Advertisement

ವಿನಾಯಕ ಅರಳಸುರಳಿ

ವಿಷಮಯ ವಿಶ್ವದ ವಿಷಾದ ಗಾಥೆ: ನಾಗೇಶ್‌ ಹೆಗಡೆ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ತನ್ನ ಮಕ್ಕಳಿಗಾಗಿ ಆಸ್ತಿ, ಐಶ್ವರ್ಯ ಸಂಪತ್ತುಗಳನ್ನೆಲ್ಲ ಮಾಡುತ್ತಾನೆ. ಆದರೆ ಪ್ರಕೃತಿ ಮಾನವನಿಗೆ ಕೊಟ್ಟ ನಿಸರ್ಗದತ್ತವಾದ ಸಂಪತ್ತನ್ನೆಲ್ಲ ಲೂಟಿ ಮಾಡುತ್ತಿದ್ದಾನೆ. ನಾವು ಪ್ರಕೃತಿಗೆ ಕೊಡಬೇಕಾದ ಗೌರವವನ್ನು ಕೊಡದೆ ಅವಿಧೇಯತೆಯಿಂದ ನಡೆಸಿಕೊಳ್ಳುತ್ತಾ ಬಂದಿದ್ದೇವೆ. ಪ್ರಕೃತಿಯ ಮುನಿಸನ್ನು ಎದುರಿಸಲು ನಾವು ಸಿದ್ಧರಿದ್ದೇವೆಯೇ, ಅದು ಸಾಧ್ಯವೇ? ಪ್ರಕೃತಿಯ ವಿರುದ್ಧ ಮನುಷ್ಯ ಗೆದ್ದಿದ್ದೇ ಆದರೆ ಮುಂದೆ ಅವನಿಗೆ ಸೋಲು ಕಟ್ಟಿಟ್ಟ ಬುತ್ತಿ’ ಎಂದು ಚಿಂತಕ ಯೂಜಿನ್ ಶುಮಾಕರ್‌ರ ಮಾತನ್ನು ಲೇಖಕರು ಉಲ್ಲೇಖಿಸುತ್ತಾರೆ.
ನಾಗೇಶ್‌ ಹೆಗಡೆ ಬರೆದ ‘ಪರಿಸರದ ಮಹಾ ದುರಂತಗಳು’ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

Read More

ಯೇಸುವಿನ ಪ್ರೀತಿ ಔದಾರ್ಯಕ್ಕೆ ಮಿಡಿದ ಕಾವ್ಯಲೋಕ: ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ

ವಾಕ್ಯವೇ ದೇವರು ಎನ್ನುವ ಕ್ರಿಸ್ತನ ಅನುಯಾಯಿಗಳು ವಾಕ್ಯದ ಮುಖಾಂತರ ನಡೆಯುತ್ತೇವೆ ಎಂಬ ಭ್ರಮೆಯಲ್ಲಿ ಇರುತ್ತಾರೆ ಅದು ಅವರ ಅರಿವಿಗೆ ಬರುವಷ್ಟರಲ್ಲಿ ಪಾಪದ ಕೊಡ ತುಂಬುತ್ತಲಿರುತ್ತದೆ. ಅಂದು ಏಸುವನ್ನು ದೈಹಿಕವಾಗಿ ಶಿಲುಬೆಗೆ ಏರಿಸಿದರೆ, ಇಂದಿನ ಅನುಯಾಯಿಗಳೆಂಬ ಅಂಧ ಭಕ್ತರ ದಂಡು ಮಾನಸಿಕವಾಗಿ ಯೇಸುವನ್ನು ಶಿಲುಬೆಗೇರಿಸಿದ್ದಾರೆ ಎಂಬ ಭಾವ ಕವಿತೆಯದ್ದಾಗಿದೆ. ವಚನಕಾರರು ಅಂತರಂಗ ಶುದ್ದಿ ಬಹಿರಂಗ ಶುದ್ದಿಯನ್ನು ಇಲ್ಲಿ ವಾಕ್ಯದ ಮೂಲಕ ನೆನಪಿಸಿಕೊಳ್ಳಬಹುದು.
ಕನ್ನಡ ಸಾಹಿತ್ಯದಲ್ಲಿ ಏಸು ಕ್ರಿಸ್ತನ ಬದುಕಿನ ಕುರಿತು ರಚಿತವಾದ ಕವಿತೆಗಳ ಕುರಿತು ಡಾ. ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ ನಿಮ್ಮ ಓದಿಗೆ

Read More

ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಸಾಮೂಹಿಕವಾಗಿ ಇಂದು ನಾಟಕಗಳನ್ನು ಆಡಲು ಬಹಳ ಜನರು ಸೇರುತ್ತಿಲ್ಲ. ತಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಆ ಸಂದರ್ಭದ ರಂಗಭೂಮಿಯ ವೈಭವವೇ ಬೇರೆ. ಸಾಂಪ್ರದಾಯಿಕ ವೃತ್ತಿರಂಗಭೂಮಿಯ ನಾಟಕ ಕಂಪನಿಗಳು ಇಂದಿಗೂ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹರ್ಷದಾಯಕ ಬೆಳವಣಿಗೆ. ಅದು ಅವರಿಗೆ ಅನಿವಾರ್ಯವೂ ಕೂಡ ಆಗಿದೆ. ಜನರ ಅಭಿರುಚಿ, ಅಭಿವೃದ್ಧಿಗೆ ತಕ್ಕಂತೆ ನಾಟಕಗಳು ತಮ್ಮ ಶೈಲಿ ಸಂಭಾಷಣೆ ಎಲ್ಲವನ್ನು ಮಾರ್ಪಡಿಸಿಕೊಂಡಿವೆ. ಬಹಳಷ್ಟು ಕಲಾವಿದರು ಸಾಮಾಜಿಕ ನಾಟಕ ಕಂಪನಿಗಳಿಂದ ಬದುಕುವವರಿದ್ದಾರೆ.
ಏಕವ್ಯಕ್ತಿ ರಂಗ ಪ್ರಯೋಗದ ಸವಾಲು ಮತ್ತು ಸಾಧ್ಯತೆಗಳ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

Read More

ಹಾಸ್ಯದ ಹೊಂಬಿಸಿಲು ಹಳಿಸುತ್ತಿದೆಯೇ?: ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

ಮಾತು ‘ಮನೆ’ ಕಟ್ಟಬೇಕು, ಮಾತು ಮೌನವಾಗಬೇಕು. ಮಾತು ‘ಮಮತೆ’ಯಾಗಬೇಕು ಮಾತು ‘ಹಾಸ್ಯದ ಮನ್ವಂತರ ‘ಸೃಷ್ಟಿಸಬೇಕು. ಡಿವಿಜಿ ಹೇಳುವಂತೆ ‘ನಗು ನಗುವ ಕಣ್ಣುಗಳಿಗೆ ಹೊಗೆಯ ನೂದಲು ಬೇಡ ‘ಎಂಬ ಮಾತು ನೆನಪಿಸಿಕೊಳ್ಳಬೇಕು. ಹಾಸ್ಯ ‘ವಿಕಾಸ’ ವಾಗಬೇಕೇ ವಿನಹ ಕಸದ ಬುಟ್ಟಿಯಾಗಬಾರದಲ್ಲವೇ? ನಗುವಿನ ಕನಸುಗಳ ಮನೆಯಲ್ಲಿ ಕಲ್ಲು ಬೀಳದೆ ಕಲ್ಲು ಕೂಡ ಕರಗುವಂತ ನಗುವನ್ನು ಸೃಷ್ಟಿಸುವಂತಹ ನಗೆ ಹಬ್ಬ ನಮ್ಮದಾಗಬೇಕು.
ಹಾಸ್ಯ ಕಾರ್ಯಕ್ರಮಗಳ ಗುಣಮಟ್ಟದ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

Read More

ಸಾಂಸ್ಕೃತಿಕ ಸಂಘರ್ಷಗಳ ಕುಲುಮೆಯ ‘ರಕ್ತ ವಿಲಾಪ’: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಸತ್ಯ ಎಲ್ಲರಿಗೂ ಕಹಿಯಾಗಿರುವುದು. ಆದರೆ ಅದರ ಸತ್ವ ಅರಿತವನು ಸಂಶೋಧನೆಗೆ ನಿಷ್ಠೆ ತೋರಿಸುತ್ತಾನೆ. ಅರಿಯದವನು ಶತ್ರುವಾಗುತ್ತಾನೆ. ಇದೇ ಪರಿಸ್ಥಿತಿ ಯುವಕನದ್ದು ಹಾಗೂ ಸಮಾಜದ್ದು ಎಂದು ಘಂಟಿಯವರು ಹಾಗೂ ವಿಸಾಜಿಯವರು ಘಂಟಾಘೋಷವಾಗಿ ಪಾತ್ರಗಳ ಮೂಲಕ ಮಾತಾಡಿಸುತ್ತಾರೆ.
ವಿಕ್ರಮ ವಿಸಾಜಿ ರಚಿತ, ಶಂಕ್ರಯ್ಯ ಆರ್ ಗಂಟಿ ನಿರ್ದೇಶನದ ‘ರಕ್ತ ವಿಲಾಪ’ ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ