Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಐವತ್ತರ ದಶಕದ ಕ್ರಿಕೆಟ್‌ನ ಧೀಮಂತರು: ಇ.ಆರ್. ರಾಮಚಂದ್ರನ್ ಅಂಕಣ

ಭಾರತ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆದಿಶೇಷರನ್ನು ಆಯ್ಕೆ ಮಾಡಲಾಗಿತ್ತು. ಆ ದಿನಗಳಲ್ಲಿ ಹೆಚ್ಚು ಕಡಿಮೆ ತಂಡದ ಸದಸ್ಯರೆಲ್ಲಾ ಬೊಂಬಾಯಿನವರಾಗಿದ್ದರು. ಬೇರೆ ರಾಜ್ಯಗಳಿಂದ ಒಬ್ಬರೋ ಇಬ್ಬರನ್ನೋ ಆಯ್ಕೆ ಮಾಡುತ್ತಿದ್ದರು. ಆಗ ತಂಡದಲ್ಲಿ ತಾರತಮ್ಯ ಮತ್ತು ಭೇದ ಭಾವನೆಗಳಿದ್ದು ಎಷ್ಟೋಸಲ ಬೇರೆ ರಾಜ್ಯದವರು ಟೀಮಿನ ಜೊತೆಗೆ ಪ್ರವಾಸಕ್ಕೆ ಹೋಗಲು ಹಿಂಜರಿಯುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಐವತ್ತರ ದಶಕದ ಕ್ರಿಕೆಟ್‌ನ ಧೀಮಂತರ ಕುರಿತ ಬರಹ ನಿಮ್ಮ ಓದಿಗೆ

Read More

ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್‌ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್‌ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಚೆನ್ನೈ ಸೂಪರ್‌ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್‌ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್‌ಗಳಿದ್ದರು. ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

150 ವರ್ಷಗಳ ಕ್ರಿಕೆಟ್ ಟೆಸ್ಟ್‌ಗಳಲ್ಲಿ ಎರಡೇ ‘ಟೈ’ ಮ್ಯಾಚುಗಳು!: ಇ.ಆರ್. ರಾಮಚಂದ್ರನ್ ಅಂಕಣ

ಕೊನೆಯ ರನ್ – ಗೆಲುವಿನ ರನ್ ಇಯನ್ ಮೆಕಿಫ್ ಓಡುತ್ತಿದ್ದಾಗ ಜೊ ಸೊಲೊಮನ್ ಬಾಲನ್ನು ಅಟ್ಟಿಸಿಕೊಂಡು ಹೋಗಿ ಹಿಡಿದು ಅದನ್ನು ವಿಕೆಟ್‌ಗೆ ಎಸೆದು ಮೆಕಿಫ್‌ಅನ್ನು ರನ್ ಔಟ್ ಮಾಡಿದರು. ಸೋಲೊಮನ್ ಬಾಲ್ ಎಸೆದಾಗ ಮೂರು ವಿಕೆಟ್‌ಗಳಿದ್ದರೂ ಅವರು ಸ್ಕೊಯರ್ ಲೆಗ್‌ನಲ್ಲಿ ಇದ್ದುದ್ದರಿಂದ ಆ ಜಾಗದಿಂದ ಅವರಿಗೆ ಕಾಣಿಸುತ್ತಿದ್ದ ವಿಕೆಟ್ ಒಂದೇ! ಅವರು ಗುರಿ ಇಟ್ಟು ಹೊಡೆದು ವಿಕೆಟ್‌ಗೆ ಬಿದ್ದು ಮೆಕಿಫ್ ರನ್ ಔಟಾದರು. ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟೆಸ್ಟ್‌ಮ್ಯಾಚ್‌ಗಳಲ್ಲಿ ಇದುವರೆಗೂ ಆದ ಎರಡು ಟೈ ಮ್ಯಾಚುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಗುಡುಗು, ಮಿಂಚು ಸುರಿಸುವ ಮಾಂತ್ರಿಕರು: ಇ.ಆರ್. ರಾಮಚಂದ್ರನ್ ಅಂಕಣ

ಆ ಪಂದ್ಯದಲ್ಲಿ ವಿವಿಎಸ್ 167 ರನ್ ಹೊಡೆದರು… ಚಚ್ಚಿದರು ಅನ್ನುವ ಪದ ಇನ್ನೂ ಸರಿಹೋಗಬಹುದು. ಮಿಕ್ಕವರ ಸ್ಕೋರ್? ಗಂಗೂಲಿ 25, ಬೋಲರ್‌ಗಳಾದ ಕುಂಬ್ಳೆ, ಶ್ರಿನಾಥ್ ತಲಾ 15! ಮಿಕ್ಕವರೆಲ್ಲರೂ ಒಂದು ಅಂಕಕ್ಕೆ ಔಟಾದರು! ಎಕ್ಸ್ಟ್ರಾಸ್ 21! ವಿಶೇಷವೆಂದರೆ ಆಸ್ಟ್ರೇಲಿಯಾದ ಹೆಸರಾಂತ ಬೋಲರ್‌ಗಳಾದ ಶೇನ್ ವಾರ್ನ್‌ 13 ಓವರ್‌ಗಳಿಗೆ 60 ರನ್ ಮತ್ತು ಫಾಸ್ಟ್ ಬೋಲರ್ ಬ್ರೆಟ್ ಲೀ 11 ಓವರ್‌ಗೆ 67 ರನ್‌ ಕೊಟ್ಟಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ