Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಪ್ರೊ. ಷ. ಶೆಟ್ಟರ್ ಜೊತೆ ಡಾ. ಗೀತಾ ವಸಂತ ನಡೆಸಿದ್ದ ಮಾತುಕತೆ

“ವ್ಯಾಕರಣ, ಛಂದಸ್ಸುಗಳನ್ನು ಬಾಲ್ಯದಲ್ಲಿ ಉರು ಹೊಡೆಸುತ್ತಿದ್ದರು. ಆಗ ಅದು ತಲೆಗೆ ಹತ್ತಲೇ ಇಲ್ಲ. ಕಂಠಪಾಠವು ಸಂಸ್ಕೃತದ ಕಲಿಕಾವಿಧಾನ. ಆದರೆ, ವ್ಯಾಕರಣ, ಛಂದಸ್ಸುಗಳು ಭಾಷೆಯ ಸಮಗ್ರ ತಿಳುವಳಿಕೆಗೆ ಅಗತ್ಯ. ಆ ಗ್ರಂಥಗಳನ್ನೂ ರಸಾಸ್ಪಾದಕ್ಕಾಗಿ, ರಸಾಸ್ಪಾದದ ಮೂಲಕ ಓದಲು ಸಾಧ್ಯ. ವ್ಯಾಕರಣ ಗ್ರಂಥಗಳ ಲೇಖಕರೂ ತುಂಟರು. ಸಾಕಷ್ಟು ರಸಿಕರು! ಉದಾಹರಣೆಗಳನ್ನು ಕೊಡುವಾಗ ರಸಾಸ್ವಾದದ ಸ್ಥಳಗಳನ್ನು ನಿರ್ಮಿಸುವಲ್ಲಿ ಅವರು ನಿಪುಣರು. ಇಂಥ ಸೂಕ್ಷ್ಮಗಳನ್ನು ಬೋಧಕರು ಗಮನಿಸಬೇಕು. ಕಾವ್ಯವನ್ನು ಸಹ ರಸಾಸ್ಪಾದದ ಮೂಲಕವೇ ತಲುಪಿಸುವುದು ಜಾಣತನ.”

Read More

ಕಥನಗಾರಿಕೆಯ ಬೈನಾಕ್ಯುಲರ್ ನಲ್ಲಿ ಕಂಡ ಗತ ಮತ್ತು ವರ್ತಮಾನಗಳು:ವಿಕ್ರಮ್ ಕಥೆಗಳ ಕುರಿತು ಗೀತಾ ವಸಂತ

ಹಮಾರಾ ಬಜಾಜ್ ನ ಕತೆಗಳಲ್ಲಿ ಅಸ್ತಿತ್ವ ಶೋಧದ ಆಯಾಮವು ಅಂತರಗಂಗೆಯಂತೆ ಒಳಗೊಳಗೇ ಹರಿಯುತ್ತ ಎಲ್ಲ ಕತೆಗಳನ್ನು ಒಂದು ಹರಿವಿನಲ್ಲಿ ಬೆಸೆಯುತ್ತದೆ. ದೇಹ, ಪ್ರಜ್ಞೆಗಳಲ್ಲಿ ಯಾವುದು ನಿಜ ಎಂಬ ತೊಡಕುಗಳನ್ನು ಅನುಭವಿಸುತ್ತಲೇ ಅದನ್ನು ನಿಧಾನವಾಗಿ ಬಿಡಿಸುವ ತರ್ಕದ ನಾಜೂಕು ಹೆಣಿಗೆಯನ್ನು ಕತೆಗಳು ನಿರ್ಮಿಸುತ್ತವೆ. ದೇಹದ ಐಂದ್ರಿಕ ಅನುಭವಗಳನ್ನು ಕಾಮದ ಮೂಲಕ ಶೋಧಿಸುವ ಕತೆಗಳು ಪ್ರಜ್ಞೆಯ ಅನುಭವವನ್ನು ವಿಶ್ಲೇಷಿಸಲು ತರ್ಕದ ಮೊರೆ ಹೋಗುತ್ತವೆ.

Read More

ಗೀತಾ ವಸಂತ ಬರೆದ ಈ ದಿನದ ಕವಿತೆ

ಎದ್ದು ಹೋದವನ
ಕಳ್ಳಹೆಜ್ಜೆಗಳ ಉಲಿಯೂ
ಕಿವಿದೆರೆಗಳ ದಾಟಿ ಒಳಗಿಳಿದಿದೆ.
ತಳಮಳದ ತಳವೊಡೆದು
ನೋವಿನ ಆಲಾಪಗಳು ಹೆದ್ದೆರೆಗಳಾಗಿ
ಎದ್ದೆದ್ದು ಅಪ್ಪಳಿಸುತಿವೆ…… ಗೀತಾ ವಸಂತ ಬರೆದ ದಿನದ ಕವಿತೆ

Read More

ಹೆಣ್ತನದ ದೇಸಿ ನೆಲೆಗಳಲ್ಲಿ ಸಂಚರಿಸಿರುವ ಕಾವ್ಯದ ತಾಜಾ ಕಸುವು

“ಹೆಣ್ತನದ ವಿಕಾಸವನ್ನು ವಿಶ್ವದ ವಿಕಾಸದ ಭಾಗವಾಗಿ ಗುರುತಿಸುವ ನೋಟವೊಂದು ಇಲ್ಲಿನ ಕವಿತೆಗಳಿಗೆ ಸಿದ್ಧಿಸಿದೆ. ಈ ನೋಟದ ಮುಂದೆ ಇತಿಹಾಸ, ಪುರಾಣ ಕಾವ್ಯಗಳಲ್ಲಿ ಗಂಡು ಹೆಣ್ಣಿನ ಕುರಿತು ಕಟ್ಟಿದ ಪರಿಕಲ್ಪನೆಗಳೆಲ್ಲಾ ಬಿದ್ದುಹೋಗುತ್ತವೆ. ಅಂಥ ಬಯಲೊಂದನ್ನುಇಲ್ಲಿನ ಕವಿತೆಗಳು ಕಾಣಿಸುತ್ತಿವೆ. ಶಾಕ್ತ ಸ್ತ್ರೀ ಪರಂಪರೆಯ ಆದಿಮ ಸಂವೇದನೆಯನ್ನು ಸಾಂದ್ರವಾಗಿ ಚಿತ್ರಿಸುವ ಬಗೆಯಿಂದಾಗಿ ಊರ ಹಬ್ಬ, ಉರಿಮಾರಿ ಕವಿತೆಗಳು ಗಮನಾರ್ಹವಾಗಿ ಕಾಣುತ್ತವೆ.”

Read More

ವೈದೇಹಿಯವರ ಕಾಲುದಾರಿಯ ಕಥನಗಳು ಮತ್ತು ಕಾಡುವ ಕಥಾಪಾತ್ರಗಳು

ಹದಿಹರೆಯದ ದಿನಗಳಲ್ಲಿ ಓದಿನ ಕಿಚ್ಚುಹಚ್ಚಿದವರು ವೈದೇಹಿ.ಹಾಗೆ ಅವರು ಒಂದಷ್ಟು ಪಾತ್ರಗಳನ್ನು ಎದೆಯಲ್ಲಿ ಊರಿಬಿಟ್ಟರು. ಅವುಗಳ ಒಡಲ ಉರಿ ಒಳಗೊಳಗೇ ಸದಾ ಉರಿಯುತ್ತ ಪ್ರಖರ ಸಂವೇದನೆಯೊಂದನ್ನು ರೂಪಿಸಿದ್ದು ಸುಳ್ಳಲ್ಲ ಆ ಪಾತ್ರಗಳಾದರೂ ಎಂಥವು? ಅಕ್ಕು, ಅಮ್ಮಚ್ಚಿ, ಸಿರಿ, ಸೌಗಂಧಿ, ಕಮಲಾವತಿ, ಸುಬ್ಬಕ್ಕ ಇಂಥವೇ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ