗಿ ಯೇಸುವನ್ನು ಶಿಲುಬೆಗೇರಿಸಿದ್ದಾರೆ ಎಂಬ ಭಾವ ಕವಿತೆಯದ್ದಾಗಿದೆ. ವಚನಕಾರರು ಅಂತರಂಗ ಶುದ್ದಿ ಬಹಿರಂಗ ಶುದ್ದಿಯನ್ನು ಇಲ್ಲಿ ವಾಕ್ಯದ ಮೂಲಕ ನೆನಪಿಸಿಕೊಳ್ಳಬಹುದು.
ಕನ್ನಡ ಸಾಹಿತ್ಯದಲ್ಲಿ ಏಸು ಕ್ರಿಸ್ತನ ಬದುಕಿನ ಕುರಿತು ರಚಿತವಾದ ಕವಿತೆಗಳ ಕುರಿತು ಡಾ. ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ