Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

‘ಮಗಳ ಮದುವೆ’: ಪೂರ್ಣ ಮತ್ತು ಅಪೂರ್ಣ ಬದುಕಿನ ಮಾದರಿಗಳು

ರತ್ನಾಕರನ ಗೆಳೆಯನೂ ಸರಳ ಸಜ್ಜನನೂ ಆಗಿರುವ ರಂಗಣ್ಣನ ತಮ್ಮ ವೆಂಕಣ್ಣನಲ್ಲಿ ಸ್ವಲ್ಪ ಒಳ್ಳೆಯ ಗುಣಗಳು ಇದ್ದರೂ ಚಳುವಳಿಗಾರರಾಗಿರುವ ಅವನ ಸಂಗಡಿಗರು ಪೋಲೀಸರೊಂದಿಗೆ ಕೈಜೋಡಿಸಿ ರತ್ನಾಕರನನ್ನು ಸೆರೆಮನೆಗೆ ತಳ್ಳುವಂತೆ ಮಾಡಲು ಹೇಸದಷ್ಟು ಧೂರ್ತರಾಗಿದ್ದಾರೆ. ಕುಮುದಳನ್ನು ಮದುವೆಯಾಗಲು ಯೋಗ್ಯನಾಗಿದ್ದ ರತ್ನಾಕರನು ತನ್ನ ಗೆಳೆಯರ ಕುಮ್ಮಕ್ಕಿನಿಂದಾಗಿ ಸೆರೆಮನೆಗೆ ತೆರಳಬೇಕಾಗುವ ಸಂದರ್ಭವು ಇದಕ್ಕೊಂದು ನಿದರ್ಶನ.
ಆನಂದಕಂದರ ‘ಮಗಳ ಮದುವೆ’ ಕಾದಂಬರಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ಒಳಭಾಗಕ್ಕೆ ತೆರೆದುಕೊಂಡಿದ್ದ ಬಾಗಿಲಿಗೊರಗಿ ನಿಂತುಕೊಂಡ ಪ್ರಿಯಾ ಆಗಸದ ಶೂನ್ಯದಲ್ಲಿ ಮಿನುಗುತ್ತಿರುವ ನಕ್ಷತ್ರಗಳನ್ನು ಅರೆಮುಚ್ಚಿದ ಕಣ್ಣುಗಳಿಂದ ನೋಡುತ್ತಾ ಅಂದಳು “ನಾನು ಕೆಟ್ಟ ಅದೃಷ್ಟದ ಸಂಕೇತ ದಿನೂ. ನೀವು ಹೆಣ್ಣು ನೋಡಲು ಬಂದಾಗ ನಾನು ಏನೇನೋ ಕನಸು ಕಟ್ಟಿದೆ. ಆದ್ರೆ ಅಂದುಕೊಂಡದ್ದೇನೂ ನಿಜವಾಗ್ಲಿಲ್ಲ. ಈಗ ನೋಡು, ಇದೇ ನನ್ನ ಬದುಕು. ಇದೇ ನನ್ನ ಭಾಗ್ಯ” ಎನ್ನುತ್ತಾ ಮುಖವನ್ನು ಅತ್ತ ಹೊರಳಿಸಿ ಗಂಟಲಲ್ಲಿ ಕಟ್ಟಿ ನಿಂತ ಬಿಕ್ಕಳಿಕೆಯನ್ನು ಕಷ್ಟಪಟ್ಟು ತಹಬದಿಗೆ ತಂದುಕೊಂಡಳು.
ಡಾ. ಸುಭಾಷ್‌ ಪಟ್ಟಾಜೆ ಬರೆದ ಈ ಭಾನುವಾರದ ಕತೆ “ಹುಟ್ಟು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

‘ಸುದರ್ಶನ’: ಧ್ಯೇಯ ಆದರ್ಶಗಳ ದರ್ಶನ

ಸುದರ್ಶನನು ದೀನಾನಂದನಾಗಿ ಗಳಿಸಿದ ಜನಪ್ರಿಯತೆ, ಯಶಸ್ಸು, ನಿರ್ಲಿಪ್ತತೆ ಮತ್ತು ನೈತಿಕ ಕಟ್ಟುಪಾಡುಗಳಿಗೆ ಒಗ್ಗಿದ ಬದುಕಿನ ಕಡೆಗೆ ಕಾದಂಬರಿಯು ಗಮನವನ್ನು ಹರಿಸಿದ್ದರೂ ಇದನ್ನು ಕೇವಲ ಸುದರ್ಶನನ್ನು ಕುರಿತ ಕಾದಂಬರಿಯನ್ನಾಗಿ ಓದಲಾಗದು. ಆತನು ಕಾದಂಬರಿಯ ಪ್ರಧಾನ ಪಾತ್ರವಾದರೂ ಇವನೊಂದಿಗೆ ವೈದೃಶ್ಯದಲ್ಲಿ ನಿಲ್ಲಬಲ್ಲ ಹಲವು ಪಾತ್ರಗಳು ಇವೆ. ಆ ಪಾತ್ರಗಳು ಸೂಚಿಸುವ ಬಹುಮುಖೀ ನೆಲೆಗಳ ಒಟ್ಟು ವಿನ್ಯಾಸದಲ್ಲಿ ಕಾದಂಬರಿಯನ್ನು ಗ್ರಹಿಸಬೇಕಾಗುತ್ತದೆ. ಆನಂದಕಂದರ ‘ಸುದರ್ಶನ’ ಕಾದಂಬರಿಯ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ ನಿಮ್ಮ ಓದಿಗೆ

Read More

ಕಥಾಲೋಕದ ಆಯಾಮಗಳನ್ನು ಬದಲಿಸಿದ ತಿರುಮಲೇಶರು

ನವ್ಯ ಮತ್ತು ಈ ಪೀಳಿಗೆಯ ತರುಣ ಕತೆಗಾರರನ್ನು ಆಳವಾಗಿ ಪ್ರಭಾವಿಸಿದ ಕೆ. ವಿ. ತಿರುಮಲೇಶರು ಅನೇಕ ದೃಷ್ಟಿಯಿಂದ ಕನ್ನಡದ ಸಣ್ಣಕತೆಯ ಕಲಾತ್ಮಕ- ವೈಚಾರಿಕ ಆಯಾಮಗಳನ್ನು ಬದಲಿಸಿದರು. ಸಿದ್ಧ ಮಾನದಂಡಗಳಿಲ್ಲದೆ ನೇರವಾಗಿ ಆರಂಭಗೊಳ್ಳುವ ಇವರ ಕತೆಗಳು ಆಪ್ತವೆನಿಸುವ ನಿರೂಪಣ ವಿಧಾನವನ್ನು ಹೊಂದಿವೆ. ನಿರೂಪಣೆಗೆ ಸೂಕ್ತವಾದ ವಿಕಸನಶೀಲ ಭಾಷೆಯಿದೆ. ಸವಕಲು ಹಾದಿಯಿಂದ ಹೊಸ ಹಾದಿಯೊಳಗೆ ತವಕದಿಂದ ಮುನ್ನುಗ್ಗುವ ವೇಗವಿದೆ. ಹಲವಾರು ವರ್ಷಗಳಿಂದ ಬರೆಯುತ್ತಲೇ ಇರುವ ತಿರುಮಲೇಶರು ಸದಾ ಹೊಸತನ್ನೇ ಕಾಣಿಕೆಯಾಗಿ ನೀಡುತ್ತಿದ್ದಾರೆ. ಇಂದು ಕೆ.ವಿ. ತಿರುಮಲೇಶ್‌ ಅವರ ಹುಟ್ಟುಹಬ್ಬ. ಅವರು ಬರೆದ 
ʻಕೆಲವು ಕಥಾನಕಗಳುʼ  ಕಥಾಸಂಕಲನದ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ ಈ ಸಂದರ್ಭದ ಓದಿಗಾಗಿ

Read More

ದೇವರ ಅಸ್ತಿತ್ವವನ್ನು ಹುಡುಕಾಡುವ ಕಥನ

ಯುವ ತಲೆಮಾರು ವಿದೇಶಗಳಲ್ಲಿ ನೆಲೆಗೊಳ್ಳುವಾಗ ಮನೆದೇವರ ಗೊಡವೆಯು ಯಾರಿಗೂ ಬೇಡವಾಗಿದೆ. ಆಧುನಿಕ ಯುಗವು ಬದಲಾವಣೆಯನ್ನು ಹೊಂದುತ್ತಿರುವ ಸಂದರ್ಭದಲ್ಲಿ ದೇವರು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದಾನೆಯೇ ಎಂಬ ಪ್ರಶ್ನೆಯನ್ನು ಎತ್ತಿಕೊಂಡು ಈ ಕಾದಂಬರಿಯನ್ನು ರಚಿಸಲಾಗಿದೆ.  ಲಿಂಗ ಮತ್ತು ಜಾತಿಯ ಆಧಾರದಲ್ಲಿ ಗಂಡಸರನ್ನು ಶೋಷಕರನ್ನಾಗಿಯೂ ಹೆಂಗಸರನ್ನು ಶೋಷಿತರನ್ನಾಗಿಯೂ, ಕಲ್ಪಿಸಿ ಅಭ್ಯಾಸವಾಗಿರುವ ಹೊತ್ತಿನಲ್ಲಿ ಲೇಖಕರು ವಸ್ತುಸ್ಥಿತಿಯ ಎರಡೂ ಮಗ್ಗುಲಿಗೆ ಕಣ್ಣುಹಾಯಿಸಿದಂತೆ ಗೋಚರಿಸುತ್ತದೆ.  ಡಾ. ನಾ. ಮೊಗಸಾಲೆಯವರ ‘ಇದ್ದೂ ಇಲ್ಲದ್ದುʼ ಕಾದಂಬರಿಯ ಕುರಿತು ಡಾ. ಸುಭಾಷ್ ಪಟ್ಟಾಜೆ ಬರೆದ ಬರಹ ಇಲ್ಲಿದೆ.

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ