Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ದಾರಿಯೂ ಬೆಳಕೂ ಆಗುವ ಕಾವ್ಯಧ್ಯಾನ

ಹೊರಗಿನ ಮಾತುಗಳಿಗಿಂತ ಒಳಗಿನ ಅರಳುವಿಕೆ ಕವಿಗೆ ಮಹತ್ವದದ್ದೆನಿಸಿದೆ. ಆತ್ಮದ ಅರಳುವಿಕೆಯಲ್ಲಿ ಹಿಗ್ಗುತ್ತಿರುವ ವಿಕಾಸ ಭಾವವೊಂದು ಹೊರಲೋಕದ ಸುಳ್ಳುಸುಳ್ಳೇ ಚಹರೆಗಳನ್ನು ನೋಡಿ ವಿಹ್ವಲಗೊಳ್ಳುತ್ತದೆ. ಇಂದು ಜೊಳ್ಳುಗಳೇ ವಿಜೃಂಭಿಸುತ್ತಿರುವ ಕಾಲ. ವಿಚಾರ, ದರ್ಶನ, ಭಾವ ಬದುಕು ಎಲ್ಲವೂ ಜೊಳ್ಳು ಮಾದರಿಗಳ ಹಿಂದೆಬಿದ್ದಿದೆ. ಸ್ವರೂಪ ಮರೆಯಾಗಿ ನಾಮಫಲಕಗಳೇ ವಿಜೃಂಭಿಸುವುದು ನಮ್ಮ ಬದುಕಿನ ಅಂತಃಸತ್ವವೇ ತೀರಿಹೋಗಿರುವ ವ್ಯಂಗ್ಯವನ್ನು ಸೂಚಿಸುತ್ತದೆ. ಇಂಥ ಚಿತ್ರಗಳ ಮೂಲಕ ತಮ್ಮ ಹುಡುಕಾಟದ ನೆಲೆ ಏನೆಂಬುದನ್ನು ಅವರ ಕಾವ್ಯವು ನಮಗೆ ಕಾಣಿಸುತ್ತಿದೆ.
ಅಶೋಕ ಹೊಸಮನಿ ಕವನ ಸಂಕಲನ “ಹರವಿದಷ್ಟು ರೆಕ್ಕೆಗಳು” ಕೃತಿಗೆ ಡಾ. ಗೀತಾ ವಸಂತ ಬರೆದ ಮುನ್ನುಡಿ

Read More

ನಿಂತ ಶಹನಾಯಿಯ ನಾದ: ಕಣವಿಯವರ ಕವಿತೆಯೊಂದರ ಕುರಿತು

ಸೃಷ್ಟಿಯ ನಿಗೂಢತೆಯ ಬಗ್ಗೆ ಸದಾ ವಿಸ್ಮಯವನ್ನು, ಕುತೂಹಲವನ್ನೂ ಹೊಂದಿದ್ದ, ಆ ವಿಸ್ಮಯವನ್ನು ಕಾವ್ಯಸಾಲುಗಳಲ್ಲಿ ಪ್ರತಿಬಿಂಬಿಸುತ್ತಿದ್ದ, ಹಿರಿಯ ಕವಿ ಚೆನ್ನವೀರಣ ಕಣವಿ ತೀರಿಕೊಂಡಿದ್ದಾರೆ. ಚೆಂಬೆಳಕಿನ ಕವಿ, ಸುನೀತಗಳ ಸಾಮ್ರಾಟ, ನಾಡೋಜ ಮುಂತಾದ ಅನೇಕ ಬಿರುದುಗಳು ಅವರಿಗೆ ಸಂದಿದ್ದರೂ ಅವರು, ಕನ್ನಡ ಭಾವಗೀತೆ ಪರಂಪರೆಯ ಶ್ರೇಷ್ಟ ಕವಿಗಳಲ್ಲಿ ಒಬ್ಬರು. ಅವರ ಕಾವ್ಯದಲ್ಲಿ ಭಾವತೀವ್ರತೆಗೇ ಆದ್ಯತೆ.
‘ಪೃಥ್ವಿ ತೂಗಿದೆ ಸೂರ್ಯಚಂದ್ರರಿಗೂ ಜೋಕಾಲಿ’ ಎಂದು ಬರೆದ ಕವಿ ಅವರು. ಅವರು ಬರೆದ  ‘ಬಿಸ್ಮಿಲ್ಲಾರ ಶಹನಾಯಿ ವಾದನ ಕೇಳಿ’ ಕವಿತೆಯ ಕುರಿತು ಲೇಖಕಿ…

Read More

ಡಾ. ಗೀತಾ ವಸಂತ ಬರೆದ ಕವಿತೆ: ತೊಟ್ಟು ಕಳಚಿದ ಹೂವು

“ಕೆರೆಯಂಚಿನ ಹಾದಿಯಲಿ ಅಪ್ಪನ ಅರಲುಮೆತ್ತಿದ ಹೆಜ್ಜೆ
ಕಾಲದಾಚೆಗೆ ನಡೆದುಹೋದಂತಿದೆ
ನೀರಿಗೆ ಗಾಳಿಸೋಕಿ ಅಲೆಯ ಉಂಗುರವೆದ್ದು
ಅಂತಪಾರವಿಲ್ಲದೆ ವಿಸ್ತರಿಸಿದೆ”- ಡಾ. ಗೀತಾ ವಸಂತ ಬರೆದ ಕವಿತೆ

Read More

‘ಕಂಡವರಿಗಷ್ಟೇ’ ಪುಸ್ತಕಕ್ಕೆ ಡಾ. ಗೀತಾ ವಸಂತ ಬರೆದ ಸಂಪಾದಕೀಯ ನುಡಿ

“ಮನುಷ್ಯನ ತರ್ಕದಾಚೆಗೆ ಸೃಷ್ಟಿಯ ಮಿಡಿತವಿರುತ್ತದೆ. “ಅನುಭವವು ಜಗತ್ತಿನ ಕಾರಣಗಳನ್ನು ಹುಡುಕುತ್ತಿದೆ. ಅನುಭಾವವು ಜಗತ್ತಿನ ಕರ್ತೃವನ್ನೇ ಹುಡುಕುತ್ತಿದೆ. ಅನುಭವಕ್ಕೆ ತಿಳಿಯಾದ, ಹದವಾದ, ಸ್ಥಿರವಾದ ಎಚ್ಚರವೇ ಬೇಕು; ಅದಷ್ಟೇ ಸಾಕು. ಅನುಭಾವಕ್ಕೆ ಇದೇ ಜಾತಿಯ ಎಚ್ಚರವೇ ಬೇಕು. ಆದರೆ ಅದು ಕನಸಿನಾಚೆಯ ನಿದ್ದೆಯಲ್ಲ. ನಿದ್ದೆಯಾಚೆಗಿನೆಚ್ಚರ. ನಿದ್ದೆಯಾಚೆಗೊಂದು ಎಚ್ಚರದ ಹಿಮಾಲಯವಿದೆ. ಅದರ ಎತ್ತರದಿಂದ ಬಹಳ ವಿಸ್ತಾರವಾದ ದೃಶ್ಯವು ಗೋಚರವಾಗುವುದು. ಈ ಎತ್ತರದ ಮೇಲಿನ ಎಚ್ಚರಕ್ಕೆ ‘ಸಮಾಧಿ’ ಎಂದು ಹೇಳುವರು.”

Read More

ಮರ್ತ್ಯದ ಋಣತೀರಿಸಿ ಅಮರರಾದ ಆಮೂರರು: ಡಾ. ಗೀತಾ ವಸಂತ ಲೇಖನ

“ಆಮೂರರು ಮೊದಲ ಬರವಣಿಗೆ ಗುರುತಿಸಲ್ಪಟ್ಟದ್ದು ಇಂಗ್ಲೀಷ್ ನಿಬಂಧದ ಮೂಲಕವೇ. ಕುವೆಂಪು ಆದಿಯಾಗಿ ಆ ಕಾಲದ ಸೃಜನಶೀಲರಿಗೆ ಈ ವಸಾಹತುಶಾಹಿ ಭಾಷೆಯ ಆಕರ್ಷಣೆ ಉಂಟಾಗಲು ಹಲವು ಕಾರಣಗಳಿವೆ. ಆದರೆ ಆಮೂರರ ಸಾಹಿತ್ಯ ಸಂವೇದನೆ ಬೆಳೆದದ್ದು ಚಿಕ್ಕಂದಿನಲ್ಲಿ ಸಂಸ್ಕೃತದ ಶಾಸ್ತ್ರೀಯ ಕಾವ್ಯಗಳನ್ನು ಓದುವ ಮೂಲಕ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ